ಕಂಡ್ಲೂರು-ಸೌಕೂರು ರಸ್ತೆ: ದುರಸ್ತಿಗೆ ಗ್ರಾಮಸ್ಥರ ಆಗ್ರಹ


Team Udayavani, Jul 10, 2017, 3:50 AM IST

0907kde7.jpg

ಕುಂದಾಪುರ: ಕಾವ್ರಾಡಿ ಹಾಗೂ ಗುಲ್ವಾಡಿ ಗ್ರಾ.ಪಂ. ವ್ಯಾಪ್ತಿಯ ಪುರಾಣ ಪ್ರಸಿದ್ಧ ಸೌಕೂರು ದೇಗುಳಕ್ಕೆ ಪ್ರಮುಖ ಸಂಪರ್ಕ ಕೊಂಡಿಯಾದ ರಸ್ತೆ ದುರಸ್ತಿ ಕಾಣದೇ ವರ್ಷಗಳೇ ಸಂದಿದೆ. ದುರಸ್ತಿ ಕಾಣದೇ  ರಸ್ತೆಯಲ್ಲಿ  ಸಂಚರಿಸುವುದೇ ದುಸ್ತರವಾಗಿದೆ, ಸಂಬಂಧ‌ಪಟ್ಟ ಜನಪ್ರತಿನಿಧಿ ಗಳಿಗೆ ಎಷ್ಟೇ ಮನವಿ ನೀಡಿದರೂ ವರ್ಷ ಗಳ ಸಮಸ್ಯೆಗೆ ಇನ್ನೂ ಮುಕ್ತಿಯಂತೂ ಈ ತನಕ ಸಿಕ್ಕಿಲ್ಲವಾದರೂ ಸ್ಥಳೀಯ ಗ್ರಾ.ಪಂ.ಹಾಗೂ ಸೌಕೂರು ದೇವಸ್ಥಾನ ಫ್ರೆಂಡ್ಸ್‌ ನವರು ಸ್ವಲ್ಪಮಟ್ಟಿ ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯವನ್ನು ನಡೆಸಿದ್ದಾರೆ.

ರಸ್ತೆ ಕೆಸರುಮಯ  
ಗ್ರಾಮೀಣ ಭಾಗದ ಕೆಲವು ರಸ್ತೆಗಳು ಹೇಗಿರುತ್ತದೆ ಎನ್ನುವುದಕ್ಕೆ  ಸೌಕೂರು-ಕಂಡ್ಲೂರು ಸಂಪರ್ಕ ರಸ್ತೆಯೇ ಸಾಕ್ಷಿಯಾಗಿದೆ.  ಸಂಪೂರ್ಣ ಹದಗೆಟ್ಟಿದ್ದು ಸುಗಮ ಸಂಚಾರಕ್ಕೆ ವಾಹನ ಸವಾರರು ಪರಿತಪಿಸುವಂತಾಗಿದೆ. ಕಂಡ್ಲೂರಿನಿಂದ ಸೌಕೂರಿಗೆ ಸಾಗುವ ಸುಮಾರು 1.5 ಕಿ.ಮೀ ಡಾಮರು ರಸ್ತೆ ಸಂಪೂರ್ಣ ಮಾಯವಾಗಿ ಕೆಸರು ಮಯವಾಗಿದೆ. ಮಳೆಗಾಳದಲ್ಲಿ ಸಂಚರಿಸುವುದೇ ಕಷ್ಟಕರವಾಗಿದೆ. ಈ ಹಿಂದೆ  ಬಸ್ಸು ಸಂಪರ್ಕವನ್ನು ಹೊಂದಿದ್ದು  ರಸ್ತೆಯ ಅವ್ಯವಸ್ಥೆಯನ್ನು ಕಂಡು ಕಳೆದ  ಒಂದೂವರೆ ವರ್ಷದಿಂದ ಬಸ್ಸುಗಳೂ ಸಹ ಬರುವುದನ್ನು ನಿಲ್ಲಿಸಿವೆ. ಇಲ್ಲಿನ ಜನರು ಮುಖ್ಯ ರಸ್ತೆಯನ್ನು ತಲುಪಬೇಕಾದರೆ ನಡೆದುಕೊಂಡೇ ಸಾಗಬೇಕಾಗಿದೆ.

ಈ ಭಾಗದ ಗ್ರಾಮಸ್ಥರು  ಜನಪ್ರತಿನಿ ಗಳಿಗೆ ಹಲವು ಬಾರೀ ಮನವಿ ಮಾಡಿದರೂ ಯಾವುದೇ ಪ್ರಯೋಜನವೂ ಆಗಿಲ್ಲ.  ದ್ವಿಚಕ್ರ ವಾಹನ ಸವಾರರಿಗೆ ಕಷ್ಟಕರವಾದರೆ ರಸ್ತೆ ಸಮಸ್ಯೆಯಿಂದ ಆಟೋ ರಿಕ್ಷಾ ಚಾಲಕರು ಈ ರಸ್ತೆಯಲ್ಲಿ ಸಂಚರಿಸುವುದಕ್ಕೆ ಇಷ್ಟು ಪಡುತ್ತಿಲ್ಲ.

ಗ್ರಾ.ಪಂ.,  ಟೆಂಪಲ್‌  ಫ್ರೆಂಡ್ಸ್‌  ಸ್ಪಂದನೆ
ದುರಸ್ತಿ ಬಗ್ಗೆ  ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆ ಯಲ್ಲಿ  ಗ್ರಾಮಸ್ಥರು ಜೂನ್‌ ತಿಂಗಳ ಕೊನೆಯಲ್ಲಿ  ಪ್ರತಿಭಟನೆಯನ್ನು ನಡೆಸಿ ದ್ದರು. ಗ್ರಾಮಸ್ಥರ ಸಮಸ್ಯೆಯನ್ನು ಕಂಡು ಸ್ಥಳೀಯ ಕಾವ್ರಾಡಿ ಗ್ರಾ.ಪಂ. ಹೊಂಡ ಗುಂಡಿಗಳಿಗೆ ಜಲ್ಲಿ ಹುಡಿಗಳನ್ನು ಹಾಕುವ ಮೂಲಕ ತಾತ್ಕಾಲಿಕವಾಗಿ  ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ ಹಾಗೆಯೇ ಸೌಕೂರು ಟೆಂಪಲ್‌ ಫ್ರೆಂಡ್ಸ್‌ನವರು ರಸ್ತೆ ಹೊಂಡಗಳನ್ನು ಮುಚ್ಚುವಲ್ಲಿ ಶ್ರಮಿಸಿ ದ್ದರು. ಆದರೆ ಈ ಭಾಗದ ರಸ್ತೆ ಶಾಶ್ವತ ಕಾಂಕ್ರೀಟೀಕರಣ ಆದರೆ ಮಾತ್ರ ಪ್ರಯೋ ಜನ ವಿನಾ ತೇಪೆ ಕಾರ್ಯದಿಂದ  ಪ್ರಯೋಜನ ಇಲ್ಲ ಎನ್ನುವುದು ಗ್ರಾಮಸ್ಥರ ವಾದ.

ರಸ್ತೆ ಹಾಳಾಗಿದ್ದು  ಈ ತನಕ ಇಲಾಖೆಯಿಂದ ಯಾವುದೇ ದುರಸ್ತಿ ಕಾರ್ಯ ನಡೆದಿಲ್ಲ.  ವರ್ಷದಿಂದ ದುರಸ್ತಿ ಕಾಣದ ಈ ರಸ್ತೆಯನ್ನು   ಶಾಶ್ವತವಾಗಿ ಕಾಂಕ್ರಿಟ್‌ ರಸ್ತೆಯನ್ನಾಗಿ  ನಿರ್ಮಾಣ ಮಾಡಿ ಸಂಚಾರಕ್ಕೆ ಯೋಗ್ಯವನ್ನಾಗಿ ಮಾಡಬೇಕಾಗಿದೆ. ಗ್ರಾ.ಪಂ. ವತಿಯಿಂದ ಹೊಂಡ ಮುಚ್ಚುವ ಕಾಮಗಾರಿಯನ್ನು ನಡೆಸ ಲಾಗಿದೆ.  ಅಲ್ಲದೇ ರಸ್ತೆ ನಿರ್ಮಾಣದ ಬಗ್ಗೆ   ಈಗಾಗಲೇ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಮನವಿಯನ್ನು ನೀಡಲಾಗಿದೆ.
-ಪ್ರಕಾಶ್‌, 
ಗ್ರಾ.ಪಂ. ಸದಸ್ಯ ಕಾವ್ರಾಡಿ

ಹಲವು ವರ್ಷಗಳಿಂದ ರಸ್ತೆ ಹದಗೆಟ್ಟಿದೆ. ಸಂಚಾರ ಅಸಾಧ್ಯ ವಾಗಿದೆ. ಜನಪ್ರತಿನಿಧಿಗಳು ಸ್ಪಂದಿಸಿ ರಸ್ತೆ ನಿರ್ಮಾಣಕ್ಕೆ ಮನ ಮಾಡಬೇಕು.
-ಸುರೇಶ್‌, ಸ್ಥಳೀಯರು

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.