ಕಲ್ಯಾಣಪುರ -ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ: ಇಂದಿನಿಂದ ಬದಲಿ ಮಾರ್ಗ “ಪ್ರಯೋಗ’


Team Udayavani, Jan 30, 2023, 7:23 AM IST

ಕಲ್ಯಾಣಪುರ -ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ: ಇಂದಿನಿಂದ ಬದಲಿ ಮಾರ್ಗ “ಪ್ರಯೋಗ’

ಉಡುಪಿ: ಸಂತೆಕಟ್ಟೆ ಪರಿಸರದಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ನಿವಾರಿಸಲು ಮತ್ತು ಆಗುತ್ತಿರುವ ಅಪಘಾತಗಳನ್ನು ತಡೆಯುವ ದೃಷ್ಟಿಯಿಂದ ಓವರ್‌ ಪಾಸ್‌ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿ ಪೂಜೆ ನೆರವೇರಿದ್ದು, ಕಾಮಗಾರಿಗೆ ಪೂರಕವಾಗಿ ಸೋಮವಾರದಿಂದ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗುತ್ತದೆ.

ವ್ಯವಸ್ಥಿತವಾಗಿ ಬದಲಿ ಮಾರ್ಗ ರೂಪುಗೊಳಿಸದ ಹಿನ್ನೆಲೆಯಲ್ಲಿ ಒಮ್ಮೆ ಶುರುವಾಗಿದ್ದ ಕಾಮಗಾರಿಯನ್ನು ನಿಲ್ಲಿಸಲಾಗಿತ್ತು. ಅಲ್ಲದೆ, ಗುದ್ದಲಿ ಪೂಜೆಯ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸ್ಥಳೀಯ ಶಾಸಕ ರಘುಪತಿ ಭಟ್‌ ಅವರು ಬದಲಿ ಮಾರ್ಗವನ್ನು ಪೂರ್ಣ ಪ್ರಮಾಣದಲ್ಲಿ ಸಮರ್ಪಕವಾಗಿ ರೂಪಿಸಿದ ಅನಂತರವೇ ಕಾಮಗಾರಿ ಆರಂಭಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್‌ ಮತ್ತು ಗುತ್ತಿಗೆ ಸಂಸ್ಥೆಗೆ ಸೂಚನೆ ನೀಡಿದ್ದರು. ಬದಲಿ ಮಾರ್ಗ ಸಮರ್ಪಕವಾಗಿ ರೂಪಿಸದೆ ಕಾಮಗಾರಿ ಆರಂಭಿಸಿದರೆ ಟ್ರಾಫಿಕ್‌ ಸಮಸ್ಯೆಯ ಜತೆಗೆ ಹಲವು ರೀತಿಯಲ್ಲಿ ಸಾರ್ವಜನಿಕರಿಗೆ ಅನನುಕೂಲವೂ ಆಗಲಿದೆ ಎಂಬ ಎಚ್ಚರಿಕೆ ನೀಡಿದ್ದರು.
ಅದರಂತೆ ಈ ಪ್ರಕ್ರಿಯೆ ಜಿಲ್ಲಾಡಳಿತ ಮತ್ತು ಪೊಲೀಸ್‌, ಹೆದ್ದಾರಿ ಪ್ರಾಧಿಕಾರದ ಸಮನ್ವಯದೊಂದಿಗೆ ಬದಲಿ ಮಾರ್ಗ ರೂಪಿಸಲಾಗಿದೆ.

ಬದಲಿ ಮಾರ್ಗ
ಕುಂದಾಪುರದಿಂದ ಉಡುಪಿ ಕಡೆಗೆ ಬರುವ ಬಸ್‌ ಸಹಿತವಾಗಿ ಬೃಹತ್‌ ವಾಹನಗಳನ್ನು ಕೆ.ಜಿ. ರೋಡ್‌, ಕೊಳಲಗಿರಿ, ಉಪ್ಪೂರು ಮಾರ್ಗವಾಗಿ ಶೀಂಬ್ರಾ ಸೇತುವೆಯಿಂದ ಪೆರಂಪಳ್ಳಿ – ಮಣಿಪಾಲದ ಕಾಯಿನ್‌ ವೃತ್ತಕ್ಕೆ ಬಂದು ಸಿಂಡಿಕೇಟ್‌ ವೃತ್ತದಿಂದ ಉಡುಪಿಗೆ ಬರಲಿದೆ. ಇದರಿಂದ ಸುಮಾರು 10 ಕಿ.ಮೀ ಸುತ್ತುವರಿದು ಬರಬೇಕಾಗುತ್ತದೆ. ಸೋಮವಾರದಿಂದ ಪ್ರಾಯೋಗಿಕವಾಗಿ ಈ ಪ್ರಕ್ರಿಯೆ ಶುರುವಾಗಲಿದೆ.

ಸಂತೆಕಟ್ಟೆ ಪರಿಸರದ ಸ್ಥಳೀಯರಿಗೆ ಅನುಕೂಲವಾಗುವಂತೆ ಪೂರ್ಣ ಪ್ರಮಾಣದಲ್ಲಿ ಸರ್ವೀಸ್‌ ರಸ್ತೆ ಬಳಕೆಗೂ ವ್ಯವಸ್ಥೆ ಮಾಡಲಾಗುತ್ತಿದೆ.

ಬದಲಿ ಮಾರ್ಗದಲ್ಲಿ ವಾಹನ ಸಂಚಾರ ಸಮರ್ಪಕವಾದ ಅನಂತರದಲ್ಲಿ ಒಂದು ಭಾಗದ ಕಾಮಗಾರಿ ಶುರುವಾಲಿದೆ. ಆ ವೇಳೆಯಲ್ಲಿ ಉಡುಪಿಯಿಂದ ಕುಂದಾಪುರದ ಕಡೆಗೆ ಹೋಗುವ ಎಲ್ಲ ವಾಹನಗಳು ರಾಷ್ಟ್ರೀಯ ಹೆದ್ದಾರಿ 66ರಲ್ಲೇ ಸಂಚರಿಸಲಿದೆ. ಸದ್ಯಕ್ಕೆ ಉಡುಪಿ-ಕುಂದಾಪುರ ಸಂಚರಿಸುವ ಯಾವ ವಾಹನಕ್ಕೂ ಬದಲಿ ಮಾರ್ಗ ಗೊತ್ತುಮಾಡಿಲ್ಲ.

ಕುಂದಾಪುರದಿಂದ ಉಡುಪಿಗೆ ಬರುವ ವಾಹನಗಳನ್ನು ಸೋಮವಾರದಿಂದ ಬದಲಿ ಮಾರ್ಗದಲ್ಲಿ ಸಂಚರಿಸಲು ಬೇಕಾದ ವ್ಯವಸ್ಥೆಯಾಗಿದೆ. ಪೊಲೀಸ್‌, ಜಿಲ್ಲಾಡಳಿತ, ಪ್ರಾಧಿಕಾರ ಎಲ್ಲರೂ ಈ ಕಾರ್ಯದಲ್ಲಿ ಜತೆಯಾಗಲಿದ್ದಾರೆ. ಸ್ಥಳೀಯರಿಗೆ ಸರ್ವಿಸ್‌ ರಸ್ತೆಯನ್ನು ವ್ಯವಸ್ಥಿತಗೊಳಿಸಲಾಗುವುದು.
– ಕೆ. ರಘುಪತಿ ಭಟ್‌ ಶಾಸಕರು, ಉಡುಪಿ

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.