ಉಪ್ಪು ತಿಂದವ ನೀರು ಕುಡಿಯಲೇ ಬೇಕು: ಭ್ರಷ್ಟಾಚಾರ ಆರೋಪಕ್ಕೆ ಈಶ್ವರಪ್ಪ ಪ್ರತಿಕ್ರಿಯೆ


Team Udayavani, Mar 15, 2023, 8:10 AM IST

ಉಪ್ಪು ತಿಂದವ ನೀರು ಕುಡಿಯಲೇ ಬೇಕು: ಭ್ರಷ್ಟಾಚಾರ ಆರೋಪಕ್ಕೆ ಈಶ್ವರಪ್ಪ ಪ್ರತಿಕ್ರಿಯೆ

ಮಣಿಪಾಲ: ಉಪ್ಪು ತಿಂದವ ನೀರು ಕುಡಿಯಲೇ ಬೇಕು. ಹಾಗೆಯೇ ಭ್ರಷ್ಟಾಚಾರ ಮಾಡಿದವರಿಗೆ ಶಿಕ್ಷೆ ಆಗಲೇ ಬೇಕು. ಅದು ಯಾವುದೇ ಪಕ್ಷದವರಾದರೂ ಸರಿ. ನನ್ನ ಮೇಲಿನ ಆರೋಪದ ಸಂಪೂರ್ಣ ತನಿಖೆಯಾಗಿದೆ ಮತ್ತು ನಿರಪರಾಧಿ ಎಂಬುದು ಸಾಬೀತಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಡಿ.ಕೆ. ಶಿವಕುಮಾರ್‌ ಅವರ ಮನೆ ಮೇಲೆ ಇ.ಡಿ. ದಾಳಿ ನಡೆದ ಸಂದರ್ಭದಲ್ಲಿ ಸಾವಿರ ಕೋ.ರೂ. ಸಿಕ್ಕಿದೆ. ಅವರು ತಿಹಾರ್‌ ಜೈಲಿಗೂ ಹೋಗಿ ಬಂದಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅರ್ಕಾವತಿ ಬಡಾವಣೆ ರಿಡೂ ಹೆಸರಿನಲ್ಲಿ 800 ಎಕರೆ ಡಿನೋಟಿಫಿಕೇಶನ್‌ ಮಾಡಿ 8 ಸಾವಿರ ಕೋ.ರೂ. ಲೂಟಿ ಮಾಡಿ ದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್‌ ಏಜೆಂಟ್‌. ಕಾಂಗ್ರೆಸ್‌ ತಾನು ಮಾಡಿದ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಶೇ. 40 ಕಮಿಷನ್‌ ಆರೋಪ ಮಾಡುತ್ತಿದೆ. ಭ್ರಷ್ಟಾಚಾರ ಯಾರೇ ಮಾಡಿದ್ದರೂ ಶಿಕ್ಷೆ ಅನುಭವಿಸಲಿದ್ದಾರೆ ಎಂದು ಮಂಗಳವಾರ ಮಣಿಪಾಲದ ಹೊಟೇಲ್‌ ಕಂಟ್ರಿಇನ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಯುವ ಜನತೆ ಸ್ಪಂದನೆ
ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯು ಕೇಂದ್ರ ಹಾಗೂ ರಾಜ್ಯ ಸರಕಾರದ ಸಮರ್ಥ ನಾಯಕತ್ವ, ಅಭಿವೃದ್ಧಿ ಕಾರ್ಯಗಳು, ಕಾಂಗ್ರೆಸ್‌ ಪಕ್ಷದ ದುರಾಡಳಿತ, ಭ್ರಷ್ಟಾಚಾರ ನೀತಿ ವಿರೋಧಿಸಿ ಹಾಗೂ ದೇಶ ರಕ್ಷಣೆ, ಸಂಸ್ಕೃತಿ ಉಳಿಸಿ ಬೆಳೆಸಲು ಬಿಜೆಪಿಯನ್ನು ಬೆಂಬಲಿಸಿ ಎಂಬ ವಿಚಾರದೊಂದಿಗೆ ನಾಲ್ಕು ತಂಡಗಳಲ್ಲಿ ರಾಜ್ಯಾದ್ಯಂತ ಸಂಚಾರ ಮಾಡುತ್ತಿದೆ. ಎಲ್ಲೆಡೆ ಯುವ ಸಮೂಹದಿಂದ ಉತ್ತಮ ಪ್ರತಿಕ್ರಿಯೆ, ಬೆಂಬಲ ವ್ಯಕ್ತ ವಾಗುತ್ತಿದೆ ಎಂದರು.

ಪಾಪ ತೊಳೆಯಲಿ
ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿದ್ದಾಗ ಹಲವು ಬಾರಿ ಉಡುಪಿಗೆ ಬಂದಿದ್ದರೂ ಶ್ರೀಕೃಷ್ಣ ಮಠಕ್ಕೆ ಬಂದಿ ರಲಿಲ್ಲ. ಹೀಗಾಗಿಯೇ ಅವರ ಮುಖ್ಯ ಮಂತ್ರಿ ಹುದ್ದೆ ಕೈತಪ್ಪಿತು, ಚಾಮುಂಡಿ ಕ್ಷೇತ್ರದಲ್ಲಿ ಸೋತರು. ಇನ್ನಾದರೂ ತಮ್ಮ ಪಾಪ ಕಳೆದುಕೊಳ್ಳಲು ಅವರು ಶ್ರೀಕೃಷ್ಣ ದರ್ಶನ ಮಾಡಬೇಕು. ಕನಕ ದಾಸರಿಗೆ ಶ್ರೀಕೃಷ್ಣನಿಂದ ಸ್ಫೂರ್ತಿ ಸಿಕ್ಕಿದ ಸ್ಥಳವಿದು. ಇತ್ತೀಚಿಗೆ ಸಿದ್ದರಾಮಯ್ಯ ದೇವಸ್ಥಾನ ಹಾಗೂ ಧರ್ಮಗಳ ಬಗ್ಗೆ ಟೀಕೆ ಮಾಡುವುದು ಕಡಿಮೆ ಮಾಡಿದ್ದಾರೆ. ದೇವಸ್ಥಾನದ ಜೀರ್ಣೋದ್ಧಾರಕ್ಕೂ ದೇಣಿಗೆ ನೀಡುತ್ತಿ ದ್ದಾರೆ. ಸಿದ್ದರಾಮಯ್ಯ ಬಗ್ಗೆ ವೈಯಕ್ತಿಕ ದ್ವೇಷವಿಲ್ಲ. ದೇಶದ್ರೋಹಿಗಳನ್ನು ಮತ್ತು ಧರ್ಮದ್ರೋಹಿಗಳನ್ನು ದ್ವೇಷಿ ಸುತ್ತೇನೆ ಎಂದರು.

ಚಿಂತೆಯಲ್ಲಿ ಕಾಂಗ್ರೆಸ್‌
ಕಾಂಗ್ರೆಸ್‌ಗೆ ನಿರ್ದಿಷ್ಟ ಅಜೆಂಡಾವೇ ಇಲ್ಲ. ಯಾರಧ್ದೋ ಮನೆಯ ಕೂಸು ನಮ್ಮದು ಎನ್ನುವ ಪರಿಸ್ಥಿತಿಯಲ್ಲಿದೆ. ಅದನ್ನು ಒಪ್ಪಲು ಸಾಧ್ಯವಿಲ್ಲ. ಅವರಿಗೆ ಚುನಾವಣೆ ಎದುರಿಸುವುದು ಹೇಗೆ ಎಂಬ ಚಿಂತೆ ಆರಂಭವಾಗಿದೆ. ಬೇರೆಯವರು ಮಾಡಿದ ಅಭಿವೃದ್ಧಿ ಕಾರ್ಯವನ್ನು ತಮ್ಮದು ಎಂದು ಹೇಳುವ ಮನಃಸ್ಥಿತಿ ಕಾಂಗ್ರೆಸ್‌ಗೆ ಬಂದುಬಿಟ್ಟಿದೆ ಎಂದು ಟೀಕಿಸಿದರು.

ಕುಟುಂಬ ರಾಜಕಾರಣ ಇಲ್ಲ
ಪಕ್ಷ ಟಿಕೆಟ್‌ ನೀಡಿದರೆ ಸ್ಪರ್ಧಿ ಸುತ್ತೇನೆ. ಮಗನಿಗೆ ಟಿಕೆಟ್‌ ಕೊಟ್ಟರೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾನು ಸ್ಪರ್ಧಿಸಿದರೆ ಮಗನಿಗೆ ಟಿಕೆಟ್‌ ಕೇಳುವುದಿಲ್ಲ. ಯಾರಿಗಾದರೂ ಒಬ್ಬರಿಗೆ ಮಾತ್ರ. ಅದೂ ಕೊಡದಿದ್ದರೆ ಸುಮ್ಮನೆ ಇರುತ್ತೇವೆ. ಪಕ್ಷ ಎಲ್ಲವನ್ನೂ ನೀಡಿದೆ ಎಂದರು.

ಸಚಿವರಾದ ಎಸ್‌. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಪ್ರಮುಖರಾದ ಕುಯಿಲಾಡಿ ಸುರೇಶ್‌ ನಾಯಕ್‌, ಉದಯ ಕುಮಾರ್‌ ಶೆಟ್ಟಿ, ಶಾಸಕರಾದ ರಘುಪತಿ ಭಟ್‌, ಲಾಲಾಜಿ ಮೆಂಡನ್‌, ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ಸಿಂಹ ನಾಯಕ್‌, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್‌, ಹಿಂ. ಮೋರ್ಚಾದ ರಾ.ಪ್ರ. ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ, ಜಿಲ್ಲಾ ಪ್ರ. ಕಾರ್ಯದರ್ಶಿ ನವೀನ್‌ ಶೆಟ್ಟಿ ಕುತ್ಯಾರು, ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ, ಪ್ರಮುಖರಾದ ಕಿಶೋರ್‌ ಕುಂದಾಪುರ ಇದ್ದರು.

ಟಾಪ್ ನ್ಯೂಸ್

5-vitla

Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ

ramesh jigajinagi

Vijayapura; ಜೆಡಿಎಸ್ ಹೊಂದಾಣಿಕೆಯಿಂದ ಬಲ ಬಂದಿದೆ: ಸಂಸದ ಜಿಗಜಿಣಗಿ

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು

Desi Swara: ಕಲ್ಲಿನಲ್ಲೇ ಅರಳಿದ ನೈಸರ್ಗಿಕ ವಿಸ್ಮಯದ ತಾಣವಿದು…

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ

Indian Flag: ರಾಷ್ಟ್ರ‌ಧ್ವಜಕ್ಕೆ ಮದೀನಾ ಗುಂಬಜ್ ಚಿತ್ರ ಹಾಕಿ ಅಪಮಾನ: ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Yadagiri; ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

Yadagiri; ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

5-vitla

Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Desi Swara: ಬಾಪುವಿನೊಂದಿಗೆ ಮಕ್ಕಳ ಕಲರವ

Desi Swara: ಬಾಪುವಿನೊಂದಿಗೆ ಮಕ್ಕಳ ಕಲರವ

4-kottigehara

Kottigehara: ಧಾರಾಕಾರ ಮಳೆ, ಹೈರಾಣಾದ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.