ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಕಂಪೆನಿಯಿಂದ ಸಾವಿರ ಕೋಟಿಗೂ ಅಧಿಕ ಹೂಡಿಕೆ


Team Udayavani, Dec 31, 2022, 6:25 AM IST

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಕಂಪೆನಿಯಿಂದ ಸಾವಿರ ಕೋಟಿಗೂ ಅಧಿಕ ಹೂಡಿಕೆ

ಉಡುಪಿ : ರಾಷ್ಟ್ರೀಯ ಹಾಗೂ ಬಹುರಾಷ್ಟ್ರೀಯ ಸಂಸ್ಥೆಗಳ ಸಹಿತ 15 ಕಂಪೆನಿಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಾವಿರ ಕೋಟಿ ರೂ. ಗಳಿಗೂ ಅಧಿಕ ಬಂಡ ವಾಳ ಹೂಡಿಕೆ ಮಾಡಲು ಮುಂದಾಗಿವೆ.

ಇದರಿಂದ ಸುಮಾರು 6 ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ಲಭಿಸುವ ನಿರೀಕ್ಷೆಯಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಕೆಲವು ತೈಲೋತ್ಪನ್ನ ಕಂಪೆನಿಗಳು ಹೂಡಿಕೆ ಮಾಡಿವೆ. ಈಗ ಸಣ್ಣ ಮತ್ತು ದೊಡ್ಡ ಪ್ರಮಾಣದ ಕೈಗಾ ರಿಕೆಗಳು ಆಸಕ್ತಿ ತಾಳಿವೆ.

2019ರಿಂದ ಕರಾವಳಿ ಜಿಲ್ಲೆಗಳಲ್ಲಿ ಉದ್ಯಮ ಸ್ಥಾಪನೆ ಸಂಬಂಧ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ, ರಾಜ್ಯ ಮಟ್ಟದ ಏಕ ಗವಾಕ್ಷಿ ಅನುಮೋದನೆ ಸಮಿತಿಯು 16 ಯೋಜನೆ  ಗಳಿಗೆ ಅನುಮೋದನೆ ನೀಡಿದೆ. ಇದರಲ್ಲಿ 5 ಉಡುಪಿ, 15 ದ.ಕ. ಜಿಲ್ಲೆ ಹಾಗೂ 1 ಉತ್ತರ ಕನ್ನಡ ಜಿಲ್ಲೆಗೆ ಸೇರಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಕೈಗಾರಿಕೆ ಪ್ರದೇಶ, ಬೈಕಂಪಾಡಿ ಕೈಗಾರಿಕೆ ಪ್ರದೇಶ, ಗಂಜಿಮಠ ಕೈಗಾರಿಕೆ ಪ್ರದೇಶ, ಇಪಿಐಪಿ ಕೈಗಾರಿಕೆ ಪ್ರದೇಶ, ಎಂಎಸ್‌ಇಝಡ್‌ ಪ್ರದೇಶಗಳಲ್ಲಿ ಕೆಲವು ಸಂಸ್ಥೆಗಳು ಹೂಡಿಕೆಗೆ ಮನಸ್ಸು ಮಾಡಿದ್ದರೆ, ಇನ್ನು ಕೆಲವು ಕೈಗಾರಿಕೆ ಪ್ರದೇಶ ಹೊರತುಪಡಿಸಿ ಬೇರೆ ಪ್ರದೇಶದಲ್ಲೂ ಹೂಡಿಕೆಗೆ ಮುಂದಾಗಿವೆ.

ಉಡುಪಿಯ ನಂದಿಕೂರು ಕೈಗಾರಿಕೆ ಪ್ರದೇಶ 3, ನಡ್ಸಾಲ್ ನಲ್ಲಿ 1 ಹಾಗೂ ಕಾರ್ಕಳ ಕೈಗಾರಿಕೆ ಪ್ರದೇಶದಲ್ಲಿ ಒಂದು ಕಂಪೆನಿ ಹೂಡಿಕೆಗೆ ನಿರ್ಧರಿಸಿದೆ.

ದ.ಕ.ದಲ್ಲಿ 800 ಕೋ.ರೂ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ ಕಂಪೆನಿಯು 495 ಕೋಟಿ ರೂಪಾಯಿ ಹೂಡಿಕೆ ಮಾಡಲಿದ್ದು, ಸುಮಾರು 4,010 ಉದ್ಯೋಗಾವಕಾಶ ಕಲ್ಪಿಸುವ ಸಾಧ್ಯತೆಗಳಿವೆ. ಇನ್ನು ಬಿಗ್‌ಬ್ಯಾಗ್‌ ಕಂಪೆನಿಯು 70 ಕೋಟಿ ರೂಪಾಯಿ ಹೂಡಿಕೆ ಮಾಡಿ, ಒಂದು ಸಾವಿರ ಜನರಿಗೆ ಉದ್ಯೋಗ ನೀಡಲಿದೆ. ಫ್ಯಾಬ್‌ ಇಕೊ ಕ್ಲೀನ್‌ ಎನರ್ಜಿ ವೆಂಚರ್‌ ಕಂಪೆನಿಯ ವತಿಯಿಂದ 20 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗುತ್ತಿದ್ದು, 155 ಮಂದಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ. ಫಿನ್‌ಫ‌ವರ್‌ ಏರೋಕಾನ್‌ ಸಿಸ್ಟಮ್ಸ್‌ ಕಂಪೆನಿಯಿಂದ 17.35 ಕೋಟಿ ರೂಪಾಯಿಗಳಷ್ಟು ಬಂಡವಾಳ ಹೂಡಿಕೆಯಾಗಲಿದ್ದು, 120 ಮಂದಿಗೆ ಉದ್ಯೋಗ ಸಿಗಲಿದೆ. ಒಟ್ಟಾರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಉದ್ಯಮ ಸಂಸ್ಥೆಗಳು ಸುಮಾರು 805.99 ಕೋ.ರೂ. ಹೂಡಿಕೆ ಮಾಡಿ 5,786 ಮಂದಿಗೆ ಉದ್ಯೋಗ ಒದಗಿಸಲಿವೆ.

ಉಡುಪಿಯಲ್ಲೆಷ್ಟು?
ಉಡುಪಿ ಜಿಲ್ಲೆಯಲ್ಲಿ ಎಂ11 ಇಂಡಸ್ಟ್ರೀಸ್‌ 96 ಕೋ.ರೂ. ಹೂಡಿಕೆ ಮಾಡಿ 100 ಮಂದಿಗೆ ಉದ್ಯೋಗಾವಕಾಶ, ಶ್ರೀಚಕ್ರ ಕಂಟೈನರ್‌ 18.95 ಕೋ.ರೂ. ಹೂಡಿಕೆ ಮಾಡಿ 102 ಮಂದಿಗೆ ಉದ್ಯೋಗ -ಹೀಗೆ 5 ಸಂಸ್ಥೆಗಳಿಂದ ಸುಮಾರು 208.23 ಕೋ.ರೂ. ಹೂಡಿಕೆ ಮತ್ತು 359 ಮಂದಿಗೆ ಉದ್ಯೋಗ ಸಿಗಲಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಎರಡೂ ಜಿಲ್ಲೆಗಳಲ್ಲಿ 15 ಸಂಸ್ಥೆಗಳಿಂದ 1,014.22 ಕೋ.ರೂ. ಹೂಡಿಕೆಯಾಗಲಿದ್ದು, 6,145 ಮಂದಿಗೆ ಉದ್ಯೋಗ ಸಿಗಲಿದೆ. ಇದರಲ್ಲಿ ಕೆಲವು ಸಂಸ್ಥೆಗಳು ಈಗಾಗಲೇ ಕಾರ್ಯಾರಂಭ ಮಾಡಿವೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಆಕ್ಸಿಜನ್‌ ಆಧಾರಿತ ಕೈಗಾರಿಕೆಗಳು ಕರಾವಳಿ ಭಾಗಕ್ಕೆ ಬರಲಿವೆ ಎನ್ನಲಾಗಿತ್ತು. ಇದಕ್ಕೆ ಪೂರಕವಾಗಿ ಜಮೀನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಹೊಸ ಹೂಡಿಕೆಯಿಂದ ಸ್ಥಳೀಯವಾಗಿ ಒಂದಷ್ಟು ಉದ್ಯೋಗ ಸೃಷ್ಟಿಯಾಗಲಿದೆ.
-ನಾಗರಾಜ ವಿ. ನಾಯಕ್‌, ಜಂಟಿ ನಿರ್ದೇಶಕ, ಜಿಲ್ಲಾ ಕೈಗಾರಿಕೆ ಕೇಂದ್ರ, ಉಡುಪಿ

–  ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.