ಉಡುಪಿ: ಅ.1ರಿಂದ ಇಂದ್ರಾಳಿ ಸೇತುವೆ ರಸ್ತೆ ಕಾಮಗಾರಿ; ಘನ ವಾಹನಗಳಿಗೆ ಬದಲಿ ಮಾರ್ಗ
Team Udayavani, Sep 28, 2022, 8:52 PM IST
ಉಡುಪಿ: ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದ್ದ ಇಂದ್ರಾಳಿ ಸೇತುವೆ ರಸ್ತೆ (ರಾ. ಹೆ. 169ಎ) ಕಾಮಗಾರಿಗೆ ಕೊನೆಗೂ ಕಾಲ ಕೂಡಿ ಬಂದಿದೆ. ಅ.1ರಿಂದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ತಯಾರಿಗೆ ತಯಾರಿ ನಡೆಸಲಾಗಿದ್ದು, ಈ ಮಾರ್ಗದಲ್ಲಿ ಘನ ವಾಹನ ಸಂಚಾರಕ್ಕೆ ನಿಷೇಧ ಹೊರಡಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಅ.1ರಿಂದ 45 ದಿನಗಳವರೆಗೆ ಕಾರು, ದ್ವೀಚಕ್ರ ವಾಹನ, ಬಸ್ಸು ಹೊರತುಪಡಿಸಿ ಇತರೆ ಘನ ವಾಹನಗಳಿಗೆ (ಮಲ್ಟಿ ಎಕ್ಸೆಲ್ ಮಾದರಿಯ ವಾಹನಗಳು) ಪ್ರವೇಶವಿಲ್ಲ .
ಘನ ವಾಹನಗಳ ಬದಲಿ ಮಾರ್ಗ ಇಂತಿದೆ:
ಕುಂದಾಪುರ ಕಡೆಯಿಂದ- ಅಂಬಾಗಿಲು, ಪೆರಂಪಳ್ಳಿ, ಮಣಿಪಾಲ ರಸ್ತೆ. ಉಡುಪಿಯಿಂದ ಕಲ್ಸಂಕ-ಗುಂಡಿಬೈಲು, ಎ. ವಿ. ಬಾಳಿಗ ಆಸ್ಪತ್ರೆ ಮೂಲಕ ಮಣಿಪಾಲಕ್ಕೆ, ಕಾರ್ಕಳ, ಹಿರಿಯಡ್ಕದಿಂದ ಮಣಿಪಾಲ, ಪೆರಂಪಳ್ಳಿ, ಅಂಬಾಗಿಲು ಮೂಲಕ ಚಲಿಸಬೇಕು.
ಉಡುಪಿ-ಮಣಿಪಾಲ ಸಂಚರಿಸುವ ದ್ವಿಚಕ್ರ ವಾಹನ, ಕಾರು, ಬಸ್ಸು ಇಂದ್ರಾಳಿ ಸೇತುವೆ ಮೇಲೆ ಏಕಮುಖ ನಿರ್ಬಂಧಿತ ರೀತಿಯಲ್ಲಿ ಎಚ್ಚರಿಕೆಯಿಂದ ಚಲಿಸುವಂತೆ ಡಿಸಿ ಪ್ರಕಟನೆ ತಿಳಿಸಿದೆ.
ಉದಯವಾಣಿ ನಿರಂತರ ವರದಿ
ಇಂದ್ರಾಳಿ ರೈಲ್ವೆ ಸೇತುವೆ ರಸ್ತೆ ಅವ್ಯವಸ್ಥೆ ಬಗ್ಗೆ “ಉದಯವಾಣಿ ಸುದಿನ’ ನಿರಂತರ ವರದಿಗಳನ್ನು ಪ್ರಕಟಿಸಿ ಜಿಲ್ಲಾಡಳಿತವನ್ನು ಎಚ್ಚರಿಸಿತ್ತು. ಹೊಂಡ, ಗುಂಡಿಗಳಿಂದ ಕೂಡಿದ ರಸ್ತೆ ಮಳೆಗಾಲದಲ್ಲಿ ಕೆಸರಿನ ಸಮಸ್ಯೆ, ಬೇಸಗೆಯಲ್ಲಿ ಧೂಳಿನಿಂದ ತತ್ತರಿಸಿದ್ದ ಸವಾರರ ಬವಣೆಗಳನ್ನು ವಿಸ್ತೃತ ವರದಿ ಮೂಲಕ ಪ್ರಕಟಿಸಿ ಆಡಳಿತ ವ್ಯವಸ್ಥೆಯ ಗಮನ ಸೆಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ