ಗಬ್ಬು ವಾಸನೆ, ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗ ಭೀತಿ

 ಉದ್ಯಾವರ: ಗುಡ್ಡೆಯಂಗಡಿ, ಮೇಲ್ಪೇಟೆ ಚರಂಡಿಯಲ್ಲಿ ಕೊಳಚೆ ನೀರು

Team Udayavani, Feb 8, 2022, 7:34 PM IST

ಗಬ್ಬು ವಾಸನೆ, ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗ ಭೀತಿ

ಕಟಪಾಡಿ: ಉದ್ಯಾವರ ಗ್ರಾ.ಪಂ. ವ್ಯಾಪ್ತಿಯ ಗುಡ್ಡೆಯಂಗಡಿ, ಮೇಲ್ಪೇಟೆ ಪರಿಸರದ ಮುಖ್ಯರಸ್ತೆಯ ಪಕ್ಕದ ನೀರು ಹರಿಯುವ ಚರಂಡಿಯಲ್ಲಿ ಕೊಳಚೆ ನೀರು ತುಂಬಿ ಪರಿಸರವು ದುರ್ನಾತ ಬೀರುತ್ತಿದೆ.

ರಸ್ತೆಯ ಅಭಿವೃದ್ಧಿಯ ಸಂದರ್ಭ ಕಾಂಕ್ರೀಟ್‌ ತೋಡು ಕೂಡ ನಿರ್ಮಿಸಿ ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದರೂ, ಇದೀಗ ಚರಂಡಿಯ ತುಂಬಾ ಕೊಳಚೆ ನೀರು ಸಂಗ್ರಹವಾಗಿ ಕೆಟ್ಟ ವಾಸನೆ ಮತ್ತು ಸಾಂಕ್ರಾಮಿಕ ರೋಗದ ಭೀತಿ ಇದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.
ಚರಂಡಿಯಲ್ಲಿ ನಿಂತಿರುವ ಮಲಿನ ನೀರು ಗಬ್ಬು ನಾರುತ್ತಿದ್ದು, ಮುಖ್ಯ ರಸ್ತೆಯಲ್ಲಿ ಸಂಚರಿಸುವ ಮಂದಿ ಮೂಗು ಮುಚ್ಚಿಕೊಂಡು ಹೋಗುವಂತಹ ದುಃಸ್ಥಿತಿ ನಿರ್ಮಾಣಗೊಂಡಿದೆ. ಕೊಳಚೆ ನೀರಿನಲ್ಲಿ ಹುಳ, ಸೊಳ್ಳೆಯು ಉತ್ಪತ್ತಿಗೊಳ್ಳುತ್ತಿದ್ದು, ಪರಿಸರದ ಮನೆ ಮಂದಿ, ವ್ಯಾಪಾರಸ್ಥರು, ವಿದ್ಯಾರ್ಥಿಗಳು, ಸಾರ್ವಜನಿಕರ ಆರೋಗ್ಯದ ಮೇಲೆ ಹಾಗೂ ಸ್ಥಳೀಯ ಕೆಲವು ಬಾವಿಯ ನೀರು ಕಲುಷಿತಗೊಂಡು ದುಷ್ಪರಿಣಾಮ ಬೀರುವ ಆತಂಕವನ್ನು ವ್ಯಕ್ತಪಡಿಸುತ್ತಿದ್ದಾರೆ.

ಪ್ರಾರ್ಥನಾಲಯಗಳು, ಐಟಿಐ, ಶಾಲೆ, ವ್ಯಾಪಾರಸ್ಥರು, ಶಾಲೆಯ ವಿದ್ಯಾರ್ಥಿಗಳು, ಸಾರ್ವಜನಿಕರು, ಬಸ್‌, ವಾಹನಗಳು ಸಂಚರಿಸುವ ಉದ್ಯಾವರದ ಪ್ರಮುಖ ರಸ್ತೆಯು ಇದಾಗಿದ್ದು, ಕೂಡಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ತೆರಳಿ ಪರಿಶೀಲನೆ
ಸಾರ್ವಜನಿಕರ ದೂರು ಬಂದಿದೆ. ಗುಡ್ಡೆಯಂಗಡಿ ಪಿಡಬ್ಲ್ಯುಡಿ ಸ್ಥಳದಲ್ಲಿ ಇರುವ ಮನೆಗಳಿಂದ ಚರಂಡಿಗೆ ಕೊಳಚೆ ನೀರು ಬಿಡುತ್ತಿದ್ದು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದೇವೆ. ಅವರಿಗೆ ಸೋಕ್‌ಪಿಟ್‌ ನಿರ್ಮಿಸುವಂತೆ ವಿನಂತಿಸಲಾಗಿದೆ. ನರೇಗಾ ಯೋಜನೆಯಡಿ ಸರಕಾರದ ಸಹಾಯಧನ ಒದಗಿಸುವ ಬಗ್ಗೆ ತಿಳಿಸಿದ್ದೇವೆ. ಸಾಂಕ್ರಾಮಿಕ ರೋಗದ ಬಗ್ಗೆಯೂ ಮಾಹಿತಿ ನೀಡಿದ್ದು, ಸ್ವತ್ಛತೆಯನ್ನು ಕಾಪಾಡಿಕೊಂಡು ಗ್ರಾ.ಪಂ. ಜತೆ ಕೈ ಜೋಡಿಸುವ ಬಗ್ಗೆ ತಿಳಿಸಲಾಗಿದೆ. ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುತ್ತದೆ.
-ಎಚ್‌.ಆರ್‌. ರಮೇಶ್‌, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಉದ್ಯಾವರ ಗ್ರಾ.ಪಂ.

ಸೂಕ್ತ ಕ್ರಮ
ವಸತಿ ಸಮುಚ್ಚಯದ ಕೊಳಚೆ ನೀರು ತೋಡಿಗೆ ಬಿಡುವ ಬಗ್ಗೆ ಈಗಾಗಲೇ ಎಚ್ಚರಿಕೆಯನ್ನು ನೀಡಲಾಗಿದೆ. ಗುಡ್ಡೆಯಂಗಡಿ ಪಿಡಬ್ಲ್ಯುಡಿ ಸ್ಥಳದಲ್ಲಿ ಇರುವ ಮನೆಗಳಿಂದ ಚರಂಡಿಗೆ ಕೊಳಚೆ ನೀರು ಬಿಡದಂತೆ ಸೂಚಿಸಲಾಗಿದೆ. ಮತ್ತೂ ಮುಂದುವರಿದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮವನ್ನು ಅನುಸರಿಸಲಾಗುತ್ತದೆ.
-ರಾಧಾಕೃಷ್ಣ ಶ್ರೀಯಾನ್‌, ಅಧ್ಯಕ್ಷರು, ಉದ್ಯಾವರ ಗ್ರಾ.ಪಂ.

ಸುವ್ಯವಸ್ಥೆ ಕಲ್ಪಿಸಿಲ್ಲ
ಸ್ಥಳೀಯ ವಸತಿ ಸಮುಚ್ಚಯದಿಂದ ಅಪಾರ ಪ್ರಮಾಣದ ಕೊಳಚೆ ನೀರು ಕಕ್ಕೆದಾರು ತೋಡಿನಲ್ಲಿ ಸಂಗ್ರಹಗೊಳ್ಳುತ್ತಿದೆ. ಈ ಬಗ್ಗೆ ಉದ್ಯಾವರ ಗ್ರಾ.ಪಂ. ಅಧ್ಯಕ್ಷರು, ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಸುವ್ಯವಸ್ಥೆ ಕಲ್ಪಿಸಿಲ್ಲ. ಪಕ್ಕದ ಕೆಲವು ಬಾವಿಗಳ ನೀರೂ ಕೂಡ ಕುಡಿಯಲು ಯೋಗ್ಯವಾಗಿಲ್ಲ. ಸ್ಥಳೀಯರು ನನ್ನ ಮನೆಯ ಬಾವಿಯ ನೀರು ಉಪಯೋಗಿಸುತ್ತಿದ್ದು, ನನ್ನ ಬಾವಿಯ ನೀರೂ ಕಲುಷಿತಗೊಂಡಲ್ಲಿ ಕೃಷಿಕನಾದ ನನಗೂ ತೊಂದರೆ ಆಗಲಿದೆ.
– ಪದ್ಮನಾಭ ಕಾಮತ್‌,
ಮೇಲ್ಪೇಟೆ, ಉದ್ಯಾವರ

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.