15 ವರ್ಷಗಳಿಂದ ಗ್ರಾಮಸ್ಥರಿಂದಲೇ ಹಲಗೆ ಅಳವಡಿಕೆ


Team Udayavani, Jan 28, 2021, 2:40 AM IST

15 ವರ್ಷಗಳಿಂದ ಗ್ರಾಮಸ್ಥರಿಂದಲೇ ಹಲಗೆ ಅಳವಡಿಕೆ

ವೇಣೂರು: ಗುಂಡೂರಿ ಗ್ರಾಮದ ಪೊಕ್ಕಿ ಬಳಿಯ ಬೆಟ್ಟು ಹಾಗೂ ಬಂಟ್ವಾಳ ತಾಲೂಕಿನ ಬಟ್ಟೇರಿ ಸಂಪರ್ಕದ ಕಿಂಡಿ ಅಣೆಕಟ್ಟಿಗೆ 15 ವರ್ಷಗಳಿಂದ ಉಭಯ ತಾಲೂಕಿನ ಗ್ರಾಮಸ್ಥರೇ ಹಲಗೆ ಅಳವಡಿಸಿ ಜಲ ಸಮೃದ್ಧಿಯ ಮಹತ್ವ ಕಾರ್ಯ ನಡೆಸುತ್ತಿದ್ದಾರೆ.

ಉಭಯ ತಾಲೂಕಿನ ಗ್ರಾಮಸ್ಥರ ಬೇಡಿಕೆ ಯಂತೆ 2005ರಲ್ಲಿ ಬಂಟ್ವಾಳ ಕ್ಷೇತ್ರದಿಂದ ಕಿಂಡಿ ಅಣೆಕಟ್ಟು ಮಂಜೂರುಗೊಂಡಿತ್ತು.ಅಂದಿನಿಂದ ನಿರಂತರ 15 ವರ್ಷಗಳಿಂದ ಸ್ಥಳೀಯ ಮುಖಂಡ ಹರೀಶ್‌ ಕುಮಾರ್‌ ನೇತೃತ್ವದಲ್ಲಿ 25ರಿಂದ 30 ಮಂದಿ ಗ್ರಾಮಸ್ಥರುಹಲಗೆ ಅಳವಡಿಸಿ ನೀರನ್ನು ಸಂಗ್ರಹಿಸುತ್ತಿದ್ದು, ಸರಕಾರಿ ವ್ಯವಸ್ಥೆಯನ್ನು ಉತ್ತಮವಾಗಿ ನಿರ್ವಹಣೆ ಮಾಡಿ ಬಳಕೆ ಮಾಡಿಕೊಂಡಿರುವುದು ಮಾದರಿ ಎನಿಸಿಕೊಂಡಿದೆ.

205 ಅಡಿ ಉದ್ದದ ಈ ಕಿಂಡಿ ಅಣೆಕಟ್ಟು 18 ಕಿಂಡಿಗಳನ್ನು ಹೊಂದಿದೆ. 2 ಕಿ.ಮೀ. ಉದ್ದಕ್ಕೆ ನೀರು ಸಂಗ್ರಹಗೊಳ್ಳುತ್ತಿದೆ. ಬೆಳ್ತಂಗಡಿ ತಾಲೂಕಿನ ಗುಂಡೂರಿ ಗ್ರಾಮದ ಪೊಕ್ಕಿ, ದರ್ಖಾಸು, ಹೇಡೆ¾, ಅಂಪುಂಗೇರಿ, ನಡುಕುಮೇರು, ಬಚ್ಚಿರ್‌ದಡ್ಡ, ಕಜೆ ಹಾಗೂ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬಟ್ಟೇರಿ, ಆನೆದಡ್ಡ, ತಾರಬರಿ, ಕುಜುಂಬೊಟ್ಟು, ಇನ್ನಿತರ ಗ್ರಾಮದ ಕೃಷಿಕರು ಪ್ರಯೋಜನ ಪಡೆಯುತ್ತಿದ್ದಾರೆ. ಬೇಸಿಗೆ ಬಂತೆಂದರೆ ಸಾಕು ನೀರಿನ ಕೊರತೆ ಎದುರಾಗುತ್ತಿದ್ದ ಈ ಪ್ರದೇಶದಲ್ಲಿ ಇದೀಗ ಅಂತರ್ಜಲ ವೃದ್ಧಿಯಿಂದ ಸುತ್ತ ಲಿನ ನೂರಾರು ಕುಟುಂಬಗಳ ಬಾವಿ, ಕೊಳವೆ ಬಾವಿಗಳಲ್ಲಿ ಉತ್ತಮ ನೀರಿದೆ.

ತಡೆಗೋಡೆ ಬೇಡಿಕೆ :

ಈ ಕಿಂಡಿ ಅಣೆಕಟ್ಟಿಗೆ ಬಂಟ್ವಾಳ ತಾ|ನ ಇಕ್ಕೆಲದಲ್ಲಿ ಕೃಷಿಭೂಮಿಗೆ ತೊಂದರೆಯಾಗದ ರೀತಿಯಲ್ಲಿ ಸುಮಾರು 1 ಕಿ.ಮೀ. ಉದ್ದದಲ್ಲಿ ತಡೆಗೋಡೆ ನಿರ್ಮಿಸಲಾಗಿದೆ. ಆದರೆ ಬೆಳ್ತಂಗಡಿ ತಾ|ನ ಇಕ್ಕೆಲದಲ್ಲಿ ತಡೆಗೋಡೆ ನಿರ್ಮಾಣ ಆಗಿಲ್ಲ. ಕೃಷಿ ಭೂಮಿಗೆ ತೊಂ ದರೆ ಆಗಿದೆ ಎಂಬುದು ರೈತರ ಅಳಲು.

ಹರೀಶ್‌ ಕುಮಾರ್‌ ಅವರ ಮುತುರ್ವಜಿಯಿಂದ 15 ವರ್ಷಗಳಿಂದ ನಿರಂತರ ಹಲಗೆ ಅಳವಡಿಸುತ್ತಿದ್ದೇವೆ. ಸಣ್ಣ ನೀರಾವರಿ ಇಲಾಖೆಯಿಂದ ಹಲಗೆ ಒದಗಿಸಿದ್ದು, ಇದೀಗ ಹಾಳಾಗಿರುವ ಹಲಗೆಗೆ ಬದಲು ಒದಗಿಸುವುದಾಗಿ ಎಂಜಿನಿಯರ್‌ ಪ್ರಸನ್ನ ಕುಮಾರ್‌ ಭರವಸೆ ನೀಡಿದ್ದಾರೆ ಎಂದು ಪ್ರಗತಿಪರ ಕೃಷಿಕ  ವಿಶ್ವನಾಥ ಕುಲಾಲ್‌ ತಾರಬರಿ ತಿಳಿಸಿದ್ದಾರೆ.

ಬೇರೆ ಕಡೆ ಪ್ರಸ್ತಾವ ಸಲ್ಲಿಕೆಯಾಗಿದ್ದ ಅಣೆಕಟ್ಟನ್ನು ಅಲ್ಲಿನ ಜನತೆಯ ವಿರೋಧದ ಹಿನ್ನೆಲೆಯಲ್ಲಿ ತನ್ನ ಪಟ್ಟಾ ಜಾಗದಲ್ಲಿ ದಿ| ಪದ್ಮ ಪೂಜಾರಿ ಹಾಗೂ ಬಟ್ಟೇರಿಯ ರಾಜವರ್ಮ ಬಳ್ಳಾಲ್‌ ಅವಕಾಶ ಮಾಡಿಕೊಟ್ಟಿರುವುದು ಪ್ರಯೋಜನ ಆಗಿದೆ ಎನ್ನುತ್ತಾರೆ ಸ್ಥಳೀಯರು.

ನದಿಯಲ್ಲಿ ಕಟ್ಟಗಳ ನಿರ್ಮಾಣದಿಂದ ಕೆಳಗಿನ ಭಾಗದ ಜನತೆಗೆ ನೀರು ಲಭಿಸುವುದಿಲ್ಲ ಎಂಬ ಅಪನಂಬಿಕೆ ಅನೇಕರಲ್ಲಿದೆ. ಆದರೆ ಹರಿದುಹೋಗುವ ನೀರನ್ನು ನಿಲ್ಲಿಸುವುದರಿಂದ ಕೆಳಭಾಗದ ಕೃಷಿಕರಿಗೂ ಬಹಳಷ್ಟು ಪ್ರಯೋಜನ ಆಗಲಿದೆ. ಸತತ ಮೂರು ವರ್ಷಗಳ ಕಟ್ಟ ನಿರ್ಮಾಣದ ಬಳಿಕ ಸ್ವತಃ ಕೃಷಿಕರಿಗೆ ಇದರ ಅನುಭವವಾಗುತ್ತದೆ.-ಹರೀಶ್‌ ಕುಮಾರ್‌ ಪೊಕ್ಕಿ, ಪ್ರಗತಿಪರ ಕೃಷಿಕ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.