ಆಹಾರದೊಂದಿಗೆ ಔಷಧೀಯ ಗುಣದ ಹಲಸು


Team Udayavani, Jun 24, 2018, 6:00 AM IST

ss-37.jpg

ಉಡುಪಿ: ಒಂದೊಮ್ಮೆ ನಿರ್ಲಕ್ಷ್ಯಕ್ಕೊಳಗಾಗಿದ್ದ ಹಲಸಿಗೆ ಮತ್ತೆ ಬೇಡಿಕೆ ಬರುತ್ತಿದೆ. ಹಲಸು ಮೇಳ, ಪ್ರದರ್ಶನಗಳ ಪರಿಣಾಮದಿಂದ ಹಲಸಿಗೆ ಮಾರುಕಟ್ಟೆ ದೊರೆಯುತ್ತಿದೆ. ಇತರ ದೇಶಗಳಂತೆ ನಮ್ಮಲ್ಲಿಯೂ ಹಲಸನ್ನು ಪ್ರಮುಖ ಬೆಳೆಯಂತೆ ಬೆಳೆಸಲು ಇದು ಸಕಾಲ ಎಂದು ಶಾಸಕ ಕೆ. ರಘುಪತಿ ಭಟ್‌ ಹೇಳಿದರು.

ದೊಡ್ಡಣಗುಡ್ಡೆ ಪುಷ್ಪ ಹರಾಜು ಕೇಂದ್ರದ (ರೈತ ಸೇವಾ ಕೇಂದ್ರ) ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ., ತೋಟಗಾರಿಕಾ ಇಲಾಖೆ ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋ. ಸಹಯೋಗದಲ್ಲಿ ಆಯೋಜಿಸಲಾದ ಎರಡು ದಿನಗಳ ಉಡುಪಿ ಜಿಲ್ಲಾ ಮಟ್ಟದ “ಹಲಸು ಮೇಳ – 2018’ನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಹಲಸು ಆಹಾರ ಮಾತ್ರವಲ್ಲದೆ ಅದರಲ್ಲಿ ಔಷಧೀಯ ಗುಣಗಳೂ ಇವೆ. ಖಾಲಿ ಪ್ರದೇಶಗಳಲ್ಲಿ ಹಲಸನ್ನು ಬೆಳೆಸಬಹುದು. ಹಲಸಿನ ಉತ್ಪನ್ನ ಒದಗಿಸಿ ಮಾಹಿತಿ ನೀಡುವ ಮತ್ತು ರೈತರನ್ನು ಪ್ರೋತ್ಸಾಹಿಸುವ ಹಲಸು ಮೇಳ ಶ್ಲಾಘನೀಯ ಕಾರ್ಯಕ್ರಮ ಎಂದು ರಘುಪತಿ ಭಟ್‌ ಹೇಳಿದರು.

ಜಿ.ಪಂ. ಅಧ್ಯಕ್ಷ ದಿನಕರ ಬಾಬು ದೀಪ ಬೆಳಗಿಸಿ ಮಾತನಾಡಿ, ಮಾಹಿತಿ ಕಾರ್ಯಾಗಾರಗಳನ್ನು ಏರ್ಪಡಿಸಿ ಯುವಜನತೆಗೆ ಹಲಸಿನ ಬಗ್ಗೆ ಮಾಹಿತಿ ನೀಡಬೇಕು ಎಂದರು. ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಹಲಸು ಮೇಳಗಳಿಂದ ಜಾಗೃತಿ ಸಾಧ್ಯ ಎಂದರು.

ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿ.ಪಂ. ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ ಕುಮಾರ್‌ ಕೊಡ್ಗಿ, ಬ್ರಹ್ಮಾವರ ವಲಯ ಕೃಷಿ ಹಾಗೂ ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ| ಎಸ್‌.ಯು. ಪಾಟೀಲ್‌, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ| ಬಿ. ಧನಂಜಯ, ಶ್ರೀ ಕ್ಷೇ.ಧ.ಗ್ರಾ. ಯೋಜನೆ ಉಡುಪಿ ಜಿಲ್ಲಾ ನಿರ್ದೇಶಕ ಪುರುಷೋತ್ತಮ ಪಿ.ಕೆ. ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ ಸ್ವಾಗತಿಸಿ ಹಿರಿಯ ಸಹಾಯಕ ನಿರ್ದೇಶಕ ಶ್ರೀನಿವಾಸ ಬಿ.ವಿ. ವಂದಿಸಿದರು. ಕುಂದಾಪುರ ತಾಲೂಕು ಹಿರಿಯ ಸಹಾಯಕ ನಿರ್ದೇಶಕ ಸಂಜೀವ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. 

ಭವಿಷ್ಯದ ಅಮರ ಫ‌ಲ ಹಲಸು!
ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಮಾತನಾಡಿ, ಹವಾಮಾನ ಬದಲಾವಣೆಯ ದುಷ್ಪರಿಣಾಮದಿಂದ ಇತರ ಹಣ್ಣುಗಳು ನಾಶವಾದರೂ ಹಲಸು ಮಾತ್ರ ಹಾಗೆಯೇ ಉಳಿಯುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ. ಹಾಗಾಗಿ ಹಲಸು ಮಾತ್ರ ಭವಿಷ್ಯದ ಹಣ್ಣಾಗಿ (ಫ್ಯೂಚರ್‌ ಫ್ರುಟ್‌) ಉಳಿಯಬಹುದು. ಅದನ್ನು ಬೆಳೆಸಲು ಮುಂದಾಗಬೇಕೆಂದರು. 

ಸುಮಾರು 70 ಕೆ.ಜಿ. ತೂಕದ ಹಲಸು ವೇದಿಕೆಯಲ್ಲಿ ಗಮನ ಸೆಳೆಯಿತು.
ವಿವಿಧ ಜಾತಿಯ  ಹಲಸಿನ ಹಣ್ಣು, ಸಸಿಗಳು ಸಾರ್ವಜನಿಕರಿಗೆ ಲಭ್ಯವಾದವು.
ಸಾಂಪ್ರದಾಯಿಕ ತಿನಿಸುಗಳ ಜತೆಗೆ ಹಲಸಿನ ಹಣ್ಣಿನ ಐಸ್‌ಕ್ರೀಂ ಕೂಡ ಆಕರ್ಷಿಸಿತು.
ಹಲಸನ್ನು ತುಂಡು ಮಾಡುವ ಮೂಲಕ ಹಲಸಿನ ಮೇಳಕ್ಕೆ ಚಾಲನೆ.
ದೊಡ್ಡಬಳ್ಳಾಪುರ ತೂಬೆಗೆರೆ ಹಲಸು ಬೆಳೆಗಾರರು ಕೂಡ ಭಾಗಿ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.