ಕರಾವಳಿಯ ಭದ್ರತೆ, ಮೀನುಗಾರರ ರಕ್ಷಣೆಗೆ ಕಡಲು ಆ್ಯಪ್‌ ಬಿಡುಗಡೆ


Team Udayavani, Nov 15, 2020, 1:31 PM IST

ಕರಾವಳಿಯ ಭದ್ರತೆ, ಮೀನುಗಾರರ ರಕ್ಷಣೆಗೆ ಕಡಲು ಆ್ಯಪ್‌ ಬಿಡುಗಡೆ

ಮಲ್ಪೆ, ನ. 14: ಚಂಡಮಾರುತ, ಸುನಾಮಿಯಂತಹ ಪ್ರಾಕೃತಿಕ ವಿಪತ್ತು ಗಳು ಸಂಭವಿಸಿದಾಗ ಸಮುದ್ರದಲ್ಲಿ ಎಷ್ಟು ಮೀನುಗಾರಿಕೆ ದೋಣಿಗಳಿವೆ, ಎಷ್ಟು ಮೀನುಗಾರರಿದ್ದಾರೆ ಎಂಬುದೇ ಗೊತ್ತಾಗುವುದಿಲ್ಲ. ರಕ್ಷಣಾ ಕಾರ್ಯಕ್ಕೆ  ಅನುಕೂಲವಾಗಲು ಈ ನಿಖರ ಮಾಹಿತಿ ನೀಡುವ  ಮೊಬೈಲ್‌ ಆ್ಯಪ್‌ ಒಂದನ್ನು ಮೀನುಗಾರಿಕೆ ಇಲಾಖೆ ಮತ್ತು ಕರಾವಳಿ ಕಾವಲು ಪೊಲೀಸ್‌ ಇಲಾಖೆ ಅಭಿವೃದ್ಧಿಪಡಿಸಿದೆ  ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶುಕ್ರವಾರ ಕಲ್ಯಾಣಪುರ ಮೂಡು ಕುದ್ರು ಬಳಿ ನಡೆದ ಪಂಜರ ಮೀನು ಕೃಷಿ ಕಾರ್ಯಾಗಾರದಲ್ಲಿ ಕಡಲು ಆ್ಯಪ್‌ಅನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಮೀನುಗಾರಿಕೆ ದೋಣಿಗಳ ಚಲನ ವಲನಗಳ ಮೇಲೆ ನಿಗಾ ಇಡುವುದು, ಮೀನುಗಾರರು ಸಮಸ್ಯೆಗೆ  ಸಿಲುಕಿದಾಗ ನೆರವಿಗೆ ಧಾವಿಸುವುದು, ಕರಾವಳಿ ಭದ್ರತೆ ಆ್ಯಪ್‌ ರಚನೆಯ ಹಿಂದಿರುವ ಮುಖ್ಯ ಉದ್ದೇಶ. ಇದನ್ನು ಮೀನುಗಾರರು ಬಳಸಿಕೊಳ್ಳಬೇಕು ಕರಾವಳಿ ಕಾವಲು ಪೊಲೀಸ್‌ ಅಧೀಕ್ಷಕ ಚೇತನ್‌ ಆರ್‌. ಅವರು ಮಾತನಾಡಿ,  ಕರಾವಳಿ ಕಾವಲು ಪೊಲೀಸರಿಗೆ  ತಪಾಸಣೆಯ ವೇಳೆ ಈ ಆ್ಯಪ್‌ನಲ್ಲಿ ದಾಖಲಿಸಿರುವ ಮಾಹಿತಿ ಪರಿಶೀಲನೆಗೆ ಸಹಾಯಕವಾಗಲಿದೆ. ದೋಣಿಯ ಸಂಖ್ಯೆ ನಮೂದಿಸಿದರೆ, ದೋಣಿ ಮತ್ತು ಅದರಲ್ಲಿರುವ ಸಂಪೂರ್ಣ ಮಾಹಿತಿ ಸಿಗುತ್ತದೆ. ತುರ್ತು ಸಂದರ್ಭದಲ್ಲಿ ಇದು ಅತ್ಯಂತ ಪ್ರಯೋಜನಕಾರಿ ಎಂದರು.

ಕಾರ್ಯಕ್ರಮದಲ್ಲಿ ಮೀನುಗಾರಿಕೆ ಉಪ ನಿರ್ದೇಶಕ ಗಣೇಶ್‌ ಕೆ., ಪಾರ್ಶ್ವನಾಥ್‌, ಮೀನು ಮಾರಾಟ ಫೆಡರೇಶನ್ನಿನ ಅಧ್ಯಕ್ಷ ಯಶ್‌ಪಾಲ್‌ ಎ. ಸುವರ್ಣ, ಮಣಿಪಾಲ ಡೈರೆಕ್ಟರ್ ಐಸಿಟಿ, ಎಂಐಟಿ ವಿಭಾಗದ ಮುಖ್ಯಸ್ಥ ಪ್ರೊ| ಮನೋಹರ್‌ ಪೈ ಎಂ.ಎಂ., ಕಲ್ಯಾಣಪುರ ಗ್ರಾಮ ಪಂಚಾಯತ್‌ ಪಿಡಿಒ ಯೋಗಿತಾ ಬಿ., ನಗರಸಭಾ ಕೊಡವೂರು ವಾರ್ಡ್‌ ಸದಸ್ಯ ವಿಜಯ ಕೊಡವೂರು, ಪ್ರಮುಖರಾದ ವಿಶು ಕುಮಾರ್‌ ಕಲ್ಯಾಣಪುರ, ನಿತ್ಯಾನಂದ ಕರ್ಕೇರ ಉಪಸ್ಥಿತರಿದ್ದರು.

ಮೀನು ಲಭ್ಯತೆಯ ಸ್ಥಳದ ಮಾಹಿತಿ :  ಮುಂದಿನ ಹಂತದಲ್ಲಿ ಆ್ಯಪ್‌ನ ಮೂಲಕ ಸಮುದ್ರದಲ್ಲಿ ಯಾವ ಸ್ಥಳದಲ್ಲಿ ಹೆಚ್ಚು ಮೀನು ಲಭ್ಯವಾಗಲಿದೆ ಎಂಬ ಮಾಹಿತಿಯನ್ನು ಒದಗಿಸುವುದಕ್ಕೆ ತಂತ್ರಜ್ಞಾನ ಅಳವಡಿಸಲಾಗುತ್ತದೆ. ಅದೇ ರೀತಿ ಸಮುದ್ರದ ಸ್ಥಿತಿ ಹೇಗಿದೆ? ಎಂಬ ಕುರಿತು ಕೂಡ ಮಾಹಿತಿ ನೀಡಲು ಉಭಯ ಇಲಾಖೆಗಳು ಪ್ರಯತ್ನಿಸಲಿವೆ. ಇದಕ್ಕೆ ಸೆಂಟ್ರಲ್‌ ಮೆರೈನ್‌ ಫಿಶರೀಸ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌(ಸಿಎಂಎಫ್‌ಆರ್‌ಐ) ಸಹಕಾರ ನೀಡಲಿದೆ. ಈ ಕಡಲು ಆ್ಯಪ್‌ ಮೊಬೈಲ್‌ ನೆಟ್‌ವರ್ಕ್‌ ಮೂಲಕ ಕಾರ್ಯಾಚರಿಸಲಿದೆ. ಸಾಮಾನ್ಯವಾಗಿ ಸಮುದ್ರದಲ್ಲಿ 10ರಿಂದ 12 ಕಿ.ಮೀ. ವ್ಯಾಪ್ತಿಯಲ್ಲಿ ಮೊಬೈಲ್‌ ನೆಟ್‌ವರ್ಕ್‌ ಲಭಿಸುತ್ತದೆ ಎನ್ನಲಾಗಿದೆ.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.