ಇನ್ನಂಜೆ – ಹೇರೂರು : ರಸ್ತೆಗೆ ಇನ್ನೂ ಸಿಕ್ಕಿಲ್ಲ ಡಾಮರು ಭಾಗ್ಯ !


Team Udayavani, Feb 27, 2019, 1:00 AM IST

innanje.jpg

ಕಾಪು : ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ನಿರ್ಮಾಣಗೊಂಡಿರುವ ನಾಲ್ಕೂವರೆ ಕಿ.ಮೀ ಉದ್ದದ ಇನ್ನಂಜೆಯಿಂದ ಕಲ್ಲುಗುಡ್ಡೆ – ಹೇರೂರು ರಸ್ತೆಯ ನಡುವಿನ 120 ಮೀಟರ್‌ ರಸ್ತೆಗೆ ಡಾಮರು ಭಾಗ್ಯವಿಲ್ಲದೇ ಜಲ್ಲಿ ಹಾಕಿದ ಸ್ಥಿತಿಯಲ್ಲೇ ಉಳಿದುಬಿಟ್ಟಿದ್ದು ವಾಹನ ಸವಾರರು ಸುಗಮ ಸಂಚಾರಕ್ಕೆ ಪರದಾಡುವಂತಾಗಿದೆ. 

2014ರಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಈ ರಸ್ತೆ ನಿರ್ಮಾಣಗೊಂಡಿತ್ತು. ಆದರೆ ಈ ರಸ್ತೆಯು ಅರ್ಧದವರೆಗೆ ಸಾಗಿ ಬರುವಾಗ ಸಿಗುವ ರವೀಂದ್ರ ಶೆಟ್ಟಿ ಎಂಬವರ ಮನೆ ಬಳಿಯ 120 ಮೀಟರ್‌ ಉದ್ದದ ಪ್ರದೇಶದಲ್ಲಿ ಡಾಮರೀಕರಣ ನಡೆಸದೇ ಹಾಗೆಯೇ ಉಳಿಸಲಾಗಿತ್ತು. ರಸ್ತೆ ಪೂರ್ಣಗೊಂಡಿದ್ದರೂ, ಅದರ ನಿರ್ವಹಣಾ ಅವಧಿ ಮುಗಿದರೂ ಕೂಡಾ ಸಣ್ಣ ಅಂತರದ ಪ್ರದೇಶದಲ್ಲಿನ ಅಪೂರ್ಣ ಕಾಮಗಾರಿ ಮಾತ್ರಾ ಹಾಗೆಯೇ ಉಳಿದು ಹೋಗಿದೆ. 

ರಸ್ತೆ ಡಾಮರೀಕರಣಗೊಳ್ಳದ ಪರಿಣಾಮ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಹಾಕಲಾಗಿದ್ದ ಜಲ್ಲಿ ಕಲ್ಲುಗಳು ಕಿತ್ತು ಹೋಗಿ ಸಂಚಾರಕ್ಕೆ ಭಾರೀ ಅಪಾಯವನ್ನು ತಂದೊಡ್ಡಲಾರಂಭಿಸಿವೆ. ಸಣ್ಣ ಅಂತರದಲ್ಲಿನ ರಸ್ತೆಯ ಅಪೂರ್ಣ ಕಾಮಗಾರಿಯಿಂದಾಗಿ ದ್ವಿಚಕ್ರ ವಾಹನ ಸವಾರರ‌ಂತೂ ಬಹಳಷ್ಟು ಪರದಾಡುವಂತಾಗಿದೆ. ಮಳೆಗಾಲದಲ್ಲಿ ಹೊಂಡದ ಭೀತಿಯಾದರೆ, ಉಳಿದ ಸಮಯದಲ್ಲಿ ಧೂಳು ಮತ್ತು ಜಲ್ಲಿಗೆ ಹೆದರಿಕೊಂಡೇ ವಾಹನ ಚಲಾಯಿಸುವ ಅನಿವಾರ್ಯತೆ ಇಲ್ಲಿನ ಜನರದ್ದಾಗಿದೆ. 

ಡಾಮರೀಕರಣಕ್ಕೆ ತಡೆ ಯಾಕೆ ?  
ರಸ್ತೆ ಅಭಿವೃದ್ಧಿಯ ಸಂದರ್ಭ ಎಂಜಿನಿಯರ್‌ಗಳು ಮತ್ತು ಗುತ್ತಿಗೆದಾರರು ಎರಡೂ ಭಾಗದಲ್ಲಿ ಒಂದೇ ರೀತಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಸಿ ಒಂದು ಭಾಗದಲ್ಲಿ ಹೆಚ್ಚು, ಮತ್ತೂಂದು ಭಾಗದಲ್ಲಿ ಕಡಿಮೆ ಎಂಬಂತೆ ರಸ್ತೆ ಅಗೆಯಲಾಗಿತ್ತು. ಇದರಿಂದ ಕುಪಿತಗೊಂಡಿದ್ದ ಸ್ಥಳೀಯರಲ್ಲಿ ಒಂದು ಭಾಗದವರು ಕಾಮಗಾರಿಗೆ ಆಕ್ಷೇಪ ವ್ಯಕ್ತಪಡಿಸಿ, ಕಾಮಗಾರಿ ಮುಂದುವರಿಕೆಗೆ ತಡೆಯೊಡ್ಡಿದ್ದರು. ಆ ಕಾರಣದಿಂದ ಸುಮಾರು 120ಮೀಟರ್‌ ಉದ್ದದ ರಸ್ತೆಗೆ ಡಾಮರೀಕರಣಗೊಂಡಿರಲಿಲ್ಲ. 

ಗ್ರಾ.ಪಂ. ವತಿಯಿಂದ ತೇಪೆ ಕಾಮಗಾರಿ 
ಈ ರಸ್ತೆಯು ಮಧ್ಯ ಭಾಗದಲ್ಲಿ ಜಲ್ಲಿ ಮಿಶ್ರಿತವಾಗಿ ಹಾಗೆಯೇ ಉಳಿದು ಬಿಟ್ಟಿರುವುದನ್ನು ಸರಿಪಡಿಸಿಕೊಡುವಂತೆ ಸ್ಥಳೀಯರು ಹಲವು ಬಾರಿ ಗ್ರಾಮ ಪಂಚಾಯತ್‌ಗೆ ಒತ್ತಡ ಹೇರಿದ್ದರು. ಇದನ್ನು ಮನಗಂಡು ಗ್ರಾಮ ಪಂಚಾಯತ್‌ ವತಿಯಿಂದಲೂ ರಸ್ತೆಗೆ ತಾತ್ಕಲಿಕ ತೇಪೆ ಹಾಕುವ ಕಾಮಗಾರಿ ನಡೆಸಿದ್ದು, ಆದರೆ ತೇಪೆ ಕಾಮಗಾರಿ ಕೂಡಾ ಮಳೆಗಾಲದಲ್ಲಿ ಮತ್ತೆ ಮತ್ತೆ ಕಿತ್ತು ಹೋಗಿ ಸಂಚಾರಕ್ಕೆ ಮತ್ತಷ್ಟು ಅನಾನುಕೂಲತೆಯಾಗುತ್ತಿದೆ. 

ಶಾಸಕರ ಅನುದಾನದಿಂದ ರಸ್ತೆ ಅಭಿವೃದ್ಧಿಗೆ ಚಿಂತನೆ 
ರಸ್ತೆ ನಿರ್ಮಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದವರ ಜೊತೆಗೆ ಸ್ಥಳೀಯರನ್ನು ಸೇರಿಸಿಕೊಂಡು ಈಗಾಗಲೇ ಮಾತುಕತೆ ನಡೆಸಲಾಗಿದೆ. ಮಾತುಕತೆಯ ವೇಳೆ ರಸ್ತೆ ಪೂರ್ಣಗೊಳಿಸಲು ಸಹಕರಿಸಲುವುದಾಗಿ ಅವರು ಒಪ್ಪಿಗೆ ನೀಡಿದ್ದಾರೆ. ಅದಕ್ಕೆ ಅನುಗುಣವಾಗಿ ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರ ಬಳಿ ಅನುದಾನಕ್ಕಾಗಿ ಮನವಿ ಮಾಡಲಾಗಿದ್ದು, ಅವರು 3 ಲಕ್ಷ ರೂ. ಅನುದಾನವನ್ನು ಒದಗಿಸಿದ್ದಾರೆ. ರಸ್ತೆ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಈಗಾಗಲೇ ಇಂಜಿನಿಯರ್‌ ಅವರ ಮೂಲಕ ತಾಂತ್ರಿಕ ಮಂಜೂರಾತಿಗೆ ಹೋಗಿದ್ದು, ತಾಂತ್ರಿಕ ಮಂಜೂರಾತಿ ದೊರಕಿದ ಕೂಡಲೇ ಕಾಮಗಾರಿ ಪ್ರಾರಂಭಗೊಳ್ಳಲಿದೆ. 
-ಮಾಲಿನಿ ಶೆಟ್ಟಿ , ಉಪಾಧ್ಯಕ್ಷರು, ಇನ್ನಂಜೆ ಗ್ರಾಮ ಪಂಚಾಯತ್‌
 

ಟಾಪ್ ನ್ಯೂಸ್

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.