ಜು. 31ರಿಂದ ಮರಳು ದಿಬ್ಬ ತೆರವಿಗೆ ಅವಕಾಶ ನೀಡುವಂತೆ ಸಿಎಂಗೆ ಮನವಿ
Team Udayavani, Jul 30, 2019, 5:17 AM IST
ಉಡುಪಿ: ಸಿಆರ್ಝಡ್ ವ್ಯಾಪ್ತಿಯ ನದಿಗಳಲ್ಲಿ ಮರಳು ದಿಬ್ಬ ತೆರವಿಗೆ ವಿಧಿಸಿದ ಹೆಚ್ಚುವರಿ ಷರತ್ತನ್ನು ಪುನಃ ಪರಿಶೀಲಿಸಿ, ಜು. 31ರಿಂದ ಮರಳುಗಾರಿಕೆಗೆ ಅವಕಾಶ
ನೀಡುವಂತೆ ಒತ್ತಾಯಿಸಿ ಶಾಸಕರಾದ ಕೆ. ರಘುಪತಿ ಭಟ್, ವಿ. ಸುನೀಲ್ ಕುಮಾರ್ ಮತ್ತು ಬಿ.ಎಂ. ಸುಕುಮಾರ್ಶೆಟ್ಟಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸೋಮ ವಾರ ಮನವಿ ಸಲ್ಲಿಸಿದ್ದಾರೆ.
2019ರ ಫೆ. 14ರಂದು ಕೆಎಸ್ಸಿಝೆಡ್ಎಂಎ ಸಮಿತಿ ಸಿಆರ್ಝಡ್ ವ್ಯಾಪ್ತಿಯಲ್ಲಿ ನದಿಗಳ ಮರಳು ದಿಬ್ಬ ತೆರವುಗೊಳಿಸಲು ಅನುಮತಿ ನೀಡಿದೆ. ಆದೇಶದಲ್ಲಿ ಜೂನ್ನಿಂದ ಸೆಪ್ಟಂಬರ್ ವರೆಗೆ ಮೀನು ಸಂತಾನೋತ್ಪತ್ತಿ ಕಾಲವೆಂದು ಉಲ್ಲೇಖೀಸಿ ಮರಳು ತೆರವಿಗೆ ನಿಷೇಧ ವಿಧಿಸಲಾಗಿದೆ. ಆದರೆ ಮೀನುಗಾರಿಕೆ ನಿಷೇಧವಿರುವುದು ಕೇವಲ ಎರಡು ತಿಂಗಳು (ಜೂ. 1ರಿಂದ ಜು. 31) ಮಾತ್ರ. ಆದ್ದರಿಂದ ಆದೇಶವನ್ನು ಪುನಃ ಪರಿಶೀಲನೆ ಮಾಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಮನವಿ ಸ್ವೀಕರಿಸಿದ ಸಿಎಂ ಅವರು ಸಿಆರ್ಝಡ್ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್ ಅವರಿಗೆ ಆದೇಶವನ್ನು ಮಾರ್ಪಾಡು ಮಾಡಿ ಕಳುಹಿಸುವಂತೆ ಸೂಚನೆ ನೀಡಿದ್ದಾರೆ ಎಂದು ಕೆ. ರಘುಪತಿ ಭಟ್ ತಿಳಿಸಿದರು.
ಅನಂತರ ಶಾಸಕರು ಸಿಆರ್ಝಡ್ ಕಾರ್ಯದರ್ಶಿ ವಿಜಯ ಕುಮಾರ್ ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ