ಅಂಗವಿಕಲರಿಗೆ ಮಾರ್ಗದರ್ಶಕರಾಗಿರುವ ಜಗದೀಶ ಭಟ್‌


Team Udayavani, Jan 23, 2020, 5:47 AM IST

dssss

ಸಾವಿರಾರು ಮಂದಿ ಅಂಗವಿಕಲರಿಗೆಗೆ ಚಾಲನೆ ಪರವಾನಿಗೆ ಪಡೆಯಲು ನೆರವಾಗುವುದರೊಂದಿಗೆ ಅವರನ್ನು ಮುಖ್ಯವಾಹಿನಿಯಲ್ಲಿ ಗುರುತಿಸುವಂತೆ ಮಾಡುವ ಕಾರ್ಯ.

ಉಡುಪಿ: ಸಾಮಾನ್ಯರು ವಾಹನ ಚಾಲನೆ ಕಲಿಯುವುದು, ಪರವಾನಿಗೆ ಪಡೆಯುವುದಕ್ಕೆ ಹೆಚ್ಚು ಕಷ್ಟವೇನಿಲ್ಲ. ಆದರೆ ಅಂಗವಿಕಲರಿಗೆ ಎರಡೂ ಕಷ್ಟವೇ. ಇಂತಹವರಿಗಾಗಿಯೇ ನೆರವಾದವರು ಅಂಬಲಪಾಡಿಯ ಜಗದೀಶ ಭಟ್‌. ಕಳೆದ 6-7 ವರ್ಷಗಳಿಂದ ನೂರಾರು ಮಂದಿ ಅಂಗವಿಕಲರಿಗೆ ಉಚಿತ ದ್ವಿಚಕ್ರ ವಾಹನ ತರಬೇತಿ ನೀಡಿ ಇವರು ನೆರವಿನ ಹಸ್ತ ಚಾಚಿದ್ದಾರೆ.

ಸ್ವಾವಲಂಬನೆಯ ಕನಸು
ಉದ್ಯಾವರದ ಐಟಿಐ ಕಾಲೇಜಿನಲ್ಲಿ ಉದ್ಯೋಗ ದಲ್ಲಿರುವ ಜಗದೀಶ್‌ ಭಟ್‌ ಹುಟ್ಟುವಾಗ ಎಲ್ಲರಂತೆ ಸಾಮಾನ್ಯರಾಗಿದ್ದರು. 6ನೇ ವಯಸ್ಸಿಗೆ ಪೋಲಿಯೋ ಕಾಯಿಲೆಗೆ ತುತ್ತಾದ ಪರಿಣಾಮ ಒಂದು ಕಾಲು ಸ್ವಾಧೀನ ಕಳೆದುಕೊಂಡರು. ಆದರೂ ಧೃತಿಗೆಡದ ಅವರು ಕಷ್ಟಪಟ್ಟು ಪದವಿ ಶಿಕ್ಷಣ ಪೂರೈಸಿದರು. ಸ್ವಾವಲಂಬಿ ಜೀವನ ಸಾಗಿಸಬೇಕೆಂದು ದ್ವಿಚಕ್ರ ವಾಹನ ಚಾಲನೆ ತರಬೇತಿಯನ್ನೂ ಪಡೆದರು.

ನೆರವಿನ ಹಸ್ತ
ದೈಹಿಕವಾಗಿ ಸೂಕ್ಷ್ಮವಾಗಿರುವ ಅಂಗವಿಕಲರಿಗೆ ವಾಹನ ತರಬೇತಿ ನೀಡಲು ಸಾಮಾನ್ಯವಾಗಿ ಯಾರೂ ಧೈರ್ಯ ಮಾಡುವುದಿಲ್ಲ. ಇದರಿಂದ ಸಾಕಷ್ಟು ಜನರು ವಾಹನ ತರಬೇತಿ ಪಡೆಯಲು ಹಿಂದೇಟು ಹಾಕುತ್ತಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸ್ವತಃ ತರಬೇತಿ ನೀಡಲು ಅವರು ಪ್ರಾರಂಭಿಸಿದರು.

ಮುಖ್ಯವಾಹಿನಿಗೆ
ಕಳೆದ 6-7 ವರ್ಷಗಳಿಂದ ಸಾವಿರಕ್ಕೂ ಅಧಿಕ ಮಂದಿ ಅಂಗವಿಕಲರಿಗೆ ಡ್ರೈವಿಂಗ್‌ ಕಲಿಸಿ ಪರವಾನಿಗೆ ಮಾಡಿಸಿಕೊಟ್ಟ ಹೆಗ್ಗಳಿಕೆ ಅವರದ್ದು. ಈ ಮೂಲಕ ಅವರೂ ಮುಖ್ಯವಾಹಿನಿಯಲ್ಲಿ ಗುರುತಿಸ ಬೇಕೆಂಬ ಇಚ್ಛೆ ವ್ಯಕ್ತಪಡಿಸುತ್ತಾರೆ ಜಗದೀಶ ಅವರು.

ಪ್ರತಿಭೆ ಗುರುತಿಸುವ ಕೆಲಸ
ಅಂಗವಿಕಲರೂ ಎಲ್ಲರಂತೆ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು. ವಾಹನ ಕಲಿಕೆ ಹಾಗೂ ಯಕ್ಷಗಾನ ಚಟುವಟಿಕೆಗಳ ಮೂಲಕ ಅವರಿಗೆ ಮಾರ್ಗದರ್ಶನ ನೀಡುತ್ತಿದ್ದೇನೆ. ಈಗಾಗಲೆ ಹಲವಾರು ಮಂದಿ ತರಬೇತಿ ಪಡೆದುಕೊಂಡಿದ್ದಾರೆ. ಇಷ್ಟೇ ಅಲ್ಲದೆ ಅಂಗವಿಕಲರಿಗೆ ಸಂಬಂಧಪಟ್ಟ ಇನ್ನಿತರ ಮಾಹಿತಿಗಳನ್ನೂ ನೀಡುತ್ತಿದ್ದೇನೆ.
– ಜಗದೀಶ ಭಟ್‌

ಹಲವು ಆಸಕ್ತಿ
ಅಂಗವಿಕಲರಿಗೆ ಚಾಲನೆ ಪರವಾನಿಗೆ ಮಾಡಿಸಿಕೊಡುವುದು ಮಾತ್ರವಲ್ಲ, ಯಕ್ಷಗಾನ, ಹುಲಿವೇಷದಲ್ಲೂ ಇವರ ಆಸಕ್ತಿ ಅಪಾರ. ಇದರೊಂದಿಗೆ ಅಂಗವಿಕಲರಿಗೆ ಕಾನೂನು ಮಾಹಿತಿ, ಸವಲತ್ತು ಮಾಹಿತಿ ನೀಡುತ್ತಾರೆ.ಯಕ್ಷಗಾನ ತಂಡ ಕಟ್ಟಿಕೊಂಡು ವಿವಿಧೆಡೆಗಳಲ್ಲಿ ಈಗಾಗಲೇ ಪ್ರದರ್ಶನಗಳನ್ನೂ ನೀಡಿದ್ದಾರೆ. ಪ್ರತಿವರ್ಷ ಕೃಷ್ಣಾಷ್ಟಮಿ ಸಂದರ್ಭ ಹುಲಿವೇಷವನ್ನೂ ಹಾಕುತ್ತಾರೆ.

ಜಗದೀಶ ಅವರು ಚಿಕ್ಕ ವಯಸ್ಸಿಗೆ ಪೋಲಿಯೋ ಕಾಯಿಲೆಗೆ ತುತ್ತಾಗಿ ಕಾಲು ಸ್ವಾಧೀನ ಕಳೆದುಕೊಂಡಿದ್ದರೂ ಸ್ವಾವಲಂಬಿ ಜೀವನ ನಡೆಸುತ್ತಾ, ಅನೇಕ ಅಂಗವಿಕಲರಿಗೆ ಸ್ಫೂರ್ತಿ ತುಂಬಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.