ಅನಿಯಮಿತ ವಿದ್ಯುತ್‌ ವ್ಯತ್ಯಯ; ಗ್ರಾಮೀಣ ಜನತೆಗೆ ಸಮಸ್ಯೆ


Team Udayavani, Feb 16, 2023, 6:15 AM IST

ಅನಿಯಮಿತ ವಿದ್ಯುತ್‌ ವ್ಯತ್ಯಯ; ಗ್ರಾಮೀಣ ಜನತೆಗೆ ಸಮಸ್ಯೆ

ಉಡುಪಿ: ಉಭಯ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿತ್ಯವೂ ಪೂರ್ವಸೂಚನೆಯಿಲ್ಲದೇ ವಿದ್ಯುತ್‌ ನಿಲುಗಡೆಯಾಗುತ್ತಿದ್ದು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗುತ್ತಿದೆ.

ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತೀ ದಿನ 26 ಮಿಲಿಯ ಯುನಿಟ್‌ ವಿದ್ಯುತ್‌ ಅಗತ್ಯವಿದೆ. ಈ ಪೈಕಿ ಸುಮಾರು 4.50 ಮಿ. ಯುನಿಟ್‌ ಉಡುಪಿ ಜಿಲ್ಲೆಗೆ ಹಾಗೂ ಸುಮಾರು 7 ಮಿ. ಯುನಿಟ್‌ಗೂ ಅಧಿಕ ವಿದ್ಯುತ್‌ ದಕ್ಷಿಣ ಕನ್ನಡಕ್ಕೆ ಅಗತ್ಯವಿದೆ. ನಿತ್ಯ ಮೆಸ್ಕಾಂ ವ್ಯಾಪ್ತಿಗೆ ಬರುವ 25 ಮಿ. ಯುನಿಟ್‌ ವಿದ್ಯುತ್‌ ನಿರ್ದಿಷ್ಟ ಬೇಡಿಕೆಗಿಂತ ಕಡಿಮೆಯಿದೆ. ಈ ಅಸಮತೋಲನವನ್ನು ಸರಿದೂಗಿಸಲು ಅನಿವಾರ್ಯವಾಗಿ ವಿದ್ಯುತ್‌ ಕಡಿತ ಮಾಡಲಾಗುತ್ತಿದೆ.

ಗ್ರಾಮೀಣ ಭಾಗದಲ್ಲಿ ಸಮಸ್ಯೆ
ಉಡುಪಿ, ದ.ಕ. ಜಿಲ್ಲೆಯ ಹಲವು ಕಡೆಗಳಲ್ಲಿ ನಿತ್ಯವೂ ಸಂಜೆ ಅರ್ಧ ಗಂಟೆಯಿಂದ 1 ಗಂಟೆ ಕಾಲ ವಿದ್ಯುತ್‌ ಪೂರೈಕೆ ಸ್ಥಗಿತ ಮಾಡಲಾಗುತ್ತಿದೆ. ಗ್ರಾಮೀಣ ಜನ ಜೀವನದ ಮೇಲೆ ಇದು ನೇರ ಪರಿಣಾಮ ಬೀರುತ್ತದೆ. ವಿದ್ಯುತ್‌ ವ್ಯತ್ಯಯವಾಗುತ್ತಿರುವುದರಿಂದ ಮನೆಯಲ್ಲಿ ಆ ವೇಳೆ ಅಡುಗೆ ಕಾರ್ಯ ಸಹಿತ ಬೇರ್ಯಾವುದೇ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.

ಲೋಡ್‌ಶೆಡ್ಡಿಂಗ್‌ ಭೀತಿ
ಸದ್ಯ ಲೋಡ್‌ಶೆಡ್ಡಿಂಗ್‌ ಇಲ್ಲ. ಆದರೆ ಇದೇ ಪರಿಸ್ಥಿತಿ ಮುಂದು ವರಿದು ವಿದ್ಯುತ್‌ ಬೇಡಿಕೆಗಿಂತ ಪೂರೈಕೆ ಕಡಿಮೆಯಾದರೆ ಅನಿ ವಾರ್ಯವಾಗಿ ಲೋಡ್‌ಶೆಡ್ಡಿಂಗ್‌ ಮಾಡಲೇ ಬೇಕಾಗುತ್ತದೆ. ಕೊರತೆ ಹೆಚ್ಚಾದಂತೆ ಅದನ್ನು ಸರಿದೂಗಿಸಲು ಅಗತ್ಯ ಪ್ರಮಾಣದಲ್ಲಿ ವಿದ್ಯುತ್‌ ಖರೀದಿಸಬೇಕಾಗುತ್ತದೆ. ಖರೀದಿ ಪ್ರಕ್ರಿಯೆ ವಿಳಂಬವಾದರೂ ಲೋಡ್‌ಶೆಡ್ಡಿಂಗ್‌ಗೂ ಕಾರಣವಾಗಬಹುದು. ಲೋಡ್‌ಶೆಡ್ಡಿಂಗ್‌ ಆರಂಭವಾದರೆ ಗ್ರಾಮೀಣ ಜನರ ಬದುಕು ಇನ್ನಷ್ಟು ಕಷ್ಟವಾಗಲಿದೆ. ಕನಿಷ್ಠ ಎರಡರಿಂದ ಮೂರು ಗಂಟೆ ನಿತ್ಯವೂ ವಿದ್ಯುತ್‌ ವ್ಯತ್ಯಯವಾಗಬಹುದು.

ಪರೀಕ್ಷೆ ಸಮಯ
ಎಸೆಸೆಲ್ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿವೆ. ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಇದೇ ತಿಂಗಳಲ್ಲಿ ಪೂರ್ವ ಸಿದ್ಧತೆ ಪರೀಕ್ಷೆ ನಡೆಯಲಿದೆ. 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಸೆಮಿಸ್ಟರ್‌ ಪರೀಕ್ಷೆಯೂ ಸಮೀಪಿಸುತ್ತಿದೆ. ಸಂಜೆ ವಿದ್ಯಾರ್ಥಿಗಳ ಅಧ್ಯಯನದ ಸಮಯವಾಗಿರುವುದರಿಂದ ವಿದ್ಯುತ್‌ ಕಡಿತವಾದರೆ ಶೈಕ್ಷಣಿಕ ಭವಿಷ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಲೋಡ್‌ಶೆಡ್ಡಿಂಗ್‌ ಅಥವಾ ವಿದ್ಯುತ್‌ ವ್ಯತ್ಯಯ ಆಗದಂತೆ ಅಧಿಕಾರಿಗಳು, ಸರಕಾರ ಎಚ್ಚರ ವಹಿಬೇಕಾಗಿದೆ.

ಪ್ರತೀ ಮಂಗಳವಾರ ಕರೆಂಟ್‌ ಇರುವುದಿಲ್ಲ
ಯಾವುದೋ ಒಂದು ಫೀಡರ್‌ ಅಥವಾ ವಿದ್ಯುತ್‌ ಮಾರ್ಗದಲ್ಲಿ ನಿರ್ವಹಣ ಕಾಮಗಾರಿಯಿದ್ದರೆ ಆ ಪ್ರದೇಶದ ಬಹುತೇಕ ಎಲ್ಲ ಮಾರ್ಗದ ವಿದ್ಯುತ್‌ ಪೂರೈಕೆ ಸ್ಥಗಿತವಾಗುತ್ತದೆ. ಇದು ಇಂದು ನಿನ್ನೆಯ ಸಮಸ್ಯೆಯಲ್ಲ. ದಶಕಗಳಿಂದಲೂ ಇದೆ. ಮಂಗಳವಾರ ಎಂದರೆ ವಿದ್ಯುತ್‌ ಇರುವುದಿಲ್ಲ. ಅದೇ ಸಂಪ್ರದಾಯವನ್ನು ಇಂದಿಗೂ ಮುಂದುವರಿಸಿದ್ದಾರೆ. ಮಂಗಳವಾರ ಬೆಳಗ್ಗೆ ಹೋದ ವಿದ್ಯುತ್‌ ಸಂಜೆಯವರೆಗೂ ಬರುವುದಿಲ್ಲ. ನಿರ್ವಹಣ ಕಾಮಗಾರಿ ಮಧ್ಯಾಹ್ನದ ವೇಳೆಗೆ ಮುಗಿದರೂ ವಿದ್ಯುತ್‌ ಬರುವಾಗ ಸಂಜೆಯೇ ಆಗಿರುತ್ತದೆ.

ವಿದ್ಯುತ್‌ ದರ ಪರಿಷ್ಕರಣೆ: ನಾಳೆ ಸಾರ್ವಜನಿಕ ವಿಚಾರಣೆ
ಉಡುಪಿ: ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗಕ್ಕೆ ವಿದ್ಯುತ್ಛಕ್ತಿ ದರ ಪರಿಷ್ಕರಣೆ ಕುರಿತು ಮೆಸ್ಕಾಂ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಆಯೋಗವು ಫೆ. 17ರ ಬೆಳಗ್ಗೆ 10ಕ್ಕೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ವಿಚಾರಣೆಯನ್ನು ಆಯೋಜಿಸಿದೆ. ಆಸಕ್ತರು ಭಾಗವಹಿಸಬಹುದು ಎಂದು ಮೆಸ್ಕಾಂನ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.