ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳಕ್ಕೆ ಚಾಲನೆ
Team Udayavani, Jan 6, 2019, 8:15 PM IST
ಕಾರ್ಕಳ: 15ನೇ ವರ್ಷದ ಮಿಯ್ಯಾರು ಲವ-ಕುಶ ಜೋಡುಕರೆ ಬಯಲು ಕಂಬಳಕ್ಕೆ ಜ. 6ರಂದು ಚಾಲನೆ ನೀಡಲಾಯಿತು. ಶಾಸಕ ವಿ. ಸುನಿಲ್ ಕುಮಾರ್ ಚಾಲನೆ ನೀಡಿ ಶುಭಹಾರೈಸಿದರು. ಮಿಯ್ಯಾರು ಮಹಾಲಿಂಗೇಶ್ವರ ದೇಗುಲದ ಪ್ರಧಾನ ಅರ್ಚಕ ಹರಿದಾಸ ಭಟ್ ಶುಭಹಾರೈಸಿ, ಲವ-ಕುಶ ಜೋಡುಕರೆ ಕಂಬಳ ಈ ಭಾಗದ ಸರ್ವರ ಸಹಕಾರದಿಂದ ಕಳೆದ 15 ವರ್ಷಗಳಿಂದ ನಡೆಯುತ್ತಿದೆ. ನೂರಾರು ರೈತರು ಇದರಲ್ಲಿ ಭಾಗಿಗಳಾಗುತ್ತಿದ್ದು, ಕಂಬಳ ಯಶಸ್ವಿಯಾಗಿ ನಡೆಯುವಂತಾಗಲಿ ಎಂದರು. ಮಿಯ್ಯಾರು ಚರ್ಚ್ನ ಧರ್ಮಗುರು ಫಾ| ಜೆರೋಮ್ ಮೊಂತೆರೋ ಶುಭಹಾರೈಸಿದರು.
ಸಮಿತಿಯ ಕಾರ್ಯಾಧ್ಯಕ್ಷ ಜೀವನದಾಸ ಅಡ್ಯಂತಾಯ, ಗೌರವಾಧ್ಯಕ್ಷ ಮಾಜಿ ಶಾಸಕ ಎಚ್.ಗೋಪಾಲ ಭಂಡಾರಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ನ ಸುನಿಲ್ ಬಜಗೋಳಿ, ಸುಧಾಕರ ಶೆಟ್ಟಿ, ಉಪಾಧ್ಯಕ್ಷ ಭಾಸ್ಕರ ಎಸ್. ಕೋಟ್ಯಾನ್, ಗ್ರಾ.ಪಂ. ಅಧ್ಯಕ್ಷೆ ನಿರ್ಮಲಾ, ಉಪಾಧ್ಯಕ್ಷ ಮಾಧವ ಕಾಮತ್, ರವೀಂದ್ರ ಕುಮಾರ್ ಕುಕ್ಕುಂದೂರು, ವಿಜಯ ಕುಮಾರ್ ಕಂಗಿನಮನೆ ನೂರಾಳ್ಬೆಟ್ಟು, ಎಪಿಎಂಸಿ ಮಾಜಿ ಅಧ್ಯಕ್ಷ ನಕ್ರೆ ಅಂತೋನಿ ಡಿ’ಸೋಜಾ, ಜಿ.ಪಂ. ಸದಸ್ಯರಾದ ದಿವ್ಯಶ್ರೀ ಅಮೀನ್, ಉದಯ ಎಸ್.ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಪ್ರೊ| ಕೆ. ಗುಣಪಾಲ ಕಡಂಬ ಸ್ವಾಗತಿಸಿ, ನಿರೂಪಿಸಿದರು. ಮಿಯ್ಯಾರು ಕಂಬಳ ಸಮಿತಿ, ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇವುಗಳ ಸಹಯೋಗದಲ್ಲಿ ಕಂಬಳ ನಡೆಯುತ್ತಿದ್ದು, ಈ ಬಾರಿ ಒಟ್ಟು 172 ಜತೆ ಕೋಣಗಳು ಭಾಗವಹಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ