ಕಾಪು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಹೊಳೆಗೆ ಬಿದ್ದು ಸಾವು
Team Udayavani, Jul 17, 2023, 11:49 PM IST
ಕಾಪು: ಮೀನು ಹಿಡಿಯಲು ದೋಣಿಯಲ್ಲಿ ಹೋಗಿದ್ದ ವ್ಯಕ್ತಿ ಆಯತಪ್ಪಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಉದ್ಯಾವರದ ಪಿತ್ರೋಡಿಯಲ್ಲಿ ನಡೆದಿದೆ.
ಉದ್ಯಾವರ ಅಂಕುದ್ರು ನಿವಾಸಿ ರಾಘು (60) ಮೃತ ವ್ಯಕ್ತಿ. ಅವರು ಬಲೆ ಸಹಿತ ಇತ್ಯಾದಿ ಸಾಮಗ್ರಿಗಳೊಂದಿಗೆ ಮೀನು ಹಿಡಿಯಲು ರವಿವಾರ ಮಧ್ಯಾಹ್ನ ದೋಣಿಯಲ್ಲಿ ಉದ್ಯಾವರ ಪಿತ್ರೋಡಿ ಪಾಪನಾಶಿನಿ ಹೊಳೆಗೆ ಹೋಗಿದ್ದರು. ಬಲೆ ಬೀಸುವ ವೇಳೆ ಆಯ ತಪ್ಪಿ ಹೊಳೆಗೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ.
ರವಿವಾರ ಮಧ್ಯಾಹ್ನ ಮೀನುಗಾರಿಕೆಗೆ ಹೋಗಿದ್ದ ಅವರಿಗಾಗಿ ಮನೆಯವರು ರಾತ್ರಿಯವರೆಗೂ ಹುಡುಕಾಟ ನಡೆಸಿದ್ದರು. ಸೋಮವಾರ ಬೆಳಗ್ಗೆ ಪಿತ್ರೋಡಿ ಹೊಳೆ ಪರಿಸರದಲ್ಲಿ ಮೃತದೇಹ ಪತ್ತೆಯಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ