ಜ್ಞಾನಧಾರೆ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ: ಡಿ’ಸೋಜಾ
Team Udayavani, Mar 28, 2017, 4:11 PM IST
ಉಡುಪಿ: ದೇವರ ಸೃಷ್ಠಿಕಾರ್ಯ ಅದ್ಭುತವಾಗಿದ್ದು ಮನುಷ್ಯರಾಗಿ ಸೃಷ್ಟಿಸಲ್ಪಟ್ಟ ನಾವು ಆ ಸೃಷ್ಟಿಯ ಸಾರ್ಥಕ್ಯವನ್ನು ಮೆರೆಯಬೇಕು. ಮಕ್ಕಳನ್ನು ತಿದ್ದಿ ತೀಡುವ ಕಾರ್ಯವು ಅವರ ವ್ಯಕ್ತಿತ್ವ ವಿಕಸನಕ್ಕಾಗಿ ಹೊರತು ಗುರುಗಳು ತಮಗೆ ಮಾಡುವ ಅವಮಾನ ಎಂದು ವಿದ್ಯಾರ್ಥಿಗಳು ಯಾವತ್ತೂ ಭಾವಿಸಬಾರದು. ಗುರುಗಳು ಪ್ರೀತಿಯಿಂದ ನೀಡುವ ಜ್ಞಾನಧಾರೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗುವುದಾಗಿ ಕಾರ್ಕಳ ಅತ್ತೂರು ಸೈಂಟ್ ಲಾರೆನ್ಸ್ ಮೈನರ್ ಬೆಸಲಿಕಾದ ಧರ್ಮಗುರು ರೆ|ಫಾ| ಜಾರ್ಜ್ ಥಾಮಸ್ ಡಿಸೋಜಾ ಹೇಳಿದರು.
ಅವರು ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ 26ನೇ ವಾರ್ಷಿಕೋತ್ಸವ ಹಾಗೂ ಸಂಸ್ಥಾಪಕರ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಸಿ. ಎ. ಶಾಖೆಯ ಅಧ್ಯಕ್ಷೆ ಸಿ. ಎ. ರೇಖಾ ದೇವಾನಂದ್ ಮಾತನಾಡಿ ಶಿಕ್ಷಣದ ಜತೆಗೆ ಮಾನವೀಯ ಮೌಲ್ಯವನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳುವಂತೆ ವಿದ್ಯಾರ್ಥಿಗಳಿಗೆ ಕರೆನೀಡಿದರು.
2016ನೇ ವರ್ಷದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಈ ಸಂದರ್ಭ ಸಮ್ಮಾನಿಸಲಾಯಿತು. ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ರವಿರಾಜ್ ಎಚ್.ಪಿ., ಕಾರ್ಯಾಧ್ಯಕ್ಷ ಮನೋಹರ ಶೆಟ್ಟಿ ತೋನ್ಸೆ, ರಕ್ಷಕ- ಶಿಕ್ಷಕ ಸಂಘದ ಕಾರ್ಯದರ್ಶಿ ಪದ್ಮ ಪಿ. ಭಟ್ ಉಪಸ್ಥಿತರಿದ್ದರು.
ಪ್ರಾಚಾರ್ಯ ಡಾ| ಮಧುಸೂದನ್ ಭಟ್ ವಾರ್ಷಿಕ ವರದಿ ವಾಚಿಸಿ, ಉಪನ್ಯಾಸಕ ರಾಘವೇಂದ್ರ ಜಿ. ಜಿ. ಬಹುಮಾನ ಪಟ್ಟಿ ಪ್ರಕಟಿಸಿದರು. ಬಿಬಿಎಂ ವಿದ್ಯಾರ್ಥಿನಿ ಸೋನ್ಸ್ ಮಡೋನಾ ಸ್ವಾಗತಿಸಿ, ವಿವೇಕ ಲಾಗಕರ್ ವಂದಿಸಿದರು. ಅಂತಿಮ ಬಿ.ಕಾಂ. ವಿದ್ಯಾರ್ಥಿ ಅನಿರುದ್ಧ್ ಪಡಿಯಾರ್ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…