ಜೀವನಶೈಲಿ ಮೇಲೆ ಮಾಧ್ಯಮ ಪ್ರಭಾವದಿಂದ ಅಪಾಯ

"ಭಾರತೀಯ ಸಂಸ್ಕೃತಿ-ಸಂಪತ್ತು ಮತ್ತು ಮಾಧ್ಯಮ' ಗೋಷ್ಠಿಯಲ್ಲಿ ಸಂಧ್ಯಾ ಎಸ್‌. ಪೈ

Team Udayavani, Jun 1, 2019, 9:40 AM IST

udupi1

ಉಡುಪಿ: ಆಹಾರ ಕ್ರಮವೂ ಸೇರಿದಂತೆ ಇಂದಿನ ಜೀವನ ಶೈಲಿಯನ್ನು ಮಾಧ್ಯಮಗಳು ಪ್ರಭಾವಿಸುತ್ತಿವೆ. ಇದನ್ನು ನಿಯಂತ್ರಿಸದಿದ್ದರೆ ಮುಂದೆ ಅಪಾಯವಿದೆ ಎಂದು “ತರಂಗ’ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಎಸ್‌. ಪೈ ಅಭಿಪ್ರಾಯ ಪಟ್ಟಿದ್ದಾರೆ.

ಶ್ರೀಕೃಷ್ಣ ಮಠದಲ್ಲಿ ಸುವರ್ಣ ಗೋಪುರ ಸಮರ್ಪಣೋತ್ಸವ ಪ್ರಯುಕ್ತ ಶುಕ್ರವಾರ ಆಯೋಜಿಸ ಲಾಗಿದ್ದ “ಭಾರತೀಯ ಸಂಸ್ಕೃತಿ – ಸಂಪತ್ತು ಹಾಗೂ ಮಾಧ್ಯಮ’ ಕುರಿತ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅತ್ಯಂತ ಪ್ರಾಚೀನವಾದ ನಮ್ಮ ಸಂಸ್ಕೃತಿಯ ಚಿಗುರುಗಳು ಇಂದಿಗೂ ಹಾಸುಹೊಕ್ಕಾಗಿವೆ. ಕರುಣೆ, ಪ್ರೇಮ, ಔದಾರ್ಯ, ಆಹಾರ ಕ್ರಮ ನಮ್ಮ ಸಂಸ್ಕೃತಿಯ ಒಂದು ಭಾಗ. ಆದರೆ ಇಂದು ಉಡುಗೆ ತೊಡುಗೆ, ಆಹಾರ ಕ್ರಮಗಳು ಕೂಡ ಮಾಧ್ಯಮಗಳಿಂದ ಅದರಲ್ಲೂ ವಿಶೇಷವಾಗಿ ದೃಶ್ಯ ಮಾಧ್ಯಮಗಳಿಂದ ಪ್ರಭಾವಿತವಾಗಿವೆ. ನಿಜ ಜೀವನದಲ್ಲಿ ಇಲ್ಲದಿರುವ ವಿಕೃತವಾದ ಕೌಟುಂಬಿಕ ಸಂಬಂಧಗಳನ್ನು ಕಲ್ಪಿಸಿ ತೋರಿಸಲಾಗುತ್ತದೆ. ಇದರಿಂದ ಮನೆಯ ವಾತಾವರಣ ಕೆಡುವ ಅಪಾಯವೂ ಇದೆ. ಹೆಚ್ಚಿನ ದೃಶ್ಯಮಾಧ್ಯಮಗಳು ಬಹುರಾಷ್ಟ್ರೀಯ ಕಂಪೆನಿಗಳ ಹಿಡಿತದಲ್ಲಿವೆ. ಕೆಲವು ಮುದ್ರಣ ಮಾಧ್ಯಮಗಳು ರಾಜಕೀಯ ಪಕ್ಷಗಳ ನಿಯಂತ್ರಣದಲ್ಲಿವೆ ಎಂದು ಸಂಧ್ಯಾ ಪೈ ಹೇಳಿದರು.

ಭಾರತೀಯ ಸಂಸ್ಕೃತಿಯಿಂದ ಜಗತ್ತಿನಲ್ಲಿ ಶಾಂತಿ ಪ್ರಕಾಶ್‌ ಪಿ.ಎಸ್‌. ಬೆಂಗಳೂರು ಮಾತನಾಡಿ, “ಜನತೆ ಮಾಧ್ಯಮದ ಮೇಲೆ ನಂಬಿಕೆ ಇಟ್ಟಿದ್ದಾರೆ. ಭಾರತದ ಸಂಸ್ಕೃತಿ ಉಳಿದರೆ ಜಗತ್ತಿನಲ್ಲಿ ಶಾಂತಿ ಉಳಿಯುತ್ತದೆ. ಹಾಗಾಗಿ ಭಾರತೀಯ ಸಂಸ್ಕೃತಿಯನ್ನು ಉಳಿಸುವ ಜವಾಬ್ದಾರಿ ನಮ್ಮ ಮಾಧ್ಯಮಗಳಿಗಿದೆ. ಜನಕ್ಕೆ ಬೇಕು ಎಂಬ ಒಂದೇ ಕಾರಣಕ್ಕೆ ಸುದ್ದಿ /ಕಾರ್ಯಕ್ರಮಗಳನ್ನು ಕೊಡಬಾರದು. ಯಾವುದನ್ನು ಕೊಡಬೇಕು ಎಂಬ ವಿವೇಚನೆ ಮಾಧ್ಯಮ ಕ್ಕಿರಬೇಕು. ಮಾಧ್ಯಮಗಳು ಆಸ್ತಿ ಸಂಪಾದನೆಗೆ ಗಮನ ನೀಡುವ ಬದಲು ಮಾಧ್ಯಮಗಳೇ ದೇಶದ ಆಸ್ತಿಯಾಗಬೇಕು. ದೇಶದ ಸಂಸ್ಕೃತಿ ಉಳಿಸುವ ಕೆಲಸದಲ್ಲಿ ಮಾಧ್ಯಮಗಳು ಮುಂಚೂಣಿಯಲ್ಲಿರಬೇಕು’ ಎಂದು ಹೇಳಿದರು.

ಪತ್ರಕರ್ತ ಶೇಷ ಚಂದ್ರಿಕ ಅವರು ಮಾತನಾಡಿ, “ಮಾಧ್ಯಮಗಳಿಗೆ ಜನಾಭಿಪ್ರಾಯವೇ ಆಧಾರ. ಜನಾಭಿಪ್ರಾ ಯಕ್ಕೆ ವಿರುದ್ಧವಾಗಿ ಮಾಧ್ಯಮಗಳು ಹೋಗಬಾರದು’ ಎಂದರು.

ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಅಂಚೆ ಇಲಾಖೆ ಉಡುಪಿ ವಿಭಾಗದ ಸಹಾಯಕ ನಿರ್ದೇಶಕ ಅನಂತರಾಮ್‌, ಉಡುಪಿ ವಿಭಾಗದ ಅಧೀಕ್ಷಕ ಸುಧಾಕರ ದೇವಾಡಿಗ ಉಪಸ್ಥಿತರಿದ್ದರು.
ಅಂಚೆ ಲಕೋಟೆ ಬಿಡುಗಡೆ
ಸುವರ್ಣ ಗೋಪುರ ಸಮರ್ಪಣೆ ಪ್ರಯುಕ್ತ ಅಂಚೆ ಇಲಾಖೆ ಹೊರತಂದ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಲಾಯಿತು. ಬಿ.ಜಿ. ರವಿಕುಮಾರ್‌ ಬೆಂಗಳೂರು ಪ್ರಸ್ತಾವನೆಗೈದರು. ನಾಗರಾಜ ರಾವ್‌ ವರ್ಕಾಡಿ ಸ್ವಾಗತಿಸಿ, ಗೋಪಾಲ ಕೃಷ್ಣ ಪಾದೂರು ವಂದಿಸಿದರು. ವಿದ್ವಾಂಸ ಕೊರ್ಲಹಳ್ಳಿ ವೆಂಕಟೇಶ ಆಚಾರ್ಯ ಕಾರ್ಯಕ್ರಮ ನಿರ್ವ ಹಿಸಿದರು. ಹಿರಿಯ ಪತ್ರಕರ್ತ ದಾಮೋದರ ಐತಾಳ ಮತ್ತು ಶ್ರೀಕೃಷ್ಣ ಮಠದ ಮಾಧ್ಯಮ ವಿಭಾಗದ ಜನಾರ್ದನ ಆಚಾರ್ಯ ಅವರನ್ನು ಸಮ್ಮಾನಿಸಲಾಯಿತು.

ಸುದ್ದಿಗಾರರು – ಶುದ್ಧಿಗಾರರು
“ಮಾಧ್ಯಮಗಳು ಇರುವುದನ್ನು ಪ್ರಸಾರ ಮಾಡಬೇಕೇ ಹೊರತು ವ್ಯಾಪಾರೀಕರಣ ಉದ್ದೇಶದಿಂದ ಸುಳ್ಳು ಸುದ್ದಿ ಕೊಡಬಾರದು. ಪತ್ರಕರ್ತರು ಸುದ್ದಿಗಾರರಾಗುವ ಜತೆಗೆ ಶುದ್ಧಿಗಾರರೂ ಆಗಬೇಕು. ಒಳ್ಳೆಯ ಸುದ್ದಿಯನ್ನು ಜನರಿಗೆ ಮುಟ್ಟಿಸಬೇಕು’ ಎಂದು ಪರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.