ಹಿರಿಯ ನಾಗರಿಕರ ರಕ್ಷಕರಿಗೆ ಅಭದ್ರತೆ 


Team Udayavani, Jan 22, 2019, 12:50 AM IST

senior.jpg

ಉಡುಪಿ: ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಶಕ್ತೀಕರಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ “ಹಿರಿಯ ನಾಗರಿಕರ ಸಹಾಯವಾಣಿ’ಗೆ ಆರು ತಿಂಗಳುಗಳಿಂದ ಅನುದಾನ ಬಿಡುಗಡೆಯಾಗಿಲ್ಲ. ಹಾಗಾಗಿ ಅದರ ಅಧಿಕಾರಿ, ಸಿಬಂದಿಗೆ ವೇತನವೂ (ಗೌರವಧನ) ಸಿಗುತ್ತಿಲ್ಲ.

ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿ ಜಿಲ್ಲಾ ವ್ಯಾಪ್ತಿಯನ್ನು ಹೊಂದಿದೆ. ಇದನ್ನು ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ನಿರ್ವಹಿಸುತ್ತಿದೆ. ಮೂವರು ಅಪ್ತಸಮಾಲೋಚಕರು, ಸೂಪರ್‌ವೈಸರ್‌ ಮತ್ತು ಕೋ-ಆರ್ಡಿನೇಟರ್‌ ಇಲ್ಲಿದ್ದಾರೆ. ದಿನನಿತ್ಯ ಹತ್ತಾರು ಪ್ರಕರಣಗಳನ್ನು ನಿಭಾಯಿಸಲಾಗುತ್ತದೆ.

ನಿರಂತರ ಕೆಲಸ 
ಅಸಹಾಯಕ, ಅನಾಥ ಹಿರಿಯ ನಾಗರಿಕರನ್ನು ಪತ್ತೆಹಚ್ಚಿ ಆಪ್ತಸಮಾಲೋಚನೆ ನಡೆಸುವ, ಚಿಕಿತ್ಸೆ ಕೊಡಿಸುವ, ಮನೆಯವರ ಪತ್ತೆಯಾದರೆ ಕರೆಯಿಸಿ ಕೌನ್ಸೆಲಿಂಗ್‌ ನಡೆಸುವ, ಅಗತ್ಯ ಬಿದ್ದರೆ ವೃದ್ಧಾಶ್ರಮಕ್ಕೆ ಸೇರ್ಪಡೆಗೊಳಿಸುವ ಕೆಲಸವನ್ನು ಕೂಡ ಸಹಾಯವಾಣಿ ಸಿಬಂದಿ ಮಾಡುತ್ತಾರೆ. ಸಾರ್ವಜನಿಕರಿಗೆ ಮಾಹಿತಿ, ಜಾಗೃತಿ ಶಿಬಿರಗಳ ಮೂಲಕ ಕಾಳಜಿ ಮೂಡಿಸುವ ಕೆಲಸಗಳು ಕೂಡ ನಡೆಯುತ್ತಿವೆ. ನಾನಾ ಕಾರಣಗಳಿಂದ ಬೀದಿಗೆ ಬೀಳುವ ಹಿರಿಯ ನಾಗರಿಕರ ಪಾಲಿಗೆ ಆಪದ್ಭಾಂಧವನಂತೆ ಇದು ಕಾರ್ಯನಿರ್ವಹಿಸುತ್ತ ಬಂದಿದೆ. ಆದರೆ ಈಗ ಗೌರವಧನ ಸಿಗದೆ ಸಹಾಯವಾಣಿ ಸಿಬಂದಿಯೇ ಅತಂತ್ರರಾಗಿದ್ದಾರೆ. 

ಎಸ್‌ಪಿ ಕಚೇರಿಯಲ್ಲಿ ಜಾಗವಿಲ್ಲ 
ಹಿರಿಯ ನಾಗರಿಕರ ಸಹಾಯವಾಣಿ ಎಸ್‌ಪಿ ಕಚೇರಿ ಅಥವಾ ಯಾವುದಾದರೊಂದು ಪೊಲೀಸ್‌ ಠಾಣೆ ಕಚೇರಿಯ ಜತೆಜತೆಗೆ ಕಾರ್ಯನಿರ್ವಹಿಸಬೇಕೆಂಬ ನಿಯಮವಿದೆ. ಆದರೆ ಉಡುಪಿಯಲ್ಲಿ ಇದು ಪ್ರಸ್ತುತ ರೆಡ್‌ಕ್ರಾಸ್‌ ಭವನದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸಹಾಯವಾಣಿಯನ್ನು ಸರಕಾರ, ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಎಸ್‌ಪಿ ಕಚೇರಿಯಲ್ಲಿಯೇ ಅವಕಾಶ ನೀಡುವಂತೆ ಕೋರಲಾಗಿತ್ತಾದರೂ ನೀಡಿಲ್ಲ. ಓಡಾಟಕ್ಕೆ ವಾಹನ ಕೇಳಲಾಗಿತ್ತು, ಅದೂ ಸಿಕ್ಕಿಲ್ಲ. ಈಗ ಅನುದಾನ ಕೂಡ ಬಿಡುಗಡೆ ಮಾಡಿಲ್ಲ ಎಂಬ ಅಸಹಾಯಕತೆ ಸಹಾಯವಾಣಿ ನಿರ್ವಹಿಸುತ್ತಿರುವ ಮಹಿಳಾ ಮಂಡಳಿಗಳ ಒಕ್ಕೂಟದ ಪದಾಧಿಕಾರಿಗಳದ್ದು. 

ಬೇರೆ ಜಿಲ್ಲೆಗಳಲ್ಲಿ ಇಂತಹ ಸಮಸ್ಯೆಗಳಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಯತ್ನಪಟ್ಟರೆ ಅನುದಾನ ದೊರೆಯಬಹುದು. ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿಗೆ ರಾಜ್ಯದಲ್ಲಿಯೇ ಉತ್ತಮ ಹೆಸರಿದೆ. ಆದರೆ ಈಗ ಇದನ್ನು ಮುಂದುವರಿಸುವುದು ಹೇಗೆಂಬ ಚಿಂತೆ ಕಾಡುತ್ತಿದೆ ಎಂದು ಸಿಬಂದಿ ಅಸಮಾಧಾನ ತೋಡಿಕೊಂಡಿದ್ದಾರೆ.

ಹಿರಿಯ ನಾಗರಿಕರ ರಕ್ಷಣೆಯ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಬರುತ್ತಿರುವ ಸಹಾಯವಾಣಿಯವರಿಗೆ ಗೌರವಧನ ದೊರೆಯದಿರುವುದನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದೇವೆ. ಸದ್ಯ ಅನುದಾನ ಬಾರದಿದ್ದರೂ ಇತರ ಅಗತ್ಯ ಖರ್ಚನ್ನು ಹೊಂದಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಗೌರವಧನ ಪಾವತಿ ಸಾಧ್ಯವಾಗುತ್ತಿಲ್ಲ. 
– ವಸಂತಿ ರಾವ್‌ ಕೊರಡ್ಕಲ್‌
ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ 

ಸರಕಾರಿ ಮಟ್ಟದಲ್ಲೇ ಆಗಬೇಕು
 ಇದು ಇಡೀ ರಾಜ್ಯದಲ್ಲಿರುವ ಸಮಸ್ಯೆ. ಇಲಾಖೆಯ ನಿರ್ದೇಶಕರಿಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಅನುದಾನ ಬರುವ ವರೆಗೆ ಒಕ್ಕೂಟದವರೇ ನಿರ್ವಹಿಸಬೇಕಾಗುತ್ತದೆ. ಕೆಲವೇ ದಿನಗಳಲ್ಲಿ ಅನುದಾನ ಬಿಡುಗಡೆಯಾಗುವ ಭರವಸೆ ದೊರೆತಿದೆ.
– ನಿರಂಜನ್‌,  ಹಿರಿಯ ನಾಗರಿಕರು ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ

– ಸಂತೋಷ್‌ ಬೊಳ್ಳೆಟ್ಟು 

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.