ಕಮಲಶಿಲೆ ಶ್ರೀಬ್ರಾಹ್ಮೀದುರ್ಗಾಪರಮೇಶ್ವರೀ ದೇಗುಲದಲ್ಲಿ ಶರನ್ನವರಾತ್ರಿ ಮಹೋತ್ಸವ
Team Udayavani, Sep 28, 2019, 9:16 PM IST
ಸಿದ್ದಾಪುರ : ಶ್ರೀ ದೇವಿಯ ಉದ್ಭವ ಲಿಂಗವು ಕಮಲವನ್ನು ಹೋಲುವ, ಅಷ್ಟೇ ನುಣುಪಾದ ಶಿಲೆಯಾದ್ದರಿಂದ ಕಮಲಶಿಲೆ ಎಂಬ ನಾಮ ಖ್ಯಾತಿಗೊಂಡಿತು. ಹೆಸರೇ ಸೂಚಿಸುವಂತೆ ಕಮಲವು ಮೃದುತ್ವವನ್ನು, ಶಿಲೆಯು ಕಠಿಣತ್ವವನ್ನು ಅರ್ಥೈಸಿದರೂ ಇಲ್ಲಿ ಎರಡೂ ಒಂದಾಗಿ ಏಕತೆ ಮತ್ತು ಸಮಾನತೆಯನ್ನು ಸೂಚಿಸುತ್ತದೆ. ಕಮಲಳಾಗಿ ಶಿಷ್ಟಪಾಲನೆ, ಶಿಲೆಯಾಗಿ ದುಷ್ಟರ ನಿಗ್ರಹ ಕಾರ್ಯ ನಡೆಯುತ್ತಿರುತ್ತದೆ.
ಪ್ರಾಕೃತಿಕವಾಗಿ ವಿಶಿಷ್ಟ ಸ್ಥಾನವನ್ನು ಪಡೆದು ಶ್ರೀಬ್ರಾಹ್ಮೀದುರ್ಗಾಂಬೆಯು ಪ್ರಕೃತಿ ಪ್ರೀಯಳಾಗಿ ಇಲ್ಲಿ ನೆಲೆ ನಿಂತಿದ್ದಾಳೆ. ಸೂತ್ತಲೂ ಅರಣ್ಯ ಪ್ರದೇಶದ ಮಧ್ಯದಲ್ಲಿ ಕುಬಾjನದಿ ಮತ್ತು ನಾಗತೀರ್ಥಗಳ ಸಂಗಮದಲ್ಲಿ ಪಾತಾಳದಲ್ಲಿ ಲಿಂಗರೂಪಿಣೆಯಾಗಿ ಹುಟ್ಟಿ ಬಂದಿದ್ದಾಳೆ. ಹುಟ್ಟಿದ್ದು ನೀರಿನಲ್ಲಿ, ರೂಪ ಕಲ್ಲು, ಆಭರಣ ಮಣ್ಣು (ಮತ್ತಿಕೆ)ಅದ್ಭುತ ಶಕ್ತಿವಂತ ವಿಧಿತವಾಗುತ್ತದೆ.
ಶರನ್ನವರಾತ್ರಿ ಪ್ರಯುಕ್ತ ಸೆ.29ರಿಂದ ಅ.08 ರವರೆಗೆ ಪ್ರತಿದಿನ ತ್ರಿಕಾಲ ಪೂಜೆ, ನವರಾತ್ರಿ ವಿಶೇಷ ಪೂಜೆ, ಮಹಾಪೂಜೆ, ಸುತ್ತುಬಲಿ ಹಾಗೂ ನವಮಿಯಂದು ಮಧ್ಯಾಹ್ನ ಚಂಡಿಕಾ ಹವನ, ರಾತ್ರಿ ರಜತ ರಥೋತ್ಸವ, ಲಾಲ್ಕಿ ಉತ್ಸವ(ರಥಬೀದಿ ಮತ್ತು ರಾಜಬೀದಿ) ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…