June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ


Team Udayavani, Jun 18, 2024, 12:09 AM IST

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

ಪಡುಬಿದ್ರಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಪ್ರತಿಯೊಂದು ಕಂಬಳಕ್ಕೆ ಸರಕಾರವು ತಲಾ 5 ಲಕ್ಷ ರೂ. ಅನುದಾನವನ್ನು ಹಿಂದೆ ನೀಡುತ್ತಿದ್ದು, ಈ ವರ್ಷ ಬಿಡುಗಡೆ ಯಾಗಿಲ್ಲ. ಕೂಡಲೇ ಅನುದಾನ ಬಿಡುಗಡೆ ಆಗ್ರಹಿಸಿ ಜೂ. 27ರಂದು ಜಿಲ್ಲಾ ಕಂಬಳ ಸಮಿತಿಯಿಂದ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡುವ ಕುರಿತು ತೀರ್ಮಾನಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ತಿಳಿಸಿದ್ದಾರೆ.

ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಜೂ. 16ರಂದು ಜರಗಿದ ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ಸರಕಾರದ ಅನುದಾನ ಬಿಡುಗಡೆ ಕುರಿತು ಸಮಿತಿಯ ಪದಾಧಿಕಾರಿಗಳು, ಕಂಬಳಗಳ ವ್ಯವಸ್ಥಾಪಕರ ಜತೆ ನಡೆದ ಸಮಾಲೋಚನೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಂಬಳವನ್ನು ಬೆಳೆಸಿ, ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರೋತ್ಸಾಹಿಸಬೇಕು. 24 ಕಂಬಳಗಳಿಗೆ ಅನುದಾನ ತಲಾ 5 ಲಕ್ಷ ರೂ. ಮಂಜೂರಾಗಿದ್ದರೂ ಬಿಡುಗಡೆ ಯಾಗಿಲ್ಲ. ಸ್ಪೀಕರ್‌ ಯು. ಟಿ. ಖಾದರ್‌ ನೇತೃತ್ವದಲ್ಲಿ ಜೂ. 27ರಂದು ಕಂಬಳ ಸಮಿತಿಯ ಪ್ರಮುಖರು, ಕಂಬಳ ವ್ಯವಸ್ಥಾ ಪಕರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ, ಕ್ರೀಡಾ ಸಚಿವರು, ಪ್ರವಾಸೋದ್ಯಮ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರನ್ನು ಭೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತೇವೆ. ಕಂಬಳದ ಮಹತ್ವದ ಕುರಿತು ಮನವರಿಕೆ ಮಾಡುತ್ತೇವೆ. ಸದಾನಂದ ಗೌಡರು ಸಿಎಂ ಆಗಿದ್ದಾಗ 1 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದರೂ ತಾಂತ್ರಿಕ ಕಾರಣಗಳಿಂದ 35 ಲಕ್ಷ ರೂ. ಮಾತ್ರ ಕಂಬಳಕ್ಕೆ ವಿನಿಯೋಗಿಸಲು ಸಾಧ್ಯವಾಗಿದೆ. ಉಳಿದ ಮೊತ್ತ ಸರಕಾರಕ್ಕೆ ಹಿಂದೆ ಹೋಗಿದೆ ಎಂದು ಡಾ| ಶೆಟ್ಟಿ ಹೇಳಿದರು.

ಮಂಗಳೂರು ಕಂಬಳದ ವ್ಯವಸ್ಥಾಪಕ, ನೂತನ ಸಂಸದರಾಗಿರುವ ಕ್ಯಾ| ಬ್ರಿಜೇಶ್‌ ಚೌಟ ಅವರ ಅನುಪಸ್ಥಿತಿಯಲ್ಲಿ ಅಭಿನಂದಿಸಲಾಯಿತು.

ಕಟ್ಟುನಿಟ್ಟಿನ ನಿಯಮ ಜಾರಿ
ಕಂಬಳದ ಓಟಗಾರರು ಒಂದು ಕೂಟದಲ್ಲಿ ಗರಿಷ್ಠ 3 ಜತೆ ಕೋಣಗಳನ್ನು ಮಾತ್ರ ಓಡಿಸಬೇಕು ಎಂಬ ನಿಯಮವನ್ನು ಮುಂದಿನ ಕಂಬಳಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಕಂಬಳ ಶಿಸ್ತು ಸಮಿತಿ ಅಧ್ಯಕ್ಷ ಭಾಸ್ಕರ್‌ ಎಸ್‌. ಕೋಟ್ಯಾನ್‌ ಹೇಳಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಚ್ಚಾರು ಕಲ್ಕುಡೆ ಲೋಕೇಶ್‌ ಶೆಟ್ಟಿ, ಗೌರವಾಧ್ಯಕ್ಷ ಎರ್ಮಾಳು ರೋಹಿತ್‌ ಹೆಗ್ಡೆ, ತೀರ್ಪುಗಾರರ ಸಂಚಾಲಕ ವಿಜಯ ಕುಮಾರ್‌ ಕಂಗಿನಮನೆ, ಉಪಾಧ್ಯಕ್ಷರಾದ ನವೀನ್‌ಚಂದ್ರ ಆಳ್ವ ತಿರುವೈಲುಗುತ್ತು, ಶ್ರೀಕಾಂತ್‌ ಭಟ್‌ ನಂದಳಿಕೆ, ರಶ್ಮಿತ್‌ ಶೆಟ್ಟಿ ಹೊಕ್ಕಾಡಿಗೋಳಿ, ಸತೀಶ್ಚಂದ್ರ ಸಾಲ್ಯಾನ್‌, ಸಮಿತಿಯ ಮಾಜಿ ಅಧ್ಯಕ್ಷ ಪಿ. ಆರ್‌. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Ad

ಟಾಪ್ ನ್ಯೂಸ್

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ

Bgk-Kudalasangama

ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ವಿವಾದ ತಾತ್ಕಾಲಿಕ ಅಂತ್ಯ

Fraud Case; ಬಿಲ್ಲಾಡಿ: ಹಣ ದ್ವಿಗುಣಗೊಳಿಸುವುದಾಗಿ ಸರಣಿ ವಂಚನೆ ಆರೋಪ

Fraud Case; ಬಿಲ್ಲಾಡಿ: ಹಣ ದ್ವಿಗುಣ ಆಮಿಷವೊಡ್ಡಿ ಲಕ್ಷಾಂತರ ರೂ., ಚಿನ್ನ ವಂಚನೆ

No compromise on eliminating terrorism: S Jaishankar

SCO: ಉಗ್ರವಾದ ನಿರ್ಮೂಲನೆಯಲ್ಲಿ ರಾಜಿ ಬೇಡ: ಜೈಶಂಕರ್‌ ಗುಡುಗು

ಮಲ್ಟಿಪ್ಲೆಕ್ಸ್‌ ದುಬಾರಿ ಟಿಕೆಟ್‌ಗೆ ತಡೆ? ಕಾಯ್ದೆಗೆ ತಿದ್ದುಪಡಿ, ಆಕ್ಷೇಪಕ್ಕೆ ಆಹ್ವಾನ

ಮಲ್ಟಿಪ್ಲೆಕ್ಸ್‌ ದುಬಾರಿ ಟಿಕೆಟ್‌ಗೆ ತಡೆ? ಕಾಯ್ದೆಗೆ ತಿದ್ದುಪಡಿ, ಆಕ್ಷೇಪಕ್ಕೆ ಆಹ್ವಾನ

Ramalinga-Reddy–minister

ಮಂತ್ರಾಲಯದಲ್ಲಿ ಇನ್ನೊಂದು ವಸತಿ ಗೃಹ ನಿರ್ಮಾಣ: ಸಚಿವ ರಾಮಲಿಂಗಾ ರೆಡ್ಡಿ

Manipal: ಮಳೆ ಹಾನಿಗೆ ತುರ್ತು ಸ್ಪಂದನೆಗೆ ಜಿಲ್ಲಾಧಿಕಾರಿ ಸೂಚನೆ

Manipal: ಮಳೆ ಹಾನಿಗೆ ತುರ್ತು ಸ್ಪಂದನೆಗೆ ಜಿಲ್ಲಾಧಿಕಾರಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಮಳೆ ಹಾನಿಗೆ ತುರ್ತು ಸ್ಪಂದನೆಗೆ ಜಿಲ್ಲಾಧಿಕಾರಿ ಸೂಚನೆ

Manipal: ಮಳೆ ಹಾನಿಗೆ ತುರ್ತು ಸ್ಪಂದನೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Udupi: ಮೀನುಗಾರರು ಹವಾಮಾನ ಇಲಾಖೆ ಮುನ್ಸೂಚನೆ ಪಾಲಿಸಿ: ಸಚಿವ ಮಂಕಾಳ ವೈದ್ಯ

Udupi: ಮೀನುಗಾರರು ಹವಾಮಾನ ಇಲಾಖೆ ಮುನ್ಸೂಚನೆ ಪಾಲಿಸಿ: ಸಚಿವ ಮಂಕಾಳ ವೈದ್ಯ

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ

Dina Bhavishya

Daily Horoscope ;ತಾವಾಗಿ ಒಲಿದು ಬಂದ ಅವಕಾಶಗಳ ಸದುಪ ಯೋಗ

Bgk-Kudalasangama

ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಬೀಗ ವಿವಾದ ತಾತ್ಕಾಲಿಕ ಅಂತ್ಯ

Fraud Case; ಬಿಲ್ಲಾಡಿ: ಹಣ ದ್ವಿಗುಣಗೊಳಿಸುವುದಾಗಿ ಸರಣಿ ವಂಚನೆ ಆರೋಪ

Fraud Case; ಬಿಲ್ಲಾಡಿ: ಹಣ ದ್ವಿಗುಣ ಆಮಿಷವೊಡ್ಡಿ ಲಕ್ಷಾಂತರ ರೂ., ಚಿನ್ನ ವಂಚನೆ

No compromise on eliminating terrorism: S Jaishankar

SCO: ಉಗ್ರವಾದ ನಿರ್ಮೂಲನೆಯಲ್ಲಿ ರಾಜಿ ಬೇಡ: ಜೈಶಂಕರ್‌ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.