4 ತಿಂಗಳಿನಿಂದ ಪಾವತಿಯಾಗದ ಇಂದಿರಾ ಕ್ಯಾಂಟೀನ್‌ ಬಿಲ್‌


Team Udayavani, Aug 20, 2019, 5:00 AM IST

3805IMG-20190814-WA0017

ವಿಶೇಷ ವರದಿ-ಉಡುಪಿ: ಬಡವರಿಗೆ ಕಡಿಮೆ ಬೆಲೆಯಲ್ಲಿ ಆಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾರಂಭಿಸಿದ ಜಿಲ್ಲೆಯ ಇಂದಿರಾ ಕ್ಯಾಂಟೀನ್‌ಗಳಿಗೆ ಕಳೆದ ನಾಲ್ಕು ತಿಂಗಳಿನಿಂದ ಬಿಲ್‌ ಪಾವತಿಯಾಗಿಲ್ಲ.

2018ರಲ್ಲಿ ಉಡುಪಿ, ಕುಂದಾಪುರ, ಮಣಿಪಾಲ, ಕಾರ್ಕಳದಲ್ಲಿ ತಲಾ ಒಂದರಂತೆ 4 ಇಂದಿರಾ ಕ್ಯಾಂಟೀನ್‌ ತೆರೆಯಲಾಗಿದೆ. ಎರಡು ವರ್ಷಗಳ ಅವಧಿಗೆ ಬೆಂಗಳೂರಿನ ಸಂಸ್ಥೆಯೊಂದಕ್ಕೆ ಗುತ್ತಿಗೆ ನೀಡಿದ್ದು, ಪ್ರಾರಂಭದಲ್ಲಿ ಸರಿಯಾದ ಸಮಯಕ್ಕೆ ಬಿಲ್‌ ಪಾವತಿಯಾಗಿತ್ತು. ಇದೀಗ ಕಳೆದ ನಾಲ್ಕು ತಿಂಗಳಿನಿಂದ ಸರಿಯಾದ ಸಮಯಕ್ಕೆ ಬಿಲ್‌ ಪಾವತಿಯಾಗುತ್ತಿಲ್ಲ.

40 ಲ.ರೂ. ಮೊತ್ತದ ಬಿಲ್‌ ಬಾಕಿ
ಉಡುಪಿ ಹಾಗೂ ಮಣಿಪಾಲದ ಇಂದಿರಾ ಕ್ಯಾಂಟೀನ್‌ ಅಕ್ಟೋಬರ್‌ನಲ್ಲಿ ಪ್ರಾರಂಭವಾಗಿದೆ. ಕುಂದಾಪುರ, ಕಾರ್ಕಳದಲ್ಲಿ ನವೆಂಬರ್‌ 2018ರಲ್ಲಿ ಪ್ರಾರಂಭವಾಗಿದ್ದು ಫೆಬ್ರವರಿ ವರೆಗೆ ಬಿಲ್‌ ಪಾವತಿಯಾಗಿದೆ. ನಾಲ್ಕು ಕ್ಯಾಂಟೀನ್‌ನಲ್ಲಿ ಸುಮಾರು 40 ಲ.ರೂ. ವರೆಗೆ ಬಿಲ್‌ ಬಾಕಿಯಿದೆ. ನಾಲ್ಕೂ ಕ್ಯಾಂಟೀನ್‌ಗಳ ಎರಡು ತಿಂಗಳ ಬಿಲ್‌ ಪಾವತಿಗೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಹಣ ಪಾವತಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಂದಾಪುರ ಕ್ಯಾಂಟೀನ್‌ನ ಎರಡು ತಿಂಗಳ ಬಿಲ್‌ ಇನ್ನೂ ನಗರಾಭಿವೃದ್ಧಿ ಕೋಶಕ್ಕೆ ಹೋಗಿಲ್ಲ.

ಕಡಿಮೆ ಬೆಲೆಗೆ ಉಪಾಹಾರ
ಇಂದಿರಾ ಕ್ಯಾಂಟೀನ್‌ನಲ್ಲಿ ಗ್ರಾಹಕರಿಗೆ 5 ರೂ.ಗೆ ಉಪಾಹಾರ ಹಾಗೂ 10 ರೂ.ಗೆ ಊಟ ನೀಡಲಾಗುತ್ತಿದೆ. ನಗರಾಭಿವೃದ್ಧಿ ಕೋಶ ಉಪಾಹಾರಕ್ಕೆ 11.66 ರೂ. ಮತ್ತು ಊಟಕ್ಕೆ 23.33 ರೂ. ನಂತೆ ಗುತ್ತಿಗೆದಾರರ ಮೊತ್ತವನ್ನು ಭರಿಸುತ್ತಿದೆ. ಆಯಾ ತಾಲೂಕು ನೋಡಲ್‌ ಅಧಿಕಾರಿಗಳು ಬಿಲ್‌ಗ‌ಳನ್ನು ನಗರಾಭಿವೃದ್ಧಿ ಕೋಶಕ್ಕೆ ಸಲ್ಲಿಸಿದ ಅನಂತರ ಜಿಲ್ಲಾಧಿಕಾಗಳು ಅಂಕಿತ ನೀಡಬೇಕು.

ಉಡುಪಿ-ಕುಂದಾಪುರ
ಉತ್ತಮ ಸ್ಪಂದನೆ
ಉಡುಪಿ ಕ್ಯಾಂಟೀನ್‌ನಲ್ಲಿ ಪ್ರತಿನಿತ್ಯ ಬೆಳಗ್ಗೆ 300, ರವಿವಾರ 150-250 ಮಂದಿ ಉಪಾಹಾರ ಸೇವಿಸುತ್ತಾರೆ. ಮಧ್ಯಾಹ್ನ 400 ಮಂದಿ ಊಟ ಮಾಡುತ್ತಾರೆ. ಸಾಯಂಕಾಲ 120ರಿಂದ 130 ಮಂದಿ ಊಟ ಮಾಡುತ್ತಾರೆ. ಮಣಿಪಾಲದಲ್ಲಿ ಬೆಳಗ್ಗೆ 200 ಮಂದಿ ಉಪಾಹಾರ, ಮಧ್ಯಾಹ್ನ 300ಮಂದಿ ಹಾಗೂ ರಾತ್ರಿ ಊಟ 150 ಮಂದಿ ಊಟ ಮಾಡುತ್ತಾರೆ. ಕುಂದಾಪುರದಲ್ಲಿ ಬೆಳಗ್ಗೆ 300 ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ತಲಾ 300 ಮಂದಿ ಊಟ ಮಾಡುತ್ತಾರೆ.

ಒತ್ತಡ ತಂತ್ರ
ಅಧಿಕಾರಿಗಳಿಂದ ಇಂದಿರಾ ಕ್ಯಾಂಟೀನ್‌ಗೆ ಜಿಲ್ಲಾಡಳಿತ ನಿಗದಿ ಪಡಿಸಿದ ಗುರಿಯನ್ನು ಕಡಿತಗೊಳಿಸುವಂತೆ ಒತ್ತಡ ಬರುತ್ತಿದೆ. ಇತರೆ ಹೊಟೇಲ್‌ಗ‌ಳು ಅಧಿಕಾರಿಗಳಿಗೆ ಗುರಿ ಕಡಿಮೆ ಮಾಡುವಂತೆ ಒತ್ತಾಯ ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಂತ್ರಿಕ ಕಾರಣ
ತಾಂತ್ರಿಕ ಕಾರಣದಿಂದ ಬಿಲ್‌ಗ‌ಳನ್ನು ಕಳುಹಿಸಲು ತಡವಾಗಿದೆ. ಕುಂದಾಪುರದಲ್ಲಿ ಕ್ಯಾಂಟೀನ್‌ನಲ್ಲಿ ನೀಡಿರುವ ಗುರಿಗಿಂತ ಕಡಿಮೆ ಊಟ ಹೋಗುತ್ತಿದೆ. ಆದರೆ ಬಿಲ್‌ ಮಾಡುವಾಗ ಸರಕಾರ ನಿಗದಿ ಮಾಡಿದ ಗುರಿಯನ್ನು ತೋರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 2 ತಿಂಗಳ ಬಿಲ್‌ಗ‌ಳನ್ನು ಸಂಪೂರ್ಣ ಪರಿಶೀಲನೆ ನಡೆಸಿದ ಅನಂತರ ಬಿಲ್‌ ಮಂಜೂರಾತಿಗೆ ಕಳುಹಿಸಲಾಗುತ್ತದೆ.
-ಗೋಪಾಲಕೃಷ್ಣ ಶೆಟ್ಟಿ,
ಪುರಸಭಾ ಮುಖ್ಯಾಧಿಕಾರಿ. ಕುಂದಾಪುರ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.