Kapu: ಅ. 15 – 17: ಜೀರ್ಣೋದ್ದಾರ ನಿಧಿ ಸ್ಥಾಪನೆ, ಮುಷ್ಟಿ ಕಾಣಿಕೆ ಸಮರ್ಪಣೆ, ಮಹಾಸಂಕಲ್ಪ
Team Udayavani, Oct 13, 2023, 1:14 AM IST
ಕಾಪು: ಕಾಪು ಸೀಮೆಯ ಆರಾಧ್ಯ ದೇವತೆ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಸುತ್ತುಪೌಳಿಯ ಜೀರ್ಣೋದ್ಧಾರದ ಪ್ರಯುಕ್ತ ಅ. 15ರಂದು ಜೀರ್ಣೋದ್ಧಾರ ನಿಧಿ ಸ್ಥಾಪನೆ – ಮುಷ್ಟಿ ಕಾಣಿಕೆ ಸಮರ್ಪಣೆ – ಮಹಾಸಂಕಲ್ಪ ಅಭಿಯಾನ ಪ್ರಾರಂಭಗೊಳ್ಳಲಿದೆ.
ದೇವಸ್ಥಾನದ ಎಂಟು ದಶಕಗಳ ಹಳೆಯ ವಾಸ್ತುವಿನ ಸುತ್ತುಪೌಳಿ ಪ್ರಸ್ತುತ ಜೀರ್ಣಾವಸ್ಥೆಯಲ್ಲಿದ್ದು ಶ್ರೀ ಸಂಸ್ಥಾನ ಕಾಶೀ ಮಠಾಧಿಪತಿ ಶ್ರೀಮತ್ ಸಂಯಮೀಂದ್ರತೀರ್ಥ ಶ್ರೀಪಾದರ ಆಶೀರ್ವಾದ ಮತ್ತು ಮಾರ್ಗದರ್ಶನದಂತೆ ಸುತ್ತುಪೌಳಿಯ ಸಮಗ್ರ ಜೀರ್ಣೋದ್ಧಾರಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.
ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕಾಪು ಪೇಟೆಯ ಹತ್ತು ಸಮಸ್ತರು ನವರಾತ್ರಿಯ ಮೊದಲ ದಿನ ಬೆಳಗ್ಗೆ ಒಡೆಯ ವೆಂಕಟರಮಣ ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಬಳಿಕ ಬೆಳಗ್ಗೆ 9 ಗಂಟೆಗೆ ಮಾರಿಯಮ್ಮ ದೇವಸ್ಥಾನದಲ್ಲಿ ಜೀರ್ಣೋದ್ಧಾªರ ನಿಧಿ ಸ್ಥಾಪನೆ, ಮುಷ್ಟಿ ಕಾಣಿಕೆ ಸಮರ್ಪಣೆ, ಮಹಾ ಸಂಕಲ್ಪಕ್ಕೆ ಚಾಲನೆ ನೀಡಲಿದ್ದಾರೆ.
ಅ. 17ರ ವರೆಗೆ ಮುಷ್ಟಿ ಕಾಣಿಕೆ ಸಮರ್ಪಣೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರ ಪ್ರಸಾದ್ ಗೋಕುಲ್ದಾಸ್ ಶೆಣೈ ಮತ್ತು ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು