ಬೈಂದೂರು ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ
Team Udayavani, Feb 23, 2019, 12:30 AM IST
ಉಪ್ಪುಂದ: ಖಂಬದಕೋಣೆ ಸಂವೇದನಾ ಪದವಿ ಕಾಲೇಜಿನಲ್ಲಿ ಮಾ.2ರಂದು ನಡೆಯುವ ಬೈಂದೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಅವರನ್ನು ಜಿಲ್ಲಾ ಮತ್ತು ತಾ| ಕನ್ನಡ ಸಾಹಿತ್ಯ ಪರಿಷತ್ನ ಪದಾಧಿಕಾರಿಗಳು ಸಮ್ಮೇಳನಕ್ಕೆ ಆಮಂತ್ರಿಸಿದರು.
ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಸಾಹಿತ್ಯವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದರು.
ತಾಲೂಕು ಪರಿಷತ್ನ ಅಧ್ಯಕ್ಷ ಎಚ್, ರವೀಂದ್ರ, ಜಿಲ್ಲಾ ಪರಿಷತ್ನ ಗೌರವ ಕಾರ್ಯದರ್ಶಿ ಡಾ| ಸುಬ್ರಹ್ಮಣ್ಯ ಭಟ್, ತಾಲೂಕು ಗೌರವ ಕಾರ್ಯದರ್ಶಿಗಳಾದ ಪ್ರಕಾಶ ಹೆಬ್ಟಾರ್, ಗಣಪತಿ ಹೋಬಳಿದಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪುಂಡಲೀಕ ನಾಯಕ್, ಕೃಷ್ಣಗೋಪಾಲ ಹೆಬ್ಟಾರ್, ವಿ.ಎಚ್. ನಾಯಕ್, ಯು. ರಮೇಶ ವೈದ್ಯ, ಸಾಧನಾ ಸದಸ್ಯರಾದ ಸುಬ್ರಹ್ಮಣ್ಯ ಅವಭೃತ್, ದೇವಿದಾಸ ಶ್ಯಾನುಭಾಗ್, ಜತೀಂದ್ರ, ಡಾ| ರೂಪಶ್ರೀ, ಕೇದಾರ್ ಉಪಸ್ಥಿತರಿದ್ದರು.