ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದಿಂದ ಕೋಟ್ಯಂತರ ರೂ. ವಂಚನೆ ಆರೋಪ: ಪ್ರತಿಭಟನೆ


Team Udayavani, Dec 20, 2022, 1:14 AM IST

ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದಿಂದ ಕೋಟ್ಯಂತರ ರೂ. ವಂಚನೆ ಆರೋಪ: ಪ್ರತಿಭಟನೆ

ಉಡುಪಿ : ಠೇವಣಿ ಇಟ್ಟ ಹಣ ಮರಳಿಸದೆ ವಂಚನೆ ಮಾಡಿದೆ ಎಂದು ಆರೋಪಿಸಿ ನಗರದ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ವಿರುದ್ಧ ಗ್ರಾಹಕರು ಸೋಮವಾರ ಪ್ರತಿಭಟನೆ ನಡೆಸಿದರು.

ಸಂಘವು ಠೇವಣಿಗೆ ಶೇ. 12ರ ಬಡ್ಡಿ ನೀಡುವುದಾಗಿ ಗ್ರಾಹಕರಿಗೆ ಆಮಿಷವೊಡ್ಡಿ ಹಣ ಸಂಗ್ರಹಿಸಿತ್ತು. ಸಂಘದ ಅಧ್ಯಕ್ಷ ಇಂದ್ರಾಳಿಯ ಬಿ.ವಿ. ಲಕ್ಷ್ಮೀನಾರಾಯಣ, ರವಿ ಉಪಾಧ್ಯ, ಬಿ.ವಿ. ಬಾಲಕೃಷ್ಣ, ಭಾಸ್ಕರ ಉಪಾಧ್ಯ, ಉದಯ ಉಪಾಧ್ಯ, ರಾಧಿಕಾ, ಸುಜಾತಾ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಿ.ವಿ. ಲಕ್ಷ್ಮೀನಾರಾಯಣ ಸಹಕಾರ ಸಂಘ ನಿರ್ಮಿಸಿ ಗ್ರಾಹಕರಿಂದ ಅಧಿಕ ಬಡ್ಡಿ ಆಸೆ ತೋರಿಸಿ ಹಣವನ್ನು ಠೇವಣಿ ಇರಿಸಿದ್ದರು. ಆದರೆ ಈಗ ಹಣ ಕೇಳಿದರೂ ನೀಡುತ್ತಿಲ್ಲ. ಅಲ್ಲದೆ ಸಿಬಂದಿಗೂ ವೇತನ ನೀಡದೆ ಬಾಕಿ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಎಲ್ಲ ಕಾರಣಗಳಿಂದ ಆಕ್ರೋಶಿತರಾಗಿದ್ದ ಗ್ರಾಹಕರು ಸೋಮವಾರ ಕಚೇರಿಗೆ ಮುತ್ತಿಗೆ ಹಾಕಿದರು.

ಆತ್ಮಹತ್ಯೆಗೆ ಮುಂದಾದ ಸಿಬಂದಿ
ಬೆಳಗ್ಗೆ 11ರ ವರೆಗೆ ಬಂದ್‌ ಇದ್ದ ಸೊಸೈಟಿಯನ್ನು ಬಳಿಕ ತೆರೆದಾಗ ಗ್ರಾಹಕರು ಒಳಪ್ರವೇಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಹಿಳಾ ಸಿಬಂದಿ ಮಾತ್ರೆಗಳನ್ನು ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು. ಬಳಿಕ ಅವರನ್ನು ಸಮಾಧಾನಪಡಿಸಲಾಯಿತು. ಲಕ್ಷ್ಮೀನಾರಾಯಣ್‌ ಅವರು ಸ್ಥಳಕ್ಕೆ ಆಗಮಿಸುವಂತೆ ಆಗ್ರಹಿಸಲಾಯಿತು. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತಂದರು. ಪ್ರಸ್ತುತ ಸೊಸೈಟಿಗೆ ಬೀಗ ಜಡಿಯಲಾಗಿದೆ.

ಕೋಟ್ಯಂತರ ರೂ. ವಂಚನೆ
ಈ ಸೊಸೈಟಿಯಲ್ಲಿ ಸುಮಾರು 700ಕ್ಕೂ ಅಧಿಕ ಮಂದಿ ಸದಸ್ಯರಿದ್ದರು. ಸಾವಿರದಿಂದ ಕೋಟಿ ರೂ.ಗಳವರೆಗೆ ಠೇವಣಿ ಇರಿಸಿದ್ದಾರೆ. ಆಡಿಟ್‌ ಕೂಡ ಮಾಡಿಲ್ಲ. ಕರೆ ಮಾಡುವಾಗ ಸೊಸೈಟಿಯ ಸಿಬಂದಿ ಸ್ವೀಕರಿಸುತ್ತಿಲ್ಲ ಎಂದು ವಂಚನೆಗೊಳಗಾದವರು ಆಕ್ರೋಶಿತ ರಾಗಿ ಘೋಷಣೆ ಕೂಗಿದರು.

ಗ್ರಾಹಕ ನ್ಯಾಯಾಲಯ, ಠಾಣೆಗೆ ದೂರು
ಸೊಸೈಟಿಯಿಂದಾದ ವಂಚನೆಯ ಬಗ್ಗೆ ಸಂತ್ರಸ್ತರು ಉಡುಪಿ ನಗರ ಠಾಣೆ ಹಾಗೂ ಗ್ರಾಹಕ ನ್ಯಾಯಾಲಯಕ್ಕೆ ಎಲ್ಲರ ಸಹಿ ಸಂಗ್ರಹಿಸಿ ದೂರು ನೀಡಿದ್ದಾರೆ. ದೂರು ಬಂದಿದೆ. ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಠೇವಣಿ ಇರಿಸಿದ 18 ಲ.ರೂ.ಗಳನ್ನು ಮನೆ ನಿರ್ಮಾಣಕ್ಕೆಂದು ತೆಗೆಯಲು ಉದ್ದೇಶಿಸಿದ್ದೆ. ಆದರೆ ಈಗ ಅವರು ನೀಡಲು ಹಿಂದೇಟು ಹಾಕುತ್ತಿದ್ದಾರೆ. ನಮಗೆ ಸೂಕ್ತ ನ್ಯಾಯ ಒದಗಿಸಬೇಕು.
– ಪುಷ್ಪಾ, ವಂಚನೆಗೊಳಗಾದವರು

ಕೊರೊನಾ ಅವಧಿಯಲ್ಲಿ ನಾನು ಕೆಲಸ ಕಳೆದು ಕೊಂಡಿದ್ದೆ. ಈ ವೇಳೆ ಲಭಿಸಿದ ಹಣವನ್ನು ಇಲ್ಲಿ ಠೇವಣಿ ಇರಿಸಿದ್ದೆ. ಪ್ರಸ್ತುತ ತೆಗೆಯಲು ಕೇಳಿದಾಗ ಇವತ್ತು, ನಾಳೆ ಎಂದು ದಿನದೂಡುತ್ತಿದ್ದಾರೆ.
– ಶ್ರೀನಿವಾಸ ಪ್ರಭು ವಂಚನೆಗೊಳಗಾದವರು

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.