ಸ್ವಾತಂತ್ರ್ಯ ದಿನಾಚರಣೆ ಸಜ್ಜುಗೊಂಡಿದೆ ಉಡುಪಿ ಜಿಲ್ಲೆ
Team Udayavani, Aug 15, 2019, 7:16 AM IST
ಉಡುಪಿ: 73ನೇ ಸ್ವಾತಂತ್ರ್ಯೋತ್ಸವಕ್ಕೆ ಉಡುಪಿ ಜಿಲ್ಲೆ ಸಜ್ಜಾಗಿದೆ. ಈಗಾಗಲೇ ಉಡುಪಿ ಬೀಡಿನಗುಡ್ಡೆಯಲ್ಲಿರುವ ಗಾಂಧೀ ಮೈದಾನದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮೂರು ದಿನಗಳಿಂದ ಪೂರ್ವ ಸಿದ್ಧತೆಗಳು ನಡೆಯುತ್ತಿದೆ. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಧ್ವಜಾರೋಹಣ ನಡೆಸಲಿದ್ದಾರೆ.
ಮೊದಲು ಜಿಲ್ಲಾ ಕಚೇರಿಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಅನಂತರ ಅಜ್ಜರಕಾಡಿನಲ್ಲಿರುವ ಹುತ್ಮಾತ್ಮರ ಸ್ಮಾರಕದ ಬಳಿ ಧ್ವಜಾರೋಹಣಗೊಂಡ ಬಳಿಕ ಜಿಲ್ಲಾಧಿಕಾರಿಗಳು ಬೀಡಿನಗುಡ್ಡೆಗೆ ಆಗಮಿಸಿ ಧ್ವಜಾರೋಹಣ ಮಾಡಿ ಜಿಲ್ಲೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ನಗರದ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿದ್ದು, ಪೊಲೀಸ್ ಪಡೆ, ಗೃಹರಕ್ಷಕ ಪಡೆ, ಸ್ಕೌಡ್ಸ್ ಗೈಡ್ಸ್, ಎನ್ಸಿಸಿ ಸೇರಿದಂತೆ ಒಟ್ಟು 28 ತಂಡಗಳು ಪಥಸಂಚಲನದಲ್ಲಿ ಭಾಗವಹಿಸಲಿವೆ. ಇನ್ನು ಎಸ್.ಎಲ್.ಸಿ, ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಈ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಿ, ಸಮ್ಮಾನಿಸಲಾಗುವುದು.
ನೆರೆ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನವನ್ನು ಸರಳವಾಗಿ ಆಚರಿಸಲಾಗುತ್ತದೆ. ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ಕಡಿಮೆಗೊಳಿಸಲಾಗಿದೆ.
ಜಿಲ್ಲಾ ಎಸ್ಪಿ ನಿಶಾ ಜೇಮ್ಸ್ ಖುದ್ದು ಸ್ಥಳದಲ್ಲಿ ಇದ್ದು, ಎಲ್ಲ ಕೆಲಸ ಕಾರ್ಯಗಳನ್ನು ನೋಡಿಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ