ವ್ಯಕ್ತಿಗಳ ಸ್ಥಿತಿ ಗಂಭೀರ: ವಾರಸುದಾರರಿಗೆ ಸೂಚನೆ
Team Udayavani, Jul 5, 2018, 2:00 PM IST
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಸಂಜೀವ ಶೆಟ್ಟಿ (66) ಮತ್ತು ಅಪರಿಚಿತ ವ್ಯಕ್ತಿಯೊಬ್ಬರ (50) ಸ್ಥಿತಿ ಚಿಂತಾಜನಕವಾಗಿದೆ. ವಾರಸುದಾರರಿದ್ದಲ್ಲಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾಸ್ಪತ್ರೆಯ ಪ್ರಕಟನೆ ತಿಳಿಸಿದೆ.