ಜೇಟ್ಲಿಗೆ ಜಿಎಸ್‌ಬಿ ದೇವಸ್ಥಾನಗಳ ಒಕ್ಕೂಟ ಮನವಿ


Team Udayavani, Jun 5, 2017, 10:27 AM IST

appeal-to-MP1.jpg

ಮಣಿಪಾಲ: ಮುಂಬರುವ ಜು.1ರಿಂದ ಜಾರಿಗೆ ಬರಲಿರುವ ಸರಕು ಮತ್ತು ಸೇವಾ ತೆರಿಗೆಯಿಂದ ಧಾರ್ಮಿಕ ಸಂಸ್ಥೆಗಳು ಮತ್ತು ಅವುಗಳು ನಡೆಸುತ್ತಿರುವ ಕಲ್ಯಾಣ ಮಂಟಪಗಳಿಗೆ ವಿನಾಯಿತಿ ನೀಡಬೇಕೆಂದು ಜಿಎಸ್‌ಬಿ ದೇವಸ್ಥಾನಗಳ ಒಕ್ಕೂಟ ಸಂಸದ ನಳಿನ್‌ ಕುಮಾರ್‌ ಕಟೀಲು ಮುಖಾಂತರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಯವರಿಗೆ ಮನವಿ ಮಾಡಿದೆ. 

ಕಳೆದ ಮೇ 19ರಂದು ಜರಗಿದ ಜಿಎಸ್‌ಟಿ ಸಭೆಯಲ್ಲಿ ಧಾರ್ಮಿಕ ಸಂಸ್ಥೆಗಳು ಮತ್ತು ಚಾರಿಟೆಬಲ್‌ ಟ್ರಸ್ಟ್‌ಗಳ ಮೇಲೆ ಜಿಎಸ್‌ಟಿ ವಿಧಿಸುವ ತೀರ್ಮಾನ ಕೈಗೊಳ್ಳಲಾಗಿದೆ, ಈ ಪ್ರಕಾರ ಕಮ್ಯುನಿಟಿ ಹಾಲ್‌, ಕಲ್ಯಾಣಮಂಟಪ ಅಥವಾ ಓಪನ್‌ ಏರಿಯಾಗಳ ಬಾಡಿಗೆ ದರ ದಿನಕ್ಕೆ 10,000 ರೂ.ಗಿಂತ ಹೆಚ್ಚಿದ್ದರೆ ಜಿಎಸ್‌ಟಿ ಅನ್ವಯವಾಗುತ್ತದೆ. ದೇವಸ್ಥಾನಗಳೂ ಜಿಎಸ್‌ಟಿ ವ್ಯಾಪ್ತಿಗೊಳಪಡುತ್ತವೆ. 

ಚಾರಿಟೆಬಲ್‌ ಟ್ರಸ್ಟ್‌ಗಳು ಮತ್ತು ದೇವಸ್ಥಾನಗಳು ತಮ್ಮ ಸಭಾಗೃಹ ಅಥವಾ ಕಲ್ಯಾಣ ಮಂಟಪಗಳನ್ನು ಹೆಚ್ಚಾಗಿ ಮದುವೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಬಾಡಿಗೆಗೆ ನೀಡುತ್ತವೆ. ಜನರಲ್ಲಿ ಸಚ್ಚಾರಿತ್ರ್ಯವನ್ನು ಬೆಳೆಸುವ ಮೂಲಕ ಈ ಟ್ರಸ್ಟ್‌ಗಳು ದೇಶ ನಿರ್ಮಾಣದಲ್ಲಿ ತಮ್ಮದೇ ಆದ ಕೊಡುಗೆಗಳನ್ನು ನೀಡುತ್ತಿವೆ. ಜತೆಗೆ ಜನರಿಗೆ ವಿವಿಧ ರೀತಿಯಲ್ಲಿ ನೆರವನ್ನು ನೀಡುತ್ತಿವೆ ಎಂದು ಒಕ್ಕೂಟ ತನ್ನ ಮನವಿಯಲ್ಲಿ ಹೇಳಿದೆ.

ಇಷ್ಟು ಸಮಯ ಯಾವ ಸರಕಾರವೂ ದೇವಸ್ಥಾನಗಳಿಗೆ ತೆರಿಗೆ ವಿಧಿಸಿರಲಿಲ್ಲ. ಬದಲಾಗಿ ದೇವಸ್ಥಾನ ಹಾಗೂ ಧಾರ್ಮಿಕ ಸಂಸ್ಥೆಗಳಿಗೆ ನೆರವಾಗುತ್ತಿದ್ದವು. ಇದೇ ಮೊದಲ ಸಲ ದೇವಸ್ಥಾನಗಳನ್ನು ಸೇವಾ ತೆರಿಗೆ ವ್ಯಾಪ್ತಿಯೊಳಗೆ ತರಲಾಗಿದೆ. ಸಮಾಜ ಸೇವೆಯ ಮೂಲಕ ಮನುಕುಲವನ್ನುದ್ಧರಿಸುವ ಧ್ಯೇಯ ಹೊಂದಿರುವ ದೇವಸ್ಥಾನಗಳಿಗೆ ತೆರಿಗೆ ವಿಧಿಸುವುದು ಸರಿಯಲ್ಲ ಎಂದಿದೆ. ಒಕ್ಕೂಟದ ಅಧ್ಯಕ್ಷ ಸುದರ್ಶನ ಮಲ್ಯ, ಕಾರ್ಯದರ್ಶಿ ಟಿ.ಗಣಪತಿ ಪೈ ಮತ್ತು ಟಿ. ರತ್ನಾಕರ ಪೈ ಮನವಿ ಪತ್ರವನ್ನು ಸಂಸದರಿಗೆ ಅರ್ಪಿಸಿದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.