Kadaba ನಾಪತ್ತೆಯಾಗಿರುವ ವ್ಯಕ್ತಿಗಾಗಿ ಹುಡುಕಾಟ
Team Udayavani, Aug 27, 2023, 12:40 AM IST
ಕಡಬ: ಎಡಮಂಗಲ ಗ್ರಾಮದ ಪಾದೆ ಮನೆ ನಿವಾಸಿ, ಕೂಲಿ ಕಾರ್ಮಿಕ ಬಾಲಕೃಷ್ಣ ಗೌಡ (56) ಅವರು ಕಳೆದ 25 ದಿನಗಳ ಹಿಂದೆ ನಾಪತ್ತೆಯಾಗಿದ್ದು, ಅವರು ಕುಮಾರಧಾರ ನದಿಯಲ್ಲಿ ಕೊಚ್ಚಿ ಹೋಗಿರುವ ಶಂಕೆಯಿಂದ ಕಡಬ ಸಮೀಪದ ಪಿಜಕಳ ಬಳಿ ನದಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ಸದಸ್ಯರು ಶನಿವಾರ ಹುಡುಕಾಟ ನಡೆಸಿದರು.
ಬಾಲಕೃಷ್ಣ ಗೌಡ ಅವರು ಜು. 31ರಂದು ಮನೆಯಿಂದ ಹೊರ ಹೋದವರು ನಾಪತ್ತೆಯಾಗಿದ್ದರು. ಅಂದು ಮಧ್ಯಾಹ್ನ ಕಡಬದ ಪಿಜಕಳ ಬಳಿ ಅಂಗಡಿಯೊಂದಕ್ಕೆ ಹೋಗಿದ್ದ ಅವರು ಬಳಿಕ ಪಿಜಕಳ ಪಾಲೋಳಿ ಕಡೆ ತೆರಳಿರುವುದನ್ನು ಅಂಗಡಿ ಮಾಲಕರು ಗಮನಿಸಿದ್ದರು. ಪಾಲೋಳಿಯಲ್ಲಿ ಕುಮಾರಧಾರ ನದಿಗೆ ಬೃಹತ್ ಸೇತುವೆ ನಿರ್ಮಾಣವಾಗುತ್ತಿದ್ದು, ಅದರ ಕೆಳ ಭಾಗದಲ್ಲಿ ಕೆಲವರು ನೀರು ಕಡಿಮೆ ಇದ್ದಾಗ ನದಿ ದಾಟಿ ಎಡಮಂಗಲ ಭಾಗಕ್ಕೆ ಹೋಗುತ್ತಾರೆ. ಬಾಲಕೃಷ್ಣ ಗೌಡರು ಕೂಡ ಪಾಲೋಳಿ ಕಡೆ ಹೆಜ್ಜೆ ಹಾಕಿರುವುದರಿಂದ ಅವರು ಕೂಡ ನದಿ ದಾಟಿ ಹೋಗಲು ಯತ್ನಿಸಿ ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾಗಿರಬಹುದೆಂದು ಶಂಕಿಸಲಾಗಿದೆ. ಅದಕ್ಕೆ ಪೂರಕವೆಂಬಂತೆ ಅವರ ಬಳಿ ಇದ್ದ ಕೈ ಚೀಲವೊಂದು ನಾಡೋಳಿ ಎಂಬಲ್ಲಿ ಕುಮಾರಧಾರ ನದಿ ತಟದಲ್ಲಿ ಕೆಲವು ದಿನಗಳ ಹಿಂದೆ ಪತ್ತೆಯಾಗಿತ್ತು. ಆ ಹಿನ್ನೆಲೆಯಲ್ಲಿ ಈಗಾಗಲೇ ಬೆಳ್ಳಾರೆ ಪೊಲೀಸರು ನದಿ ಭಾಗದಲ್ಲಿ ಹುಡುಕಾಟ ನಡೆಸಿದ್ದಾರೆ.
ಶನಿವಾರ ಶೌರ್ಯ ತಂಡದ 8 ಜನ ಪರಿಣತಿ ಪಡೆದ ಈಜುಗಾರರು ಕುಮಾರಧಾರ ನದಿಯ ಪಾಲೋಳಿಯಿಂದ ಕೂಡಿಗೆ ತನಕ ಹುಡುಕಾಟ ನಡೆಸಿದರು. ಬೆಳಗ್ಗೆಯಿಂದ ಸಂಜೆಯ ತನಕ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇತ್ತ ಮನೆಯವರು ಬಾಲಕೃಷ್ಣ ಅವರು ಪತ್ತೆಯಾಗದ ಹಿನ್ನೆಲೆಯಲ್ಲಿ ಕಂಗಾಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ