ಕಲ್ಲೋಳಿ ಕಿಂಡಿ ಅಣೆಕಟ್ಟು: ರಸ್ತೆ ಇಲ್ಲದೆ ಇಕ್ಕಟ್ಟು!

ಹಳೆಯ ಅಣೆಕಟ್ಟು ಸೇತುವೆ ಮುಳುಗಿ ನಿತ್ಯ ಸಂಚಾರಿಗಳಿಗೆ ಸಮಸ್ಯೆ

Team Udayavani, Jan 13, 2020, 5:48 AM IST

0601BELMNE3A

ಜನರಿಗೆ ಉಪಕಾರಿಯಾದ ನಲ್ಲೆಗುತ್ತು ಕಿಂಡಿ ಅಣೆಕಟ್ಟು ಕಾರ್ಯ ಮುಗಿದಿದೆ. ಆದರೆ ಇದರೊಂದಿಗೇ ಪೂರ್ಣಗೊಳ್ಳಬೇಕಿದ್ದ ಸಂಪರ್ಕ ರಸ್ತೆ ಕಾಮಗಾರಿ ವಿಳಂಬಗೊಂಡಿರುವುದರಿಂದ ನೀರು ತುಂಬಿ ಜನರು ಪರದಾಡುವಂತಾಗಿದೆ.

ಬೆಳ್ಮಣ್‌: ಕಡಂದಲೆ ಕಲ್ಲೋಳಿಯ ನಲ್ಲೆಗುತ್ತು ಬಳಿ ನೂತನವಾಗಿ ನಿರ್ಮಿಸಲಾದ ಕಿಂಡಿ ಅಣೆಕಟ್ಟಿಗೆ ಹಲಗೆ ಹಾಕಿದ್ದರಿಂದ ನೀರು ತುಂಬಿದ್ದು ಈಗ ರಸ್ತೆ ಸಂಪರ್ಕವಿಲ್ಲದೆ ಜನರು ಪರದಾಡುವಂತಾಗಿದೆ.

ಹೊಸ ಅಣೆಕಟ್ಟಿನಲ್ಲಿ ನೀರು ತುಂಬಿದಂತೆಯೇ ಹಳೆಯ ಅಣೆಕಟ್ಟು-ಸೇತುವೆ ಮುಳುಗಿದ್ದು ಶಾಲಾ ಮಕ್ಕಳು, ಸಾರ್ವಜನಿಕರು ನೀರು ತುಂಬಿದ ಪ್ರದೇಶದಲ್ಲೇ ಅಪಾಯಕಾರಿಯಾಗಿ ಸಂಚರಿಸುವಂತಾಗಿದೆ.

ಸಂಪರ್ಕ ರಸ್ತೆ ಆಗಿಲ್ಲ
ನೂತನ ಕಿಂಡಿ ಅಣೆಕಟ್ಟುವಿಗೆ ರಸ್ತೆ ಸಂಪರ್ಕ ನಡೆಯದ ಕಾರಣ ಜನ ಈ ಹಿಂದಿನ ಓಡಾಟಕ್ಕಿದ್ದ ಹಳೆಯ ಸೇತುವೆಯನ್ನೇ ಬಳಸುತ್ತಿದ್ದಾರೆ.ಇಲ್ಲಿ ಸುಮಾರು 500 ಮೀಟರ್‌ನಷ್ಟು ರಸ್ತೆ ಕಾಮಗಾರಿ ಬಾಕಿ ಇದೆ. ಏತನ್ಮಧ್ಯೆ ನೀರು ತುಂಬಿದ್ದರೂ ಅದರ ಮೇಲೆಯೇ ಜನ ಸಂಚಾರ ನಡೆಯುತ್ತಿದೆ. ನೂತನ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣವಾದರೂ ಸಂಪರ್ಕ ರಸ್ತೆಯನ್ನು ಗುತ್ತಿಗೆದಾರರು ನಿರ್ಮಿಸದ್ದರಿಂದ ಜನರು ಕಷ್ಟಪಡುತ್ತಿದ್ದಾರೆ.

ನೀರಿನ ಮಟ್ಟ ಹೆಚ್ಚಳವಾಗಿ ಸಮಸ್ಯೆ
ಹೊಸ ಸೇತುವೆಯ ಅಣೆಕಟ್ಟುವಿಗೆ ಹಲಗೆ ಹಾಕಿದ ಬಳಿಯ ಹಳೆಯ ಅಣೆಕಟ್ಟಿನ ಸೇತುವೆ ಹಲವು ಬಾರಿ ಮುಳುಗಡೆಯಾಗಿದ್ದು ಪಕ್ಕದ ಕೃಷಿ ಭೂಮಿಗೂ ನೀರು ಆವರಿಸಿತ್ತು. ಸ್ಥಳೀಯರು ಅಪಾಯವನ್ನರಿತು ಒಂದು ಕಿಂಡಿಯನ್ನು ತೆರವು ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಕಲ್ಪಿಸಿದ್ದರು. ಇದಲ್ಲದೆ ಬೋಳ ಪಾಲಿಂಗೇರಿಯಲ್ಲಿರುವ ಅಣೆಕಟ್ಟಿನ ಹಲಗೆಯನ್ನುತೆರವು ಮಾಡಿದ್ದರಿಂದ ಇಲ್ಲಿ ನೀರಿನ ಮಟ್ಟ ಹೆಚ್ಚಾಗಿತ್ತು. ಜತೆಗೆ ನಲ್ಲೆಗುತ್ತು ಹಳೆಯ ಅಣೆಕಟ್ಟಿನ ಸೇತುವೆ ಸಂಪೂರ್ಣ ಮುಳುಗಡೆಯಾಗಿ ರಸ್ತೆಯುದ್ದಕ್ಕೂ ನೀರು ಆವರಿಸಿದೆ. ಇದರಿಂದ ಬೋಳ, ಕಡಂದಲೆ ಹಾಗೂ ಸಚ್ಚೇರಿಪೇಟೆ ಭಾಗದ ಜನ ಸಂಚಾರ ದುಸ್ತರವಾಗಿದೆ.

ರಸ್ತೆಯಲ್ಲೇ ಬಾಕಿ
ಇತ್ತೀಚೆಗೆ ಶಾಲೆ ಬಿಟ್ಟು ಮನೆಗೆ ತೆರಳಬೇಕಾದ ವಿದ್ಯಾರ್ಥಿಗಳು ನಡು ರಸ್ತೆಯಲ್ಲಿ ಉಳಿಯಬೇಕಾಯಿತು. ನೀರು ಅಣೆಕಟ್ಟೆ ಮೇಲ್ಭಾಗದಲ್ಲಿ ಹರಿಯುತ್ತಿತ್ತು. ಒಂದಷ್ಟು ವಾಹನಗಳು ನೀರಿನ ನಡುವೆ ಸಾಹಸ ಮಾಡಿಕೊಂಡು ರಸ್ತೆಯನ್ನು ದಾಟಿದರೆ ಶಾಲಾ ಮಕ್ಕಳನ್ನು ಹೊತ್ತು ತಂಡ ವಾಹನಗಳು ರಸ್ತೆಯಲ್ಲೇ ಉಳಿಯುವಂತಾಯಿತು. ಬಳಿಕ ವಿದ್ಯಾರ್ಥಿಗಳನ್ನು ಸ್ಥಳೀಯರು ನೀರಿನ ನಡುವೆ ದಡ ಸಾಗಿಸುವ ಪ್ರಯತ್ನವನ್ನು ಮಾಡಿದರು. ಕೆಲವು ವಾಹನ ಸವಾರರು ನೀರಿನ ಮಟ್ಟ ಕಡಿಮೆಯಾಗುವವರೆಗೂ ಕಾದು ಬಳಿಕ ಮನೆ ಸೇರಿದರು.

ನಲ್ಲೆಗುತ್ತು ಹಳೆ ಅಣೆಕಟ್ಟಿನ ಮೂಲಕ ಸುಗಮವಾಗಿ ದಾಟಬಹುದಾಗಿದ್ದರೂ, ನೀರು ತುಂಬಿರುವುದರಿಂದ ಮುಳುಗಿದೆ. ನಿತ್ಯ ಶಾಲಾ ಮಕ್ಕಳು ಇದೇ ದಾರಿಯಲ್ಲಿ ಸಂಚರಿಸಬೇಕಾಗಿರುವುದರಿಂದ ಯಾರಾದರೂ ಹಿರಿಯರು ಇದ್ದುಕೊಂಡೇ ಅಣೆಕಟ್ಟು ದಾಟಬೇಕಾಗಿದೆ.

ರಸ್ತೆ ಸಂಪರ್ಕ ಕಲ್ಪಿಸಲು ಆಗ್ರಹ
ಹಳೆಯ ಅಣೆಕಟ್ಟಿನ ಪಕ್ಕದಲ್ಲೇ ನೂತನ ಸೇತುವೆಯನ್ನು ನಿರ್ಮಿಸಿದ್ದರೂ ಅದಕ್ಕೆ ಸಂಪರ್ಕವನ್ನು ಇನ್ನೂ ಕಲ್ಪಿಸಿಲ್ಲ ಹೀಗಾಗಿ ಅಪಾಯಕಾರಿಯಾಗಿರುವ ಹಳೆಯ ಸೇತುವೆಯಲ್ಲೇ ನದಿ ನೀರಿನ ಮಧ್ಯೆ ವಿದ್ಯಾರ್ಥಿಗಳು ವಾಹನ ಸವಾರರು ಅತ್ತಿತ್ತ ನಿತ್ಯ ಸಾಗಬೇಕಾದ ಅನಿವಾರ್ಯ ಎದುರಾಗಿದೆ. ಹೊಸ ಸೇತುವೆಯ ರಸ್ತೆ ಸಂಪರ್ಕಕ್ಕೆ ಮಣ್ಣು ತಂದು ರಾಶಿ ಹಾಕಿದರೂ ಸಂಪರ್ಕ ಕಲ್ಪಿಸಿಲ್ಲ. ಕೂಡಲೇ ಹೊಸ ಸೇತುವೆಗೆ ರಸ್ತೆಯ ಸಂಪರ್ಕವನ್ನು ಕಲ್ಪಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ಶೀಘ್ರ ಕಾಮಗಾರಿ
ಗುತ್ತಿಗೆದಾರರ ವಿಳಂಬ ನೀತಿಯಿಂದ ಈ ತೊಂದರೆ ಉಂಟಾಗಿದೆ. ಬಿಲ್‌ ಪಾವತಿಯಾಗದ ಹಿನ್ನೆಲೆಯಲ್ಲಿ ಈ ವಿಳಂಬ ನಡೆದಿದೆ. ಆದರೂ ಎಚ್ಚರಿಕೆ ನೀಡಲಾಗಿದ್ದು ಸೇತುವೆ ಸಂಪರ್ಕ ಕೆಲಸ ನಡೆಯುತ್ತಿದೆ. ಈ ಬಾರಿ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಅಣೆಕಟ್ಟುವಿಗೆ ಬೇಗ ಹಲಗೆ ಹಾಕಿದ್ದರಿಂದ ನೀರಿನ ಹೆಚ್ಚಳ ಉಂಟಾಗಿ ಈ ತೊಂದರೆ ಆಗಿದೆ. ಕೆಲವೇ ದಿನಗಳಲ್ಲಿ ನೂತನ ಸೇತುವೆ ಸಂಪರ್ಕ ಕಾರ್ಯ ಪೂರ್ಣಗೊಳ್ಳಲಿದೆ..
-ಅರುಣ್‌, ಸಹಾಯಕ ಇಂಜಿನಿಯರ್‌ ,
ಸಣ್ಣ ನೀರಾವರಿ ಇಲಾಖೆ, ಉಡುಪಿ.

ಕ್ರಮ ಕೈಗೊಳ್ಳಲಾಗುವುದು
ಸಂಚಾರ ಅಪಾಯಕಾರಿಯಾಗಿರುವುದರ ಬಗ್ಗೆ ಗುತ್ತಿಗೆದಾರರಿಗೆ ತಿಳಿಸಿ ಕ್ರಮ ಕೈಗೊಳ್ಳಲಾಗುವುದು. ಅಕಾಲಿಕ ಮಳೆಯಿಂದಾಗಿ ನೀರಿನ ಮಟ್ಟ ಏರಿದೆ. ಇನ್ನು ಕಡಿಮೆಯಾಗಬಹುದು. ಕೃಷಿಕರ ಪ್ರಯೋಜನಕ್ಕಾಗಿ ಈ ಅಣೆಕಟ್ಟು ನಿರ್ಮಿಸಲಾಗಿದೆ.
-ಶುಭಾ ಪಿ. ಶೆಟ್ಟಿ,
ಮುಂಡ್ಕೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ

ಅಪಾಯಕಾರಿ
ಅಣೆಕಟ್ಟು ನಿರ್ವಹಣೆಯಿಂದಾಗಿ ನದಿಯಲ್ಲಿ ನೀರು ತುಂಬಿದ್ದು ಸೇತುವೆಗೆ ಯಾವುದೇ ತಡೆಬೇಲಿ ಇಲ್ಲದೆ ದಾಟಬೇಕಾಗಿದೆ. ಶಾಲೆಯ ಮಕ್ಕಳು ತುಂಬಿದ ನೀರಿನ ಮಧ್ಯೆ ಅಣೆಕಟ್ಟಿನಲ್ಲಿ ಸಾಗಬೇಕಾಗಿದೆ. ನೂತನ ಅಣೆಕಟ್ಟುವಿಗೆ ಕೂಡಲೇ ಸಂಪರ್ಕ ರಸ್ತೆ ಕಲ್ಪಿಸಿ.
-ನಾಗರಾಜ, ಸುರೇಶ್‌ ಶೆಟ್ಟಿ
ಸ್ಥಳೀಯರು

-ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.