ಸಾಹಿತ್ಯ ಕ್ಷೇತ್ರಕ್ಕೆ ಜೈನರ ಕೊಡುಗೆ ಅಪಾರ’
Team Udayavani, Jul 2, 2019, 5:15 AM IST
ಕಾರ್ಕಳ: ಕನ್ನಡ ಸಾಹಿತ್ಯ ಲೋಕಕ್ಕೆ ಜೈನ ಧರ್ಮೀಯರ ಕೊಡುಗೆ ಅಪಾರ ಹಾಗೂ ಅನನ್ಯವಾದುದು. ಪಂಪ, ರನ್ನ, ಜನ್ನ ಪೊನ್ನರಂತಹ ಅನೇಕ ಜೈನ ಕವಿಗಳು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದವರಲ್ಲಿ ಪ್ರಮುಖರು ಎಂದು ಮಂಗಳೂರು ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ಹೇಳಿದರು.
ಜೂ. 30ರಂದು ಬಾಹುಬಲಿ ಪ್ರವಚನ ಮಂದಿರದಲ್ಲಿ ಭಾರತೀಯ ಜೈನ್ ಮಿಲನ್ ಕಾರ್ಕಳ ಇದರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೈನಧರ್ಮದ ಮೂಲಮಂತ್ರವೇ ಅಹಿಂಸೆ. ಅಹಿಂಸೆಯಿದ್ದಲ್ಲಿ ಮಾತ್ರ ಸಮಾಜ ನೆಮ್ಮದಿ ಕಾಣಬಹುದು ಎಂದು ಸಾರಿ ಹೇಳಿದ ಧರ್ಮ ಜೈನಧರ್ಮವೆಂದು ಬಾಲಕೃಷ್ಣ ಶೆಟ್ಟಿ ಅವರು ಪ್ರತಿಪಾದಿಸಿದರು.
ಕಾರ್ಕಳ ಜೈನ ಮಿಲನ್ನ ಅಧ್ಯಕ್ಷೆ ಶಶಿಕಲಾ ಕೆ. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಜೈನ್ ಮಿಲನ್ ವಲಯ 8ರ ನಿರ್ದೇಶಕ ಅಂಡಾರು ಮಹಾವೀರ ಹೆಗ್ಡೆ, ಸಾಂತ್ರಬೆಟ್ಟು ಆದಿರಾಜ ಅಜ್ರಿ, ಶಾಂತಿರಾಜ ಹೆಗ್ಡೆ ಅಜೆಕಾರು, ಎಂ. ದೇವರಾಜ ಅಧಿಕಾರಿ, ರವಿರಾಜ ಅಜ್ರಿ ಸಾಂತ್ರಬೆಟ್ಟು, ಪಾರ್ಶ್ವನಾಥ ಜೈನ್ ಉಪಸ್ಥಿತರಿದ್ದರು. ಸನತ್ ಕುಮಾರ್ ಜೈನ್ ಸ್ವಾಗತಿಸಿ, ಜ್ಯೋತಿ ಜೈನ್ ನಿರೂಪಿಸಿದರು. ಜಯಶ್ರೀ ಆದಿರಾಜ ಅಜ್ರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು
Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್ ಮನೆಗೆ ಕನ್ನ
Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ