- Saturday 07 Dec 2019
ಕಾರ್ಕಳ: ಧಾರಾಕಾರ ಮಳೆ
Team Udayavani, Jul 11, 2019, 5:41 AM IST
ಕಾರ್ಕಳ: ಬುಧವಾರವೂ ಕಾರ್ಕಳ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ಯಾವುದೇ ಹಾನಿಯಾದ ಕುರಿತು ವರದಿಯಾಗಿಲ್ಲ. ಕಾರ್ಕಳ, ಕೆರ್ವಾಶೆ, ಬೇಳಿಂಜೆ ಪ್ರದೇಶಗಳಲ್ಲಿ ಅತಿಯಾಗಿ ಮಳೆಯಾಗಿತ್ತು. ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯಲ್ಲೇ ನೀರು ಹರಿಯುತ್ತಿತ್ತು.
ಕಾರ್ಕಳ ನಗರದ ಮುಖ್ಯರಸ್ತೆಗಳು ಹೊಂಡಗಳಿಂದ ಕೂಡಿದ್ದು, ನಿರಂತರ ಮಳೆ ಸುರಿಯುತ್ತಿದ್ದ ಕಾರಣ ರಸ್ತೆ ನೀರಿನಿಂದ ಆವೃತ್ತವಾಗಿತ್ತು. ವಾಹನ ಚಾಲಕರಿಗೆ ಅದರಲ್ಲೂ ವಿಶೇಷವಾಗಿ ದ್ವಿಚಕ್ರ ಸವಾರರು ಹೊಂಡಗಳನ್ನು ಗುರುತಿಸಲಾಗದೇ ಚಾಲನೆಗೆ ವೇಳೆ ಪರಿತಪಿಸುವಂತಾಯಿತು. ರಸ್ತೆಯಲ್ಲೇ ನೀರು ಹರಿಯುವ ಕಾರಣ ವಾಹನಗಳ ಓಡಾಟದ ವೇಳೆ ಕಾರಂಜಿಯಂತೆ ನೀರು ಚಿಮ್ಮುವ ದೃಶ್ಯ ಸಾಮಾನ್ಯವಾಗಿತ್ತು.
ಕಾರ್ಕಳದ ನದಿ, ಹೊಳೆಗಳು ಮೈದುಂಬಿ ಹರಿಯುತ್ತಿವೆ. ಮುನಿಯಾಲು, ಕೆರ್ವಾಶೆ, ಮಾಳ, ಶಿರ್ಲಾಲು, ದುರ್ಗಾ, ಬೇಳಿಂಜೆ ಹೊಳೆಗಳು ಧುಮ್ಮಕ್ಕಿ ಹರಿಯುತ್ತಿದ್ದು, ಸುವರ್ಣ ನದಿ, ಎಣ್ಣೆ ಹೊಳೆಯಲ್ಲೂ ನೀರು ಅತ್ಯಧಿಕ ಪ್ರಮಾಣದಲ್ಲಿ ಹರಿಯುತ್ತಿದೆ.
ಜಲಪಾತಗಳ ಸೊಬಗು
ನಿಟ್ಟೆ, ದುರ್ಗಾ, ಮಾಳ, ಜೊಂಬ್ಲು, ಕೂಡ್ಲು ಜಲಪಾತಗಳಲ್ಲಿ ನೀರಿನ ಹರಿವು ಜಾಸ್ತಿಯಾಗಿರುವುದರಿಂದಾಗಿ ಜಲಪಾತಗಳು ತನ್ನ ಸೊಬಗನ್ನು ಹೆಚ್ಚಿಸಿವೆ. ನೋಡುಗರ ಕಣ್ಮನ ಸೆಳೆಯುಂತಿದೆ ಇಲ್ಲಿನ ಜಲಪಾತಗಳು. ಬಹುತೇಕ ಜಲಪಾತಗಳು ಸುರಕ್ಷಿತವಾಗಿಲ್ಲದ ಕಾರಣ ಪ್ರವಾಸಿಗರು ಜಾಗರೂಕತೆಯಿಂದ ಇರಬೇಕೆಂದು ಸ್ಥಳೀಯರು ಎಚ್ಚರಿಸುತ್ತಿದ್ದಾರೆ. ಕೂಡ್ಲು ಜಲಪಾತಕ್ಕೆ ಪ್ರವಾಸಿಗರ ನಿಷೇಧವಿದೆ.
ಈ ವಿಭಾಗದಿಂದ ಇನ್ನಷ್ಟು
-
ಉಡುಪಿ/ಮಂಗಳೂರು: ಕರಾವಳಿಯ ದ.ಕ. ಮತ್ತು ಉಡುಪಿ ಜಿಲ್ಲೆ ಸಹಿತ ರಾಜ್ಯಾದ್ಯಂತ ಶುಕ್ರವಾರ ಸರ್ವರ್ ಸಮಸ್ಯೆಯಿಂದಾಗಿ ಸಬ್ರಿಜಿಸ್ಟ್ರಾರ್ ಕಚೇರಿಗಳಲ್ಲಿ ಗ್ರಾಹಕರಿಗೆ...
-
ಕುಂದಾಪುರ: ತೂಕ ಮಾಡಿ ಮರಳು ನೀಡಬೇಕೆಂದು ಜಿಲ್ಲಾಡಳಿತ ಕಠಿನ ನಿಲುವು ತಳೆದ ಕಾರಣ ಇನ್ನೂ 45 ದಿನಗಳ ಕಾಲ ಮರಳು ದೊರೆಯುವ ಸಾಧ್ಯತೆ ಕಡಿಮೆಯಿದೆ. ವೇ ಬ್ರಿಡ್ಜ್ ಬೇಗ...
-
ಗಂಗೊಳ್ಳಿ: ಇಲ್ಲಿನ ಜನರು ಆಧಾರ್ ಕಾರ್ಡ್ ನೋಂದಣಿ ಅಥವಾ ತಿದ್ದುಪಡಿ ಮಾಡಿಸಬೇಕಾದರೆ ಸುಮಾರು 25 ಕಿ.ಮೀ. ದೂರದ ವಂಡ್ಸೆಗೆ ಹೋಗಬೇಕು. ಕೆಲ ಕಾಲ ಇಲ್ಲಿನ ಗ್ರಾಪಂ....
-
ಉಡುಪಿ: ಅದಮಾರು ಮಠದ ಪರ್ಯಾಯದಲ್ಲಿ ಕಾಲೇ ವರ್ಷತು ಪರ್ಜನ್ಯಃ| ಪೃಥಿವೀ ಸಸ್ಯಶಾಲಿನಿ|| ದೇಶಃ ಅಯಂ ಕ್ಷೋಭರಹಿತಃ| ಸಜ್ಜನಾಃ ಸಂತು ನಿರ್ಭಯಾಃ|| ಎಂಬಂತೆ ಈ ನಾಲ್ಕು ವಿಷಯಗಳ...
-
ಉಡುಪಿ: ಶ್ರೀಕೃಷ್ಣಮಠದಲ್ಲಿ ಮುಂದಿನ ಜ. 18ರಂದು ನಡೆಯುವ ಅದಮಾರು ಮಠ ಪರ್ಯಾಯ ಉತ್ಸವದ ಪೂರ್ವಭಾವಿಯಾದ ಭತ್ತದ (ಧಾನ್ಯ) ಮುಹೂರ್ತ ಶುಕ್ರವಾರ ಶ್ರೀಕೃಷ್ಣಮಠದ ಬಡಗುಮಾಳಿಗೆಯಲ್ಲಿ...
ಹೊಸ ಸೇರ್ಪಡೆ
-
ಮಂಗಳೂರು: ಕುಲಶೇಖರದಿಂದ ಮೂಡುಬಿದಿರೆ- ಕಾರ್ಕಳ ನಡುವಿನ ಸುಮಾರು 60 ಕಿ.ಮೀ. ದೂರದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಮತ್ತೂಮ್ಮೆ ಭೂಸ್ವಾಧೀನ ಪ್ರಕ್ರಿಯೆ...
-
ಕನ್ನಡ ದೃಶ್ಯ ಜಗತ್ತನ್ನು ಕಲಾತ್ಮಕವಾಗಿ ಶ್ರೀಮಂತಗೊಳಿಸಿದ ಕೆಲವೇ ಕೆಲವು ನಿರ್ದೇಶಕರ ಪೈಕಿ ಗಿರೀಶ್ ಕಾಸರವಳ್ಳಿ ಕೂಡ ಒಬ್ಬರು. ಚೊಚ್ಚಲ ನಿರ್ದೇಶನ, "ಘಟಶ್ರಾದ್ಧ'...
-
ಬೆಂಗಳೂರು: ರಾಜ್ಯಾದ್ಯಂತ ಅನುಷ್ಠಾನದಲ್ಲಿರುವ ಶುದ್ಧ ಕುಡಿಯುವ ನೀರು ಘಟಕಗಳ ಕಾರ್ಯನಿರ್ವಹಣೆ ಸಂಬಂಧ ಸೂಕ್ತ ನಿಯಮಾವಳಿ ರೂಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ....
-
ರಘುರಾಮನು ವನರಾಮನಾಗಿ ಆರಾಮದಿಂದ ಇದ್ದ ಸ್ಥಳವೇ ಚಿತ್ರಕೂಟ. ರಾಮ, ಲಕ್ಷ¾ಣ, ಸೀತೆಯರ ಚಿತ್ತಾಪಹಾರ ಮಾಡಿದ್ದ ಚಿತ್ರಕೂಟವು ಪ್ರವಾಸಿಗರ ಚಿತ್ತವನ್ನೂ ಅಪಹರಿಸುವಷ್ಟು...
-
ಮಂಗಳೂರು: ಪಾಶ್ಚಾತ್ಯ ಪ್ರಭಾವದಿಂದಾಗಿ ಭಾರತೀಯ ಸಂಗೀತವು ಸ್ವಲ್ಪ ಮಂಕಾಗಿ ಕಂಡರೂ ಮತ್ತೆ ಚಿಗುರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|...