12 ಸ.ಪ.ಪೂ. ಕಾಲೇಜುಗಳಲ್ಲಿ ‘ಟಾಲ್ಪ್’ ಅನುಷ್ಠಾನ 


Team Udayavani, Dec 4, 2018, 2:40 AM IST

e-learning-3-12.jpg

ಉಡುಪಿ: ವಿದ್ಯಾರ್ಥಿಗಳ ವೃತ್ತಿಪರ ಕೋರ್ಸ್‌ಗಳಾದ ಸಿಇಟಿ, ನೀಟ್‌, ಜೆಇಇಗಳಿಗೆ ಅನುಕೂಲವಾಗುವಂತೆ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ದ್ವಿ.ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ತಂತ್ರಜ್ಞಾನ ಬೆಂಬಲಿತ ಕಲಿಕಾ ಕಾರ್ಯಕ್ರಮ ಟಾಲ್ಪ್ (ಟೆಕ್ನಾಲಜಿ ಅಸಿಸ್ಟೆಡ್‌ ಲರ್ನಿಂಗ್‌ ಪ್ರೋಗ್ರಾಮ್‌) ರಾಜ್ಯಾದ್ಯಂತ ನಡೆಯುತ್ತಿದ್ದು, ಗ್ರಾಮೀಣ ಭಾಗದ ಸರಕಾರಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಿದೆ.

ಜಿಲ್ಲೆಯ 12 ಕಾಲೇಜು
ಜಿಲ್ಲೆಯ 42 ಸ.ಪ.ಪೂ. ಕಾಲೇಜುಗಳಲ್ಲಿ 12 ಸ.ಪ.ಪೂ. ಕಾಲೇಜುಗಳಾದ ಉಡುಪಿ ತಾಲೂಕಿನ ಉಡುಪಿ (26 ವಿದ್ಯಾರ್ಥಿಗಳು), ಉಡುಪಿ ಗರ್ಲ್ಸ್‌ (51), ಹಿರಿಯಡಕ (88), ಕಾರ್ಕಳ ತಾಲೂಕಿನ ಬೈಲೂರು (42), ಬಜಗೋಳಿ (17), ಕಾರ್ಕಳ (14) ಹಾಗೂ ಕುಂದಾಪುರ ತಾಲೂಕಿನ ಶಂಕರನಾರಾಯಣ (10), ಬಿದ್ಕಲ್‌ಕಟ್ಟೆ (17), ಕೋಟೇಶ್ವರ (17), ಬೈಂದೂರು (175), ಕುಂದಾಪುರ (80), ನಾವುಂದ (42) ಹೀಗೆ ಒಟ್ಟು ಈ ಶೈಕ್ಷಣಿಕ ಸಾಲಿನಲ್ಲಿ 579 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುತ್ತಿದ್ದಾರೆ.  

ತರಬೇತಿ ಪ್ರಕ್ರಿಯೆ
ಪ.ಪೂ. ಕಾಲೇಜುಗಳಲ್ಲಿರುವ ಜೀವಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಭೌತಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕರಲ್ಲಿ ಆಸಕ್ತರನ್ನು ಆಯ್ಕೆ ಮಾಡಿಕೊಂಡು ಇಲಾಖೆ ವತಿಯಿಂದ ಅವರಿಗೆ ಬೆಂಗಳೂರಿನಲ್ಲಿ ತರಬೇತಿ ಕೊಟ್ಟು ಅವರಿಂದ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಟಾಲ್ಪ್ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆದ ಆಯಾಯ ವಿಷಯಕ್ಕೆ ಸಂಬಂಧಪಟ್ಟ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಈ ತರಬೇತಿಯನ್ನು ಆನ್‌ಲೈನ್‌ ಮೂಲಕ ತಲುಪಿಸುವುದಲ್ಲದೆ, ಸೂಕ್ತ ಮಾರ್ಗದರ್ಶನ ಮಾಡುತ್ತಾರೆ.  ಸರಕಾರಿ ಕಾಲೇಜುಗಳಲ್ಲಿ ಸಾಮಾನ್ಯ ಪಾಠ ಪ್ರವಚನಗಳಿಗೆ ತೊಂದರೆಯಾಗದಂತೆ ತರಬೇತಿ ನೀಡಲಾಗುತ್ತದೆ. ಪ್ರತೀ ಶನಿವಾರ ಕಿರು ಪರೀಕ್ಷೆ ನಡೆಸಲಾಗುತ್ತದೆ. ಈ ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ ಹಾಜರಾತಿ ಇದೆ.

ರಾಜ್ಯದಲ್ಲಿ 250 ಕಾಲೇಜುಗಳಲ್ಲಿ ಅನುಷ್ಠಾನ
ಈ ತರಬೇತಿಗೆ ಪೂರಕವಾಗಿ ಬೇಕಾಗುವಂತಹ ಪ್ರೊಜೆಕ್ಟರ್‌, ಲ್ಯಾಪ್‌ಟಾಪ್‌ ಅನ್ನು ಇಲಾಖೆ ಆಯ್ದ 12 ಕಾಲೇಜುಗಳಿಗೆ ಸರಬರಾಜು ಮಾಡಿದೆ. ರಜಾದಿನ ಹೊರತು ಸುಮಾರು ಒಂದೂವರೆ ಗಂಟೆ ಈ ತರಬೇತಿ ನಡೆಸಲಾಗುತ್ತಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಟಾಲ್ಪ್ ಕಾರ್ಯಕ್ರಮ ಅನುಷ್ಠಾನಗೊಳಿಸಲು 2017-18ನೇ ಸಾಲಿನಲ್ಲಿ ಜಿಲ್ಲೆಯ ಎಲ್ಲ ವಿಜ್ಞಾನ ಉಪನ್ಯಾಸಕರಿಗೆ ತರಬೇತಿ ನೀಡಲಾಗಿತ್ತು. 2018-19ನೇ ಸಾಲಿನಲ್ಲಿ 250 ಸರಕಾರಿ ಪ.ಪೂ. ಕಾಲೇಜುಗಳ ಪಿಸಿಎಂಬಿ ವಿದ್ಯಾರ್ಥಿಗಳಿಗೆ ತರಬೇತಿ ನಡೆಯುತ್ತಿದೆ ಮತ್ತು ಉಳಿದಂತೆ 500 ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಇಂಗ್ಲಿಷ್‌, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ವಿಷಯಗಳಿಗೂ ಅನುಷ್ಠಾನಗೊಳ್ಳಲಿದೆ.

ಸಮಾನ ಶಿಕ್ಷಣಕ್ಕೆ ಪೂರಕ
ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೂ ಸರಕಾರಿ ಕಾಲೇಜುಗಳಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೂ ಸಮಾನವಾದ ಶಿಕ್ಷಣ ದೊರಕಬೇಕೆನ್ನುವ ದೃಷ್ಟಿಯಿಂದ ಸರಕಾರದ ಈ ಯೋಜನೆ ಅನುಷ್ಠಾನಗೊಂಡಿದೆ. ರಾಜ್ಯದಲ್ಲಿ ಒಟ್ಟು  750 ಸರಕಾರಿ ಪ.ಪೂ. ಕಾಲೇಜುಗಳಲ್ಲಿ ಟಾಲ್ಪ್ ಅನುಷ್ಠಾನ ಪೂರ್ಣಗೊಂಡಾಗ ಪಿಸಿಎಂಬಿ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ.

ತರಬೇತಿ ಯಶಸ್ವಿ
ಜಿಲ್ಲೆಯಲ್ಲಿ ಆಯ್ದ 12 ಕಾಲೇಜುಗಳಲ್ಲಿ ಟಾಲ್ಪ್ ಕೋಚಿಂಗ್‌ ಯಶಸ್ವಿಯಾಗಿ ನಡೆಯುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಈ ತರಬೇತಿ ಅತ್ಯಂತ ಸಹಕಾರಿಯಾಗಿದೆ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಪಟ್ಟಣಗಳಿಗೆ ತೆರಳಿ ದುಬಾರಿ ತರಬೇತಿ ಪಡೆಯಲು ಸಾಧ್ಯವಾಗದವರಿಗೆ ಇದು ಅನುಕೂಲವಾಗಿದೆ. ಇನ್ನಷ್ಟು ವಿದ್ಯಾರ್ಥಿಗಳು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು.
– ಸುಬ್ರಹ್ಮಣ್ಯ ಜೋಷಿ, ಡಿಡಿಪಿಯು 

— ಎಸ್‌.ಜಿ. ನಾಯ್ಕ

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.