ಜೂ. 11: ಪ್ರತಿ ಗ್ರಾ.ಪಂ.ನಲ್ಲಿ 500 ಸಸಿ ನೆಡುವಿಕೆ


Team Udayavani, May 21, 2019, 6:10 AM IST

sasi-neduvike

ಉಡುಪಿ: ಬರದಿಂದ ತತ್ತರಿಸುತ್ತಿರುವ ಸಂದರ್ಭ ಎಚ್ಚೆತ್ತ ಸರಕಾರ ಅರಣ್ಯೀಕರಣಕ್ಕೆ ಮುಂದಾಗಿದೆ. ರಾಜ್ಯದ ಪ್ರತಿ ಗ್ರಾ.ಪಂ.ನಲ್ಲಿ ಕನಿಷ್ಠ 500 ಸಸಿಗಳನ್ನು ಜೂ. 11ರಂದು ನೆಡಲು ಮುಂದಾಗಿದೆ. ರಾಜ್ಯದಲ್ಲಿರುವ 6,000 ಗ್ರಾ.ಪಂ.ಗಳಲ್ಲಿ ಗಿಡ ನೆಡುವ ಗುರಿ ಸುಮಾರು 30 ಲಕ್ಷ. ಇದು ಕೇವಲ ಆರಂಭವಷ್ಟೆ. ಮುಂದೆ ರಾಜ್ಯದಲ್ಲಿ 2 ಕೋಟಿ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ.

ಇದುವರೆಗೆ ಮಳೆಗಾಲದಲ್ಲಿ ವನಮಹೋತ್ಸವದ ಸಂದರ್ಭ ಅರಣ್ಯ ಇಲಾಖೆ ಸಹಯೋಗದಲ್ಲಿ ಶಾಲೆ, ಅಂಗನವಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಡಲಾಗುತ್ತಿತ್ತು. ಈ ಬಾರಿ ಜೂ. 11ರಂದು ದಿನ ನಿಗದಿಪಡಿಸಿ ಗಿಡ ನೆಡಲು ಗಮನವನ್ನು ಕೇಂದ್ರೀಕರಿಸಲಾಗಿದೆ. ಗೋಮಾಳ, ರುದ್ರಭೂಮಿ, ಹುಲ್ಲುಗಾವಲು, ರಸ್ತೆ ಬದಿ, ಕೆರೆಯ ಅಕ್ಕಪಕ್ಕ, ಸರಕಾರಿ ಪಾಳುಭೂಮಿ, ಶಾಲಾ ಕಾಲೇಜು, ವಿ.ವಿ., ಸರಕಾರಿ ಕಚೇರಿ, ಖಾಸಗಿ ಕಚೇರಿ ಜಾಗ ಇತ್ಯಾದಿ ಮಾಹಿತಿಯನ್ನು ಸಂಗ್ರಹಿಸಿ ಅರಣ್ಯ ಬೆಳೆಸಲು ಸಿದ್ಧತೆ ಮಾಡಿಕೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ಪ್ರತಿ ಜಿಲ್ಲೆಗಳಿಗೆ ಸೂಚನೆ ನೀಡಿದೆ.

ರೈತರ ಜಮೀನಿನಲ್ಲಿ, ಕೃಷಿ ಅನುಪಯುಕ್ತ ಭೂಮಿಗಳ ಮಾಹಿತಿ ಸಂಗ್ರಹಿಸಿ ಅವರಿಂದಲೂ ಗಿಡಗಳನ್ನು ನೆಡಲು ಪ್ರೋತ್ಸಾಹಿಸಬೇಕೆಂಬ ಗುರಿಯೂ ಇದೆ. ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ವಿಭಾಗ, ತೋಟಗಾರಿಕೆ ಇಲಾಖೆಗಳಲ್ಲಿ ಬೆಳೆಸಿದ ಸಸ್ಯಗಳನ್ನು ಖರೀದಿಸಿ ಗಿಡಗಳನ್ನು ನೆಡಲಾಗುತ್ತಿದೆ.

ಗಿಡಗಳನ್ನು ನೆಟ್ಟರೆ ಸಾಲದು, ಇವುಗಳ ಪಾಲನೆ ನಡೆಯಬೇಕು. ಇದಕ್ಕೆ ಬೇಕಾದ ಗುಂಡಿಗಳನ್ನು ತೆಗೆದು ಮಳೆ ಬರುವಾಗ ಗಿಡಗಳನ್ನು ನೆಡಲು ಸಿದ್ಧತೆ ನಡೆಸಲಾಗುತ್ತಿದೆ. ಇದುವರೆಗೂ ಮಳೆ ಬಾರದ ಕಾರಣ ಜೂ. 11ರೊಳಗೆ ಗಿಡ ನೆಡಲು ಬೇಕಾದ ವಾತಾವರಣ ಸಜ್ಜಾಗಬಹುದೆ ಎಂಬ ಸಂಶಯ ಉಂಟಾಗುತ್ತಿದೆ. ಇಂತಹ ಸಂದರ್ಭ ಉಂಟಾದರೆ ಸರಕಾರ ದಿನಾಂಕವನ್ನು ಪರಿಷ್ಕರಿಸಲೂಬಹುದು.

ಸರಕಾರದ ಸಮುದಾಯ ಜಮೀನಿನಲ್ಲಿ ಬೆಳೆಸಿದ ಗಿಡಗಳಿಂದ ಲಭ್ಯವಾಗುವ ಕಿರು ಅರಣ್ಯ ಉತ್ಪನ್ನಗಳ ಮಾರಾಟದಿಂದ ಬರುವ ಹಣವನ್ನು ಅರಣ್ಯವನ್ನು ಸತತ ಸಂರಕ್ಷಣೆ ಮಾಡಿದ ಕೂಲಿಕಾರರಿಗೆ ಶೇ.50, ಸಮುದಾಯಕ್ಕೆ ಶೇ.25, ನಿರ್ವಹಣೆಗೆ ಶೇ.25 ಮೀಸಲಿರಿಸಲೂ ನಿರ್ಧರಿಸಲಾಗಿದೆ.

ಮುಂದಿನ ದಿನಗಳಲ್ಲಿ ಅರಣ್ಯ ಪ್ರದೇಶಗಳನ್ನು ಬೆಳೆಸಲು ಪ್ರತಿ ಗ್ರಾ.ಪಂ. ಆದಾಯದ ಶೇ.1 ಭಾಗವನ್ನು ಇದಕ್ಕೆ ಮೀಸಲಿಡಲೂ ಸರಕಾರಿ ಚಿಂತನೆ ನಡೆಸಿದೆ.

ಸೂಚನೆ ನೀಡಲಾಗಿದೆ.
ಜಿಲ್ಲೆಯ ಎಲ್ಲ 158 ಗ್ರಾ.ಪಂ.ಗಳ ಶಾಲೆ, ಅಂಗನವಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಗಿಡಗಳನ್ನು ನೆಡಲಾಗುವುದು. ಈ ಕುರಿತು ಗ್ರಾ.ಪಂ.ಗಳಿಗೆ
ಸೂಚನೆ ನೀಡಲಾಗಿದೆ.
-ಸಿಂಧು ಬಿ. ರೂಪೇಶ್‌, ಜಿ.ಪಂ. ಸಿಇಒ, ಉಡುಪಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.