ಅರ್ಧಕ್ಕೆ ನಿಂತ ಕಲ್ಯಾ-ಮಲ್ಲಾಯಬೆಟ್ಟು ರಸ್ತೆ ಕಾಮಗಾರಿ


Team Udayavani, May 19, 2019, 6:20 AM IST

kalya

ಬೆಳ್ಮಣ್‌: ಅರಣ್ಯ ಇಲಾಖೆಯ ತಡೆಯಿಂದಾಗಿ ಕಲ್ಯಾ-ಮಲ್ಲಾಯಬೆಟ್ಟು ರಸ್ತೆಯ ಕಾಮಗಾರಿ ನಿರ್ಮಾಣ ಹಂತದಲ್ಲೇ ಅರ್ಧಕ್ಕೆ ನಿಂತು 9 ವರ್ಷಗಳೇ ಕಳೆದರೂ ಪೂರ್ಣಗೊಂಡಿಲ್ಲ. ಈ ಬಗ್ಗೆ ತೀವ್ರ ಜನಾಕ್ರೋಶ ವ್ಯಕ್ತವಾಗಿದೆ.

ಕಾರ್ಕಳ ತಾಲೂಕಿನ ಹಾಳೆಕಟ್ಟೆಯಿಂದ- ಕಲ್ಯಾ ಮಲ್ಲಾಯಬೆಟ್ಟು ಮಾರ್ಗವಾಗಿ ಕುಂಟಾಡಿ, ಕಾರ್ಕಳ ಹಾಗೂ ಉಡುಪಿಯನ್ನು ತಲುಪಲು ಬಹು ಹತ್ತಿರದ ರಸ್ತೆ ಇದಾಗಿದೆ. ಕಾಮಗಾರಿ ನಿಂತ ಕಾರಣ ರಸ್ತೆ ತುಂಬ ಜಲ್ಲಿಕಲ್ಲಿಗಳು ಬಿದ್ದಿದ್ದು ಸಣ್ಣಪುಟ್ಟ ವಾಹನಗಳ ಓಡಾಟವೂ ಕಷ್ಟ ಎನ್ನುವಂತಿದೆ.

ಹಾಳೆಕಟ್ಟೆಯಿಂದ ಕುಂಟಾಡಿಗೆ ಸುಮಾರು 5 ಕಿ.ಮೀ. ಉದ್ದದ ರಸ್ತೆಯಿದ್ದು 400 ಮೀ. ಉದ್ದದ ರಸ್ತೆ ಪ್ರಸ್ತುತ ಅರಣ್ಯ ಇಲಾಖೆಯ ತಡೆಯಿಂದಾಗಿ ಡಾಮರೀಕರಣಗೊಳ್ಳದೆ ಜಲ್ಲಿ ಕಲ್ಲಿನ ರಾಶಿಯಿಂದ ತುಂಬಿ ಹೋಗಿದೆ.

ಗ್ರಾಮ ಸಡಕ್‌ ಯೋಜನೆಯ ರಸ್ತೆ
8 ವರ್ಷಗಳ ಹಿಂದೆ ಈ ರಸ್ತೆಗೆ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿಯಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯ ಕಾಮಗಾರಿ ಜಾರಿಯಾದರೂ ತಾಂತ್ರಿಕ ಕಾರಣಗಳಿಂದ ಕಾಮಗಾರಿ ನಿಂತಿದೆ.

ಹಾಳೆಕಟ್ಟೆಯಿಂದ ಸಾಗಿ ಮಲ್ಲಾಯಬೆಟ್ಟುವಿನ ವರೆಗೆ ರಸ್ತೆಗೆ ಡಾಮರೀಕರಣಗೊಂಡಿದ್ದರೆೆ, ಅನಂತರ ಅಲ್ಲಿಂದ ಸುಮಾರು 400 ಮೀ. ಉದ್ದದ ರಸ್ತೆಗೆ ಅರಣ್ಯ ಇಲಾಖೆ ಆಕ್ಷೇಪವಿರುವ ಕಾರಣ ಕಾಮಗಾರಿ ನಿಂತಿದೆ.

ಹಾಕಿದ ಡಾಮರೂ ಕಿತ್ತು ಹೋಗಿದೆ
ಕಲ್ಯಾ ಕುಂಟಾಡಿ ಸಂಪರ್ಕ ರಸ್ತೆ ಡಾಮರೀಕರಣ ಗೊಂಡರೂ ಮಲ್ಲಾಯಬೆಟ್ಟು ಸಮೀಪ ಜಲ್ಲಿಯ ಮಣ್ಣಿನ ರಸ್ತೆ ಮಾತ್ರ ಓಡಾಟಕ್ಕೆ ದೊರಕುತ್ತದೆ. ಕೆಲ ವರ್ಷಗಳ ಹಿಂದೆ ಹಾಕಲಾದ ಡಾಂಬರೂ ಕಿತ್ತು ಹೋಗಿದೆ. ಒಂದೆಡೆ ರಸ್ತೆಯ ಕಾಮಗಾರಿ ಪೂರ್ಣಗೊಂಡಿಲ್ಲವಾದರೆ ಇನ್ನೊಂದೆಡೆ ರಸ್ತೆಗೆ ಹಾಕಲಾದ ಜಲ್ಲಿ ಟಾರು ಎಲ್ಲವೂ ಕಿತ್ತು ಹೋಗಿ ಅಲ್ಲಲ್ಲಿ ಹೊಂಡಗಳು ನಿರ್ಮಾಣಗೊಂಡಿದ್ದು ಸಂಚಾರ ದುಸ್ತರವಾಗಿದೆ.

ಈ ಭಾಗದ 400 ಮೀ. ಉದ್ದದ ರಸ್ತೆ ಡಾಮರೀಕರಣಗೊಳ್ಳದೆ ಹಾಗೆಯೇ ಉಳಿದರೂ ಇಲ್ಲಿ ಓಡಾಟ ನಡೆಸುವ ಘನ ವಾಹನಗಳ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಈ ಭಾಗದಲ್ಲಿ ಸಾಕಷ್ಟು ಗಣಿಗಾರಿಕೆಗಳು ನಡೆಯುತ್ತಿದ್ದು 10 ಚಕ್ರದ ಟಿಪ್ಪರ್‌ ಗಳ ನಿತ್ಯ ಓಡಾಟದಿಂದ ಡಾಮರು ಕಿತ್ತು ಹೋಗಿದೆ. ಆದ್ದರಿಂದ ಘನ ವಾಹನ ನಿಷೇಧಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.

ರಸ್ತೆ ಡಾಮರು ಆಗದ್ದರಿಂದ ಮಳೆಗಾಲದಲ್ಲಿ ವರ್ಷವೂ ಸಮಸ್ಯೆ ತೀವ್ರಗೊಳ್ಳುತ್ತದೆ. ಪಾದಚಾರಿ ಗಳು, ವಿದ್ಯಾರ್ಥಿಗಳು ಕೆಸರಿನ ಅಭಿಷೇಕ ಮಾಡಿಸಿ ಕೊಳ್ಳಬೇಕಾಗಿದೆ. ಇಷ್ಟರವರೆಗೆ ರಸ್ತೆ ಕಾಮಗಾರಿ ನಿಂತರೂ ಅಧಿಕಾರಿಗಳು, ಜನಪ್ರತಿನಿಧಿಗಳಾರೂ ಮಾತೇ ಆಡುತ್ತಿಲ್ಲ ಎನ್ನುವುದು ಗ್ರಾಮಸ್ಥರ ದೂರು. ಅರಣ್ಯ ಇಲಾಖೆ ತಡೆ ಕೂಡಲೇ ತೆರವುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೂಡಲೇ ಡಾಮರು ಕಾಮಗಾರಿ
ಅರಣ್ಯ ಇಲಾಖೆಯ ಜತೆ ಚರ್ಚಿಸಿ ಕೂಡಲೇ ಕ್ರಮ ಕೈಗೊಂಡು ರಸ್ತೆ ಡಾಮರು ಕಾಮಗಾರಿ ನಡೆಸಲಿದ್ದೇವೆ.
-ಸುಮೀತ್‌ ಶೆಟ್ಟಿ, ಜಿ.ಪಂ. ಸದಸ್ಯರು

ಹಲವು ವರ್ಷಗಳ ಸಮಸ್ಯೆ
ಪ್ರತೀ ಬಾರಿಯೂ ಚುನಾವಣೆ ಬಂದಾಗ ಈ ರಸ್ತೆ ಸರಿ ಮಾಡಿಕೊಡುತ್ತೇವೆ ಎಂದು ಬರುವ ಜನಪ್ರತಿನಿಧಿ ಗಳು ಮತ್ತೆ ಇತ್ತ ಕಡೆ ಸುಳಿಯುವುದಿಲ್ಲ. ಹಲವು ವರ್ಷಗಳಿಂದ ರಸ್ತೆ ಸಮಸ್ಯೆಯನ್ನು ಎದುರಿಸುತ್ತಿದ್ದರೂ ಯಾರೊಬ್ಬರೂ ನಮ್ಮ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ.
-ಸತೀಶ್‌ ಹಾಳೆಕಟ್ಟೆ, ಗ್ರಾಮಸ್ಥರು

ಘನ ವಾಹನಗಳ ಆರ್ಭಟ
ರಸ್ತೆ ಕಾಮಗಾರಿ ವಿಳಂಬಕ್ಕೆ ಅರಣ್ಯ ಇಲಾಖೆಯ ತಡೆ ಕಾರಣ ಎನ್ನಲಾಗುತ್ತಿದೆ. ಇದು ಇಡೀ ಎರಡು ಗ್ರಾಮಗಳ ಜನರಿಗೆ ತೊಂದರೆಯನ್ನು ಉಂಟುಮಾಡಿದೆ. ಕೆಲವು ಕಡೆ ಹಾಕಿರುವ ಡಾಮರು ಘನ ವಾಹನಗಳ ಆರ್ಭಟಕ್ಕೆ ಈಗಾಗಲೇ ಕಿತ್ತು ಹೋಗಿದೆ.
-ಸುಂದರಿ ಪೂಜಾರಿ, ಸ್ಥಳೀಯರು

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.