ಕನಕದಾಸ ಜಯಂತಿ: “ಕನಕದಾಸರು ಇಂದಿಗೂ ಪ್ರಸ್ತುತ’
Team Udayavani, Nov 15, 2019, 8:34 PM IST
ಉಡುಪಿ: ಕನಕದಾಸರ ಕೀರ್ತನೆಗಳು, ತತ್ವಗಳನ್ನು ಅರಿಯವುದರ ಮೂಲಕ ಸಮಾಜದಲ್ಲಿ ಎಲ್ಲ ಸಮುದಾಯಗಳ ಜನರು ಶಾಂತಿ ಸಹಬಾಳ್ವೆಯಿಂದ ಬಾಳಲು ಸಾಧ್ಯವಿದೆ. ಈ ಮೂಲಕ 500 ವರ್ಷಗಳ ಹಿಂದೆ ಜನಿಸಿದ ಕನಕದಾಸರು ಇಂದಿಗೂ ಪ್ರಸ್ತುತರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದರು.
ಜಿಲ್ಲಾಡಳಿತ, ಜಿ.ಪಂ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಜಿಲ್ಲಾಧಿಕರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಶ್ರೀ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗದಲ್ಲಿ ಜನಿಸಿದ ಕನಕದಾಸರು ಇಡೀ ಮಾನವ ಕುಲದ ಸುಧಾರಣೆಗೆ ಪ್ರಯತ್ನಿಸಿದ್ದು ನೆನೆದರೆ ರೋಮಾಂಚನವಾಗುತ್ತದೆ. ಕನಕದಾಸರ ಕೀರ್ತನೆಗಳು ಮಾನವ ಜೀವನ ಹೇಗೆ ಸರಿಯಾದ ದಾರಿಯಲ್ಲಿ ನಡೆಯಬೇಕು ಎನ್ನುವುದನ್ನು ತಿಳಿಸುತ್ತವೆ. ಅವರ ಚಿಂತನೆ, ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕನಕದಾಸರ ಕುರಿತು ನಿವೃತ್ತ ಉಪನ್ಯಾಸಕ ಮೇಟಿ ಮುದಿಯಪ್ಪ ಉಪನ್ಯಾಸ ನೀಡಿ ದಾಸರಲ್ಲಿ ಶ್ರೇಷ್ಠರಾದ ಕನಕದಾಸರು ಒಬ್ಬ ರಾಷ್ಟ್ರ ಸಂತರು, ಅವರ ಕೀರ್ತನೆಗಳು ಗ್ರಾಮೀಣ ಜನತೆಗೂ ಸಹ ಸುಲಭದಲ್ಲಿ ಅರ್ಥವಾಗುತ್ತದೆ ಎಂದರು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಪೂರ್ಣಿಮಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ