ಮಲೇಷ್ಯಾದಲ್ಲಿ ಸೋಂಕು ಇಳಿಮುಖ

ಉಡುಪಿ ಮೂಲದ ರಾಮಕೃಷ್ಣ ಪ್ರಭು

Team Udayavani, May 3, 2020, 6:15 AM IST

ಮಲೇಷ್ಯಾದಲ್ಲಿ ಸೋಂಕು ಇಳಿಮುಖ

ಉಡುಪಿ: ಆಗ್ನೇಯ ಏಷ್ಯಾದಲ್ಲಿ ನೆಲೆಗೊಂಡ ಫೆಡರಲ್‌ ಸಾಂವಿಧಾನಿಕ ರಾಜಪ್ರಭುತ್ವ ಹೊಂದಿರುವ ಮಲೇಷ್ಯಾಕ್ಕೂ ಕೋವಿಡ್‌ 19 ಸೋಂಕು ಹರಡಿದೆ. ಇಲ್ಲಿನ ವೈದ್ಯಕೀಯ ರಂಗ ಕ್ಷಿಪ್ರಗತಿಯ ಕಾರ್ಯಾಚರಣೆಯಿಂದ ನಿಯಂತ್ರಣದಲ್ಲಿದೆ. ಕಳೆದೊಂದು ವಾರದಿಂದ ಸೋಂಕು ಪ್ರಕರಣಗಳು ಇಳಿಮುಖಗೊಳ್ಳುತ್ತಿವೆ ಎಂದು ಕೌಲಾಲಂಪುರದಲ್ಲಿ ಐಟಿ ಉದ್ಯಮಿಯಾಗಿರುವ ಉಡುಪಿ ಮೂಲದ ರಾಮಕೃಷ್ಣ ಪ್ರಭು ಹೇಳುತ್ತಾರೆ.

ಮನೆಯ ಯಜಮಾನನಿಗೆ ಅವಕಾಶ
ದೂರವಾಣಿ ಮೂಲಕ ಅವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸಾರ್ವಜನಿಕ ನಿರ್ಬಂಧ, ಹೊರಗಡೆ ಚಲಿಸದಂತೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪಿಎಂಒ ಮಲೇಷ್ಯಾ ಲಾಕ್‌ಡೌನ್‌ ಆದೇಶ ಹೊರಡಿಸಿದೆ. ಲಾಕ್‌ಡೌನ್‌ ಅವಧಿ ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಇರುತ್ತದೆ. ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮನೆಯ ಯಜಮಾನ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಗತ್ಯ ವಸ್ತುಗಳಿಗೆ ಯಾವುದೇ ಸಮಸ್ಯೆಗಳಿಲ್ಲ. ಆದರೆ ಕಚೇರಿಗಳು, ಕೈಗಾರಿಕೆ ಇತ್ಯಾದಿಗಳು ಮುಚ್ಚಿವೆ.

ನಿಯಂತ್ರಣ ಉಲ್ಲಂಘಿಸುವಂತಿಲ್ಲ
ವಿದೇಶಿಯರಿಗೂ ಮನೆಯೊಳಗೆ ಇರುವಂತೆ ಷರತ್ತು ವಿಧಿಸಿದೆ. ಹೊರಗೆ ಬಂದವರಿಗೆ ದಂಡ ವಿಧಿಸಲಾಗುತ್ತದೆ. ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಬಿಟ್ಟು ಬೇರೆ ಯಾವುದಕ್ಕೂ ನಾವು ಹೊರಗೆ ಹೋಗಲು ಸಾಧ್ಯವಿಲ್ಲ. ಯಾರಾದರೂ ಆದೇಶವನ್ನು ಉಲ್ಲಂಘಿಸಿದರೆ ಪೊಲೀಸರು ಬಂಧಿಸಿ ದಂಡ ವಿಧಿಸುತ್ತಾರೆ.

ಸೋಂಕು ಇಳಿಮುಖ
ಜನರು ಸ್ವಯಂ ಜಾಗೃತಿ ಮೂಲಕ ಜನರು ಆರೋಗ್ಯ ಇಲಾಖೆ ಜತೆ ಕೈ ಜೋಡಿಸುತ್ತಿದ್ದಾರೆ. ಆರಂಭದಲ್ಲಿ ದಿನವೊಂದಕ್ಕೆ 500-600 ಪ್ರಕರಣಗಳು ಕಂಡುಬರುತ್ತಿದ್ದರೆ ವಾರದಿಂದ 200ರ ಆಸುಪಾಸಿಗೆ ಇಳಿದಿದೆ.

ಸಮಾವೇಶ ಇಲ್ಲಿಯೂ ನಡೆದಿತ್ತು
ದಿಲ್ಲಿ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದಿದ್ದ ತಬ್ಲಿ ಜಮಾಅತ್‌ ಸಮಾವೇಶ ಮಾದರಿಯಲ್ಲೇ ಮಲೇಷ್ಯಾ ರಾಜಧಾನಿ ಕೌಲಾಲಂಪುರದಲ್ಲಿಯೂ ಫೆ. 27ರಿಂದ ಮಾರ್ಚ್‌1ರ ವರೆಗೆ ತಬ್ಲಿ ಜಮಾತ್‌ ಸಮಾವೇಶ ನಡೆದಿತ್ತು. 1,500 ವಿದೇಶಿಯರ ಸಹಿತ 16,000 ಅನುಯಾಯಿಗಳು ಭಾಗವಹಿಸಿದ್ದರು. ಅನಂತರ ದೇಶದಲ್ಲಿ ಕೋವಿಡ್‌ 19 ಹೆಚ್ಚಳವಾಗಿದೆ ಅನ್ನುವುದನ್ನು ಜನ ಆಡಿಕೊಳ್ಳುತ್ತಿದ್ದರು. ಆದರೇ ಅದಕ್ಕೆ ಯಾವುದೇ ಪುರಾವೆಗಳಿಲ್ಲ.

ಕೆಟ್ಟ ಮೇಲೆ ಬುದ್ಧಿ
ಭಾರತದ ಬೃಹತ್‌ ಭೌಗೋಳಿಕ ಪ್ರದೇಶವನ್ನು ಗಮನಿಸಿದರೆ ನಾವು ಈ ಯುದ್ಧದಲ್ಲಿ ಉಳಿಯಲು ಭಾರೀ ಹೋರಾಟ ನಡೆಸಬೇಕಾಗುತ್ತದೆ. ಸೋಂಕು ಅಥವಾ ಸಾವು-ನೋವುಗಳ ವಿಷಯದಲ್ಲಿ ನಮ್ಮ ದೇಶದ ಮೇಲೆ ಇತರ ದೇಶಗಳಂತೆ ಪರಿಣಾಮ ಬೀರದ ಕಾರಣ ನಾವು ಅದೃಷ್ಟವಂತರು. ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ವ್ಯವಸ್ಥೆಗೊಳಿಸುವುದು ಕಷ್ಟ. ಜನರೇ ಸ್ವಯಂ ಜಾಗೃತರಾಗಬೇಕು. ಅರಿವು ಮೂಡಿಲ್ಲ ಎಂದಾದರೆ “ಕೆಟ್ಟ ಮೇಲೆ ಬುದ್ಧಿ’ ಅನ್ನುತ್ತಾರಲ್ಲ. ಹಾಗಾಗಲಿದೆ ನಮ್ಮ ಜನರ ಸ್ಥಿತಿ.
– ರಾಮಕೃಷ್ಣ ಪ್ರಭು,
ಮಲೇಷ್ಯಾ ಉದ್ಯೋಗಿ

ಟಾಪ್ ನ್ಯೂಸ್

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.