ಕೃಷಿ ಸೌಲಭ್ಯಕ್ಕಾಗಿ ಕೆ-ಕಿಸಾನ್‌ ನೋಂದಣಿ ಕಡ್ಡಾಯ

ಒಮ್ಮೆ ನೋಂದಾಯಿಸಿದರೆ ಮತ್ತೆ ದಾಖಲೆ ಬೇಕಿಲ್ಲ; ಪುನರಪಿ ಸೌಲಭ್ಯ ಪಡೆಯುವಂತಿಲ್ಲ

Team Udayavani, May 28, 2019, 6:13 AM IST

kissan

ಕೋಟ: ರಾಜ್ಯದ ರೈತರು ಕೃಷಿ ಇಲಾಖೆಯ ಸೌಲಭ್ಯಗಳನ್ನು ಪಡೆಯುವುದಕ್ಕೆ ಕೆ-ಕಿಸಾನ್‌ ತಂತ್ರಾಂಶ ಯೋಜನೆಯಲ್ಲಿ ನೋಂದಾಯಿಸಿಕೊಳ್ಳುವುದನ್ನು ಈ ಮುಂಗಾರಿನಿಂದ ಕಡ್ಡಾಯಗೊಳಿಸಿದೆ. ಯೋಜನೆಪಾರದರ್ಶಕವಾಗಿ ರೈತರ ಕೈಸೇರುವುದು ಇದರ ಉದ್ದೇಶ.

ಪದೇಪದೇ ದಾಖಲೆ ನೀಡುವುದರಿಂದ ಮುಕ್ತಿ, ಇಲಾಖೆಯಸೌಲಭ್ಯವಿತರಣೆಯಲ್ಲಿ ತಾರತಮ್ಯ ನಿವಾರಣೆ, ದುರ್ಬಳಕೆ ತಡೆ ಇದರಿಂದ ಸಾಧ್ಯವಾಗಲಿದೆ. ಹಾಗೆಂದು ಇದು ಹೊಸದಲ್ಲ. ಸಮಗ್ರ ರೈತ ಮಾಹಿತಿ ಸಂಗ್ರಹವನ್ನೊಳಗೊಂಡ ಈ ತಂತ್ರಾಂಶ ಯೋಜನೆಯನ್ನು ಇಲಾಖೆ ನಾಲ್ಕೈದು ವರ್ಷಗಳ ಹಿಂದೆಜಾರಿಗೊಳಿಸಿತ್ತು. ಆದರೆ ಸಮರ್ಪಕವಾಗಿ ಜಾರಿಗೊಂಡಿರಲಿಲ್ಲ.

ಏನಿದು ಕೆ-ಕಿಸಾನ್‌?

ಕರ್ನಾಟಕ ಕೃಷಿ ಮಾಹಿತಿ ಮತ್ತು ಅಂತರ್ಜಾಲ ತಾಣ ಯೋಜನೆ (ಕೆ-ಕಿಸಾನ್‌) ಯಡಿ ತಂತ್ರಾಂಶ ರೂಪುಗೊಳಿಸಲಾಗಿದೆ. ಇದರಲ್ಲಿ ರೈತ ಕುಟುಂಬದ ಸದಸ್ಯರ ಹೆಸರು, ಬೆಳೆಮಾಹಿತಿ, ಭೂಮಿ, ಆಧಾರ್‌ ನಂಬರ್‌,ಬ್ಯಾಂಕ್‌ ಖಾತೆ ಸಂಖ್ಯೆ, ಮಣ್ಣಿನ ಗುಣಮಟ್ಟ ಮುಂತಾದ ಮಾಹಿತಿ ಕಲೆ ಹಾಕಿ ಅಪ್‌ಲೋಡ್‌ ಮಾಡಲಾಗುತ್ತದೆ. ಅದರ ಆಧಾರದ ಮೇಲೆ ಪ್ರತಿ ರೈತನಹೆಸರಿಗೆ ಒಂದು ಯುನೀಕ್‌ ಐಡಿ ಕಾರ್ಡ್‌ ಕೊಡಲಾಗುತ್ತದೆ. ಕೃಷಿ ಇಲಾಖೆಯ ಯಾವುದೇ ಸೌಲಭ್ಯಗಳನ್ನು ಪಡೆಯಲು ಈ ಕಾರ್ಡ್‌ ಅಗತ್ಯ.

ನೋಂದಣಿ ಹೀಗೆ

ಜಮೀನಿನ ಆರ್‌ಟಿಸಿ, ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಪುಸ್ತಕದ ಜೆರಾಕ್ಸ್‌, ಖಾತೆದಾರನ ಫೋಟೋ ಇವಿಷ್ಟನ್ನು ರೈತಸಂಪರ್ಕ ಕೇಂದ್ರಕ್ಕೆ ನೀಡಿ ಕೆ-ಕಿಸಾನ್‌ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಬಹುದು. ಪ. ಜಾತಿ ಮತ್ತು ಪ.ಪಂಗಡದವರಿಗೆ ಜಾತಿ ಪ್ರಮಾಣ ಪತ್ರ ಅಗತ್ಯ.

ಪ್ರಯೋಜನವೇನು?

ಒಮ್ಮೆ ನೋಂದಾಯಿಸಿಕೊಂಡರೆ ವಿವಿಧ ಯೋಜನೆಗಳಿಗೆ ರೈತರು ಪದೇಪದೇ ದಾಖಲೆ ಕೊಡುವ ಅಗತ್ಯವಿಲ್ಲ. ಆಧಾರ್‌ ಅಥವಾ ಯುನೀಕ್‌ ಐಡಿ ನಮೂದಿಸಿದರೆ ಸಾಕು. ಇದರಿಂದ ತಾರತಮ್ಯ, ದುರ್ಬಳಕೆ ತಡೆಯಬಹುದು.

ಸ್ಥಳದಲ್ಲೇ ನೋಂದಣಿ

ನೋಂದಣಿ ಕಡ್ಡಾಯವಾಗಿದ್ದು, ಮುಂಗಾರು ಕೃಷಿ ಸಲಕರಣೆಗಳನ್ನು ಖರೀದಿಸುವ ರೈತರಿಗೆ ಸಮಸ್ಯೆ ಆಗಬಾರದು ಎಂದು ಕೃಷಿಕೇಂದ್ರಕ್ಕೆ ಆಗಮಿಸುವ ಸಂದರ್ಭದಲ್ಲೇ ದಾಖಲೆನೀಡಿದರೆ ನೋಂದಣಿ ವ್ಯವಸ್ಥೆ ಮಾಡಲಾಗುತ್ತಿದೆ.

ಸಮಾನ ಹಂಚಿಕೆ ಪದ್ಧತಿ

ರೈತನು ಜಂಟಿ ಖಾತೆ ಹೊಂದಿದ್ದರೂ ಸಮಸ್ಯೆ ಇಲ್ಲ. ಉದಾಹರಣೆಗೆ, ಒಂದು ಎಕರೆ ಜಮೀನಿನಲ್ಲಿ ಐದು ಮಂದಿ ಜಂಟಿ ಖಾತೆ ಹೊಂದಿದ್ದರೆ ಆ ಐವರಿಗೂ ಸಮಾನ ಹಂಚಿಕೆ ರೂಪದಲ್ಲಿ ತಲಾ 20 ಸೆಂಟ್ಸ್‌ ನಮೂದಾಗುತ್ತದೆ. ಇದಕ್ಕೆ ಅನುಗುಣವಾದ ಸೌಲಭ್ಯಗಳನ್ನು ಪಡೆಯಬಹುದು. ಐವರಲ್ಲಿ ಯಾರಾದರೂ ತನಗೆ ನೋಂದಣಿ ಅಗತ್ಯವಿಲ್ಲ ಎಂದು ಲಿಖೀತವಾಗಿ ತಿಳಿಸಿದಲ್ಲಿ ಮಿಕ್ಕುಳಿದವರಿಗೆ ಹೆಚ್ಚುವರಿ ಸೌಲಭ್ಯ ಸಿಗುತ್ತದೆ. ಖಾತೆದಾರರು ಸಾವನ್ನಪ್ಪಿದ್ದರೆ ಸಮಸ್ಯೆ ಆರ್‌ಟಿಸಿ ಹೊಂದಿರುವ ಖಾತೆದಾರ ಸಾವನ್ನಪ್ಪಿದ್ದರೆ ಖಾತೆ ಬದಲಾಗುವ ತನಕ ಕುಟುಂಬ ಸದಸ್ಯರ ಹೆಸರು ನೋಂದಣಿ ಸಾಧ್ಯವಿಲ್ಲ. ಇದರಿಂದ ಆ ಕುಟುಂಬ ಸೌಲಭ್ಯದಿಂದ ವಂಚಿತವಾಗುತ್ತದೆ.
ಗೊಂದಲ ಬೇಡ

ಇಲಾಖೆಯ ಯೋಜನೆ ಸಮರ್ಪಕವಾಗಿ, ಪಾರದರ್ಶಕವಾಗಿ ಹಂಚಿಕೆಯಾಗಲು ಮತ್ತು ಪದೇಪದೇ ದಾಖಲೆಗಳನ್ನು ನೀಡುವುದರಿಂದ ಮುಕ್ತಿ ನೀಡಲು ಕೆ-ಕಿಸಾನ್‌ ಯೋಜನೆ ಕಡ್ಡಾಯಗೊಳಿಸಲಾಗಿದೆ. ಖಾತೆದಾರ ಸಾವನ್ನಪ್ಪಿದ ಸಂದರ್ಭ ವಿನಾ ಬೇರೆ ಯಾವುದೇ ಕಾರಣದಿಂದ ಸಮಸ್ಯೆ ಇಲ್ಲ. ಆದ್ದರಿಂದ ಈ ಕುರಿತು ಗೊಂದಲ ಬೇಡ.
– ಕೆಂಪೇಗೌಡ ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ಉಡುಪಿ ಜಿಲ್ಲೆ
– ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.