ಐರೋಡಿ ದಂಡಬೆಟ್ಟು ರಸ್ತೆ: ಮಳೆಗಾಲದಲ್ಲೂ ಸಂಚಾರ ದುಸ್ತರ


Team Udayavani, Jun 4, 2019, 6:04 AM IST

as

ಕೋಟ: ಐರೋಡಿ ಗ್ರಾಮದ ದಂಡೆಬೆಟ್ಟು ಬಾಳ್ಕುದ್ರು ಸಂಪರ್ಕ ರಸ್ತೆಯಲ್ಲಿ ಸುಮಾರು 400 ಮೀ.ನಷ್ಟು ಅಭಿವೃದ್ಧಿ ಬಾಕಿ ಇದ್ದು ಪ್ರತಿ ಮಳೆಗಾಲದಲ್ಲಿ ಇಲ್ಲಿ ಸಂಚಾರ ದುಸ್ತರವಾಗುತ್ತದೆ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ ಎನ್ನುವುದು ಸ್ಥಳೀಯರ ಆರೋಪವಾಗಿದೆ.

ರಾಡಿಯಾಗುವ ರಸ್ತೆ
ಈ ರಸ್ತೆ ಐರೋಡಿ, ಬಾಳ್ಕುದ್ರು ಎರಡು ಗ್ರಾಮಸಂಪರ್ಕಿಸುವ ಕೊಂಡಿಯಾಗಿದೆ. ಸ್ಥಳೀಯ ನೂರಾರು ಮನೆಗಳವರು ಇಲ್ಲಿ ಸಂಚಾರ ನಡೆಸುತ್ತಾರೆ. ಹತ್ತು ವರ್ಷದ ಹಿಂದೆ ಡಾಮರು ಕಾಮಗಾರಿ ಆಗಿದ್ದು ಆಗ ಸುಮಾರು 400 ಮೀ.ನಷ್ಟು ಕಾಮಗಾರಿ ಬಾಕಿ ಉಳಿಸಲಾಗಿತ್ತು. ಅನಂತರ ಉಳಿದ ಕಾಮಗಾರಿ ಕೈಗೊಂಡಿಲ್ಲ. ಗದ್ದೆ ಹಾಗೂ ತೋಟದ ಮಧ್ಯ ರಸ್ತೆ ಹಾದು ಹೋಗುವುದರಿಂದ ಪ್ರತಿ ಮಳೆಗಾಲದಲ್ಲಿ ತೋಟ, ಗದ್ದೆಯ ನೀರು ನುಗ್ಗಿ ರಾಡಿಯಾಗುತ್ತದೆ. ನೀರು ನಿಂತು ಸಂಚಾರ ದುಸ್ತರವಾಗುತ್ತದೆ.

ಏಳು ಶಾಲಾ ಬಸ್‌ಗಳ ಸಂಚಾರ
ವಿವಿಧ ಶಾಲೆಗಳ ಸುಮಾರು ಏಳು ಬಸ್‌ಗಳು ಇಲ್ಲಿ ಸಂಚಾರ ನಡೆಸುತ್ತವೆ. ಆದರೆ ಮಳೆಗಾಲದಲ್ಲಿ ರಸ್ತೆ ಸಮಸ್ಯೆಯಿಂದ ಬಸ್‌ ಬರುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಪ್ರಯಾಸದಿಂದ ಶಾಲೆ ತಲುಪುತ್ತಾರೆ ಹಾಗೂ ರಿಕ್ಷಾ ,ಕಾರಿನವರು ಬಾಡಿಗೆಗೆ ಬರುವುದಿಲ್ಲ.

ಅಪಾಯದಲ್ಲಿದೆ ಕಾಂಕ್ರೀಟ್‌ ರಸ್ತೆ
ಈ ರಸ್ತೆಯ ಆರಂಭದಲ್ಲಿ ಧೂಳಂಗಡಿ ಶಾಲೆ ಯಿಂದ ಸ್ವಲ್ಪ ಮುಂದೆ ನಾಲ್ಕೈದು ವರ್ಷದ ಹಿಂದೆ ಕಾಂಕ್ರೀಟ್‌ ಕಾಮಗಾರಿ ಮಾಡಲಾಗಿದೆ. ಆದರೆ ಚರಂಡಿ ವ್ಯವಸ್ಥೆ ಹಾಗೂ ರಿವೀಟ್‌ಮೆಂಟ್‌ ಇಲ್ಲದಿರುವುದರಿಂದ ಮಳೆಗಾಲದಲ್ಲಿ ರಸ್ತೆ ಹಾಗೂ ಗದ್ದೆಯ ನೀರಿನ ಸೆಳೆತದಿಂದ ರಸ್ತೆಯ ಒಂದು ಭಾಗ ಕುಸಿಯುತ್ತಿದೆ. ಇದರಲ್ಲಿ ಶಾಲಾ ಬಸ್‌ ಮುಂತಾದ ಘನವಾಹನಗಳು ಸಂಚರಿಸುವುದರಿಂದ ರಿವೀಟ್‌ಮೆಂಟ್‌ ನಿರ್ಮಿಸದಿದ್ದಲ್ಲಿ ರಸ್ತೆ ಕುಸಿದು ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.

ಹಲವು ಬಾರಿ ಮನವಿ
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವ ಜನಿಕರು ರಸ್ತೆ ದುರಸ್ತಿಗೊಳಿಸುವಂತೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೆ ಮನವಿಗೆ ಸರಿಯಾದ ಪುರಸ್ಕಾರ ಸಿಕ್ಕಿಲ್ಲ ಎನ್ನುವುದು ಇಲ್ಲಿನ ನಿವಾಸಿಗಳ ಅಭಿಪ್ರಾಯ.

ಮಳೆಗಾಲದಲ್ಲಿ ಸಂಚಾರ ಕಷ್ಟ
ಪ್ರತಿ ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ನಿಂತು ರಾಡಿಯಾಗುತ್ತದೆ. ಇದರಿಂದಾಗಿ ಶಾಲಾ ಬಸ್ಸುಗಳು ಈ ರಸ್ತೆಗೆ ಬರುವುದಿಲ್ಲ ಹಾಗೂ ಮಕ್ಕಳು ಮೈ ಕೆಸರು ಮಾಡಿಕೊಂಡು ಶಾಲೆಗೆ ಹೋಗಬೇಕಿದೆ. ಈ ಕುರಿತು ಎಷ್ಟೇ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ.
-ರೆನಾಲ್ಡ್‌ ಲೂವೀಸ್‌,
ಸ್ಥಳೀಯ ನಿವಾಸಿ

ಪಂ. ಅನುದಾನದಲ್ಲಿ ಅಭಿವೃದ್ಧಿ ಅಸಾಧ್ಯ
ರಸ್ತೆ ದುರಸ್ತಿ ಗ್ರಾ.ಪಂ. ಅನುದಾನದಲ್ಲಿ ಸಾಧ್ಯವಿಲ್ಲ. ಹೀಗಾಗಿ ಸ್ಥಳೀಯ ಶಾಸಕರಿಗೆ ಪಕ್ಷಭೇದ ಮರೆತು ಮನವಿ ಮಾಡಿದ್ದೇವೆ ಹಾಗೂ ಹಲವು ಬಾರಿ ಗಮನಕ್ಕೆ ತಂದಿದ್ದೇವೆ. ಆದರೆ ಪ್ರಯೋಜನವಾಗಿಲ್ಲ. ರಸ್ತೆಯ ಆರಂಭದಲ್ಲಿ ಪಂಚಾಯತ್‌ ಅನುದಾನದಲ್ಲೇ ರಿವೀಟ್‌ಮೆಂಟ್‌ ಕಟ್ಟಲಾಗಿದೆ. ಇನ್ನೊಂದುಭಾಗಕ್ಕೆ ಹೆಚ್ಚಿನ ಅನುದಾನ ಅಗತ್ಯವಿರುವುದರಿಂದ ಕಾಮಗಾರಿ ಸಾಧ್ಯವಾಗಿಲ್ಲ. ಶಾಸಕರ ಬಳಿ ಇನ್ನೊಮ್ಮೆ ಮನವಿ ಸಲ್ಲಿಸಲಿದ್ದೇವೆ.
-ಆನಂದ ಗಾಣಿಗ, ಸ್ಥಳೀಯ ವಾರ್ಡ್‌ ಸದಸ್ಯರು, ಐರೋಡಿ ಗ್ರಾ.ಪಂ.

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.