ಕಾಪು ಸುಗ್ಗಿ ಮಾರಿಪೂಜೆ ; ಪುರಸಭೆಯಿಂದ ಸ್ವತ್ಛತೆಗೆ ಆದ್ಯತೆ


Team Udayavani, Mar 28, 2019, 6:30 AM IST

kapu-marigudi

ಕಾಪು : ಎರಡು ದಿನಗಳ ಕಾಲ ಜರಗಿದ ಕಾಲಾವಧಿ ಸುಗ್ಗಿ ಮಾರಿಪೂಜೆಗೆ ಸಂಬಂಧಿಸಿ ಕಾಪು ಪುರಸಭೆ ಕೈಗೊಂಡಿದ್ದ ಮಾದರಿ ಮುನ್ನೆಚ್ಚರಿಕಾ ಕ್ರಮಗಳಿಗೆ ಎಲ್ಲರಿಂದ ಪ್ರಶಂಸೆ ದೊರಕಿದೆ. ಈ ಬಾರಿಯ ಸುಗ್ಗಿ ಮಾರಿಪೂಜೆ ಸಂದರ್ಭ ಸುಮಾರು 7 ಟನ್‌ನಷ್ಟು ಹಸಿ ಮತ್ತು ಒಣ ಕಸ ಸಂಗ್ರಹವಾಗಿದ್ದು, ಶೇ. 95ರಷ್ಟು ಪ್ಲಾಸ್ಟಿಕ್‌ ರಹಿತವಾಗಿ ಮಾರಿಪೂಜೆಯನ್ನು ಆಚರಿಸಲಾಗಿದೆ.

ಕಾಪು ಪುರಸಭೆ ವತಿಯಿಂದ ಮೂರು ಮಾರಿಗುಡಿಗಳ ಆಸುಪಾಸಿನಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ 24 ಗಿ 7 ಮಾದರಿಯ ಸ್ವತ್ಛತಾ ಕಾರ್ಯಕ್ರಮ ನಡೆಸಲಾಗಿತ್ತು. ಸಂಪೂರ್ಣ ಸ್ವತ್ಛತೆಯ ಚಿಂತನೆಯೊಂದಿಗೆ 20 ಮಂದಿ ಪೌರ ಕಾರ್ಮಿಕರು, 2 ವಾಹನಗಳ ಸಹಿತವಾಗಿ ನಡೆಸಿರುವ ಮಾದರಿ ಕಾರ್ಯ ನಿರ್ವಹಣೆಗೆ ಶ್ಲಾಘನೆ ವ್ಯಕ್ತವಾಗಿದೆ.

ಸ್ವತ್ಛ ಕಾಪು – ಸುಂದರ ಕಾಪು ಘೋಷಣೆಯೊಂದಿಗೆ ಸ್ವತ್ಛತೆಗೆ ಆದ್ಯತೆ ನೀಡುತ್ತಾ ಬರುತ್ತಿರುವ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಸ್ವತ್ಛತೆ, ಪ್ಲಾಸ್ಟಿಕ್‌ ಮುಕ್ತ ಪರಿಸರ ನಿರ್ಮಾಣ, ತ್ಯಾಜ್ಯ ಮುಕ್ತ ಕಾಪು ರಚನೆಯೂ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸುಗ್ಗಿ ಮಾರಿಪೂಜೆಯ ಸಂದರ್ಭದಲ್ಲಿ ಕಾಪುವಿಗೆ ಬಂದ ಲಕ್ಷಾಂತರ ಮಂದಿ ಭಕ್ತಾಧಿಗಳಲ್ಲಿಯೂ ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಅವರ ನೇತೃತ್ವದಲ್ಲಿ ಸ್ವತ್ಛತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಸಲಾಯಿತು.

24 x 7 ಮಾದರಿಯಲ್ಲಿ ಕಾರ್ಯನಿರ್ವಹಣೆ
ಕಾಪು ಪೇಟೆ ಮತ್ತು ಮೂರು ಮಾರಿಗುಡಿಗಳ ವಠಾರದಲ್ಲಿ ತೆರೆಯಲಾಗಿದ್ದ ಅಂಗಡಿ ಮತ್ತು ಸ್ಟಾಲ್‌ಗ‌ಳ ಸಹಿತವಾಗಿ ವಿವಿಧೆಡೆಗಳಲ್ಲಿ ಕಸ ಮತ್ತು ತ್ಯಾಜ್ಯ ಸಂಗ್ರಹಣೆಗಾಗಿ 50 ಡ್ರಮ್‌ಗಳನ್ನು ಇಡಲಾಗಿತ್ತು. ಜನರಿಗೆ ಸ್ವತ್ಛತೆಯ ಮಾಹಿತಿ ನೀಡಿ, ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 85ಕ್ಕೂ ಅಧಿಕ ಫಲಕಗಳನ್ನು ಅಳವಡಿಸಲಾಗಿತ್ತು. ಇದರೊಂದಿಗೆ ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಅವರ ನೇತೃತ್ವದಲ್ಲಿ ಪರಿಸರ ಅಭಿಯಂತರ ರವಿಪ್ರಕಾಶ್‌, ಆರೋಗ್ಯ ನಿರೀಕ್ಷಕ ದಿನೇಶ್‌ ಕುಮಾರ್‌, ಬಿಲ್‌ ಕಲೆಕ್ಟರ್‌ಗಳಾದ ರಿತೇಶ್‌ ಮತ್ತು ಉಮೇಶ್‌ ಹಾಗೂ 6 ಮಂದಿ ಚಾಲಕರು, 20 ಮಂದಿ ಪೌರ ಕಾರ್ಮಿಕರು 24 ಗಿ 7 ಮಾದರಿಯಲ್ಲಿ ಸ್ವತ್ಛ ಕಾಪುವಿಗಾಗಿ ಶ್ರಮಿಸಿದ್ದಾರೆ.

ಎರಡು ದಿನದಲ್ಲಿ 7 ಟನ್‌ ಕಸ ಸಂಗ್ರಹ
ಮಂಗಳವಾರ ಸಂಜೆಯಿಂದ ಬುಧವಾರ ಸಂಜೆಯವರೆಗೆ ನಡೆದ ಸುಗ್ಗಿ ಮಾರಿಪೂಜೆಯ ಪ್ರಯುಕ್ತ ಹಳೇ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿ ಮತ್ತು ಅದರ ಸುತ್ತಮುತ್ತಲಿನಲ್ಲಿ 400ಕ್ಕೂ ಹೆಚ್ಚು ವಿವಿಧ ರೀತಿಯ ವ್ಯಾಪಾರ ಮಳಿಗೆಗಳು ತೆರೆದುಕೊಂಡಿದ್ದು, ಈ ಪ್ರದೇಶಗಳಿಂದ 4 ಟನ್‌ನಷ್ಟು ಹಸಿಕಸ ಮತ್ತು 3 ಟನ್‌ನಷ್ಟು ಒಣ ಕಸವನ್ನು ಸಂಗ್ರಹಿಸಲಾಗಿದೆ. ಇದನ್ನು ಘನ ಮತ್ತು ದ್ರವ ಸಂಪನ್ಮೂಲ ಘಟಕಕ್ಕೆ ಕೊಂಡೊಯ್ದು ಶೇಖರಣೆ ಮಾಡಲಾಗಿದೆ. ಮುಂದೆ ಅದನ್ನು ಸಂಪನ್ಮೂಲವಾಗಿ ಬಳಸಿಕೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ರಾಯಪ್ಪ ತಿಳಿಸಿದ್ದಾರೆ.

15 ಕೆ.ಜಿ.ಯಷ್ಟು ಪ್ಲಾಸ್ಟಿಕ್‌ ವಶಕ್ಕೆ
ಕಾಪು ಪುರಸಭೆಯ ಪ್ರದೇಶವನ್ನು ಈಗಾಗಲೇ ಪ್ಲಾಸ್ಟಿಕ್‌ ಮುಕ್ತ ವಲಯವನ್ನಾಗಿ ಘೋಷಿಸಲಾಗಿದ್ದು, ಮಾರಿಪೂಜೆಯ ಸಂದರ್ಭದಲ್ಲೂ ಪ್ಲಾಸ್ಟಿಕ್‌ ರಹಿತ ಮಾರಿಪೂಜೆ ನಡೆಸುವಂತೆ ಅಂಗಡಿ ಮಾಲಕರಿಗೆ, ಮಾರಿಗುಡಿಯ ಆಡಳಿತ ಮಂಡಳಿ ಮತ್ತು ಸಾರ್ವಜನಿಕರಿಗೆ ಪುರಸಭೆ ವತಿಯಿಂದ ಮನವಿ ಮಾಡಲಾಗಿತ್ತು. ಅದರಂತೆ ಶೇ. 95ರಷ್ಟು ಪ್ಲಾಸ್ಟಿಕ್‌ ರಹಿತವಾಗಿ ಮಾರಿಪೂಜೆ ಆಚರಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಮಂಗಳೂರು ಮತ್ತು ಉಡುಪಿ ಕಡೆಗಳಿಂದ ಬಂದ ವ್ಯಾಪಾರಸ್ಥರಿಂದ 15 ಕೆ.ಜಿ. ಪ್ಲಾಸ್ಟಿಕ್‌ನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಮುಖ್ಯಾಧಿಕಾರಿ ರಾಯಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.