ಕಂಚಿನಡ್ಕ: ಭೂಮಿ ಅತಿಕ್ರಮಣ, 45ಕ್ಕೂ ಮಿಕ್ಕಿ ಗುಡಿಸಲು ನಿರ್ಮಾಣ


Team Udayavani, Apr 5, 2018, 7:00 AM IST

10.jpg

ಪಡುಬಿದ್ರಿ: ಪಡುಬಿದ್ರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ನಿವೇಶನ ರಹಿತರು ಸುಮಾರು 650ಕ್ಕೂ ಮೇಲ್ಪಟ್ಟು ಅರ್ಜಿ ನೀಡಿದ್ದು, 8 ವರ್ಷಗಳಿಂದಲೂ ಬಾಕಿ ಇದೆ. ಈ ನಿವೇಶನ ರಹಿತರಲ್ಲಿ ಸುಮಾರು 45ಕ್ಕೂ ಹೆಚ್ಚು ಮಂದಿ ಪಡುಬಿದ್ರಿಯ ಕಂಚಿನಡ್ಕ ಪೊಲೀಸ್‌ ಕ್ವಾರ್ಟರ್ಸ್‌ ಹಿಂಬದಿಯ ಪೊಲೀಸ್‌ ಇಲಾಖೆಗೆ ಹಾಗೂ ಸರಕಾರಿ ಜಿ. ಪಂ. ಶಾಲೆಗಳಿಗೆ ಒಳಪಟ್ಟಿರುವ 75 -3 ಎ 1.57ಎಕ್ರೆ ಭೂಮಿಯನ್ನು ಅತಿಕ್ರಮಿಸಿದ್ದಾರೆ. ವಾರದ ಹಿಂದೆಯಷ್ಟೇ ಈ ಗುಡಿಸಲುಗಳ ನಿರ್ಮಾಣವಾಗಿದೆ. ತಹಶೀಲ್ದಾರ್‌ ಜಾನ್‌ ಪ್ರಕಾಶ್‌ ರೋಡ್ರಿಗಸ್‌ ಪೊಲೀಸ್‌ ಅಧಿಕಾರಿಗಳ ಜತೆಗೆ ಆಗಮಿಸಿ ಸ್ಥಳ ತನಿಖೆಯನ್ನು ಈಗಾಗಲೇ ನಡೆಸಿದ್ದಾರೆ. 

ಇದೇ ವೇಳೆ ಮೊಗವೀರ ಜನಾಂಗದವರಿಗೆ 1961ರಲ್ಲಿ ಮೀಸಲಿರಿಸಿದ್ದ ತುಳುವ ಸಂಗಮ ಬಳಿಯ ನಡಾಲು ಗ್ರಾಮದ ಸ. ನಂ. 77ರಲ್ಲಿನ ಅಂಶದಲ್ಲಿಯೂ ಸುಮಾರು ಐದಾರು ಗುಡಿಸಲುಗಳ ನಿರ್ಮಾಣವಾಗಿದ್ದು, ಗ್ರಾಮ ಲೆಕ್ಕಿಗ ಶ್ಯಾಮ್‌ಸುಂದರ್‌, ಕಂದಾಯ ಪರಿವೀಕ್ಷಣಾಧಿಕಾರಿ ರವಿಶಂಕರ್‌ ಈ ವಿವಾದಿತ ಸ್ಥಳದ ಪರಿಶೀಲನೆಯನ್ನು ನಡೆಸಿದ್ದಾರೆ. 

ಗ್ರಾ. ಪಂ.ಗೆ ನಿವೇಶನ ರಹಿತರ ಅರ್ಜಿ
ಪೊಲೀಸ್‌ ಭೂಮಿಯಲ್ಲಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿರುವ ಸುಮಾರು 25 – 30 ಮಂದಿ ಲೋಕೇಶ್‌ ಕಂಚಿನಡ್ಕ ನೇತೃತ್ವದಲ್ಲಿ ಪಂಚಾಯತಿಗೆ ಅರ್ಜಿಯೊಂದನ್ನು ನೀಡಿದ್ದು, ತಮಗೆ ಅದೇ ಸ್ಥಳದಲ್ಲಿ ಮನೆ ನಿವೇಶನಗಳನ್ನಿತ್ತು ಹಕ್ಕುಪತ್ರವನ್ನು ದೊರಕಿಸಿಕೊಡುವಂತೆ ಮನವಿ ಮಾಡಿರುತ್ತಾರೆ.

ಅಲ್ಲಗಳೆವ ಮೊಗವೀರರು
ಆದರೆ ಈ ವಾದವನ್ನು ಮೊಗವೀರ ನಾಯಕ ಸದಾಶಿವ ಪಡುಬಿದ್ರಿ ಅಲ್ಲಗೆಳೆಯುತ್ತಿದ್ದಾರೆ. 1961ರಲ್ಲಿ ಸಮುದ್ರ ಕೊರೆತವುಂಟಾಗಿ ಅಳಿವೆ ಕಡಿದು ಹೋದ ಸಂದರ್ಭ ಮನೆ, ಮಠಗಳನ್ನು ಕಳೆದುಕೊಂಡ ಮೊಗವೀರ ಜನಾಂಗದ 42 ಮಂದಿಗೆ ಕಾದಿರಿಸಿದ ಸ್ಥಳ ಇದಾಗಿತ್ತು. ತಾವೀಗ ಕುಂದಾಪುರ ಸಹಾಯಕ ಕಮಿಶನರ್‌ ನ್ಯಾಯಾಲಯ ಹಾಗೂ ರಾಜ್ಯ ಉಚ್ಚ ನ್ಯಾಯಾಲಯದಲ್ಲೂ ತಮ್ಮ ಜಾಗವನ್ನು ತಮಗೆ ಮರಳಿಸಿ ಎಂದು ಮೇಲ್ಮನವಿಯನ್ನು ಸಲ್ಲಿಸಿದ್ದೇವೆ. ಈಗ ವಾಸವಿರುವ ಕುಟುಂಬಗಳಿಗೆ ಹಕ್ಕುಪತ್ರ ನೀಡಿರುವುದನ್ನೂ ನಾವು ಆಕ್ಷೇಪಿಸಿದ್ದೇವೆ. ನ್ಯಾಯಾಲಯದಲ್ಲಿ ಕೇಸು ವಿಚಾರಣೆಯಲ್ಲಿರುವ ವೇಳೆಯೇ ಸುಮಿತ್ರಾ ಎಂಬವರು ಮನೆಯೊಂದನ್ನು ಕಟ್ಟಿದ್ದು, ಅದನ್ನು ತೆರವುಗೊಳಿಸುವಂತೆ ಕಂದಾಯ ಇಲಾಖೆ ಈಚೆಗಷ್ಟೇ ಆದೇಶಿಸಿದೆ. ಪಡುಬಿದ್ರಿ ಗ್ರಾ. ಪಂ. ಕೂಡ ಸರ್ವಾನುಮತದಿಂದ ಈ ಜಾಗವನ್ನು ಯಾರಿಗೂ ಅತಿಕ್ರಮಿಸಲು ಬಿಡಬಾರದಾಗಿ ನಿರ್ಣಯ ಕೈಗೊಂಡಿದೆ ಎಂದಿದ್ದಾರೆ. ಆದರೆ ಈ ಸಂಬಂಧ ಇದುವರೆಗೂ ಯಾವುದೇ ಆದೇಶ ಜಾರಿಯಾಗಿಲ್ಲ ಎಂದು ಸದಾಶಿವ ಪಡುಬಿದ್ರಿ ಹೇಳುತ್ತಾರೆ. 

ನಮ್ಮ ಜಾಗವನ್ನು ಗುರುತಿಸಿಕೊಡಿ
ಈ ನಡುವೆ ಪೊಲೀಸ್‌ ಇಲಾಖೆ ಅಧಿಕಾರಿಗಳು ತಮಗೆ ಕಾದಿರಿಸಿದ ಸ್ಥಳವನ್ನು ಅಳತೆ ಮಾಡಿಸಿ ಗಡಿ ಗುರುತನ್ನು ಹಾಕಿ ಕೊಡುವಂತೆ ಪಡುಬಿದ್ರಿ ಪಿಎಸ್‌ಐ ಸತೀಶ್‌ ಅವರ ಮೂಲಕ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ. ಗಡಿ ಗುರುತು ಆದ ಕೂಡಲೇ ತಾವು ಮುಳ್ಳುತಂತಿ ಬೇಲಿಯನ್ನು ನಿರ್ಮಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಮೀಸಲು ಸ್ಥಳದಲ್ಲಿ ನಿವೇಶನ ಹಂಚಿಕೆ ಇಲ್ಲ
ಅದು ವಿವಿಧ ಇಲಾಖೆಗಳಿಗೆ ಕಾದಿರಿಸಿದ ಸ್ಥಳವಾಗಿರುವುದರಿಂದ ಹಾಗೂ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅರ್ಜಿಗೆ ಯಾವುದೇ ಹಿಂಬರಹ ನೀಡಲಾಗಿಲ್ಲ. ಮುಂದೆ ಕಂದಾಯ ಇಲಾಖೆ ಈ ಜಮೀನನ್ನು ಈಗ ನೀಡಲಾಗಿರುವ ಪೊಲೀಸ್‌ ಮತ್ತು ಶಿಕ್ಷಣ ಇಲಾಖೆಗಳಿಂದ ವಿರಹಿತಗೊಳಿಸಿ ಗ್ರಾ.ಪಂ.ಗೆ ಹಸ್ತಾಂತರಿಸಿದಲ್ಲಿ ಮಾತ್ರ ಅರ್ಹರಿಗೆ ಮನೆ ನಿವೇಶನಗಳನ್ನು ತಾವು ಹಂಚಿಕೊಡಬಹುದಾಗಿದೆ ಎಂದು ಗ್ರಾ. ಪಂ. ಪಿಡಿಒ ಪಂಚಾಕ್ಷರಿ ಸ್ವಾಮಿ ಕೆರಿಮಠ ತಿಳಿಸಿದ್ದಾರೆ. 

ಅತಿಕ್ರಮಿಸಿ ಗುಡಿಸಲು ನಿರ್ಮಿಸಲಾಗಿರುವ ನಡಾಲು ಗ್ರಾಮದ ಮೊಗವೀರ ಜನಾಂಗ ದವರ ಜಾಗವೂ ಈಗ ಸರಕಾರಿ ಸ್ಥಳವಾಗಿದೆ. ಈಗ 10 – 20 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದ ಸುಮಾರು 30 ಕುಟುಂಬಗಳಿಗೆ 94 – ಸಿ ಅನ್ವಯ ಹಕ್ಕುಪತ್ರವನ್ನು ನೀಡಲಾಗಿದೆ ಎಂದೂ ಗ್ರಾ. ಪಂ. ಪಿಡಿಒ ವಿವರಿಸಿದ್ದಾರೆ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.