ಕಾಪು: ಕಚೇರಿಗಳು ಬರಲಿ ಯೋಜನೆಗಳೂ ಬರಲಿ
Team Udayavani, Aug 25, 2022, 5:30 AM IST
ಕಾಪು ತಾಲೂಕು 2017ರ ಬಜೆಟ್ನಲ್ಲಿ ಘೋಷಣೆಯಾಯಿತು. 2018 ಫೆ. 14ರಂದು ಅಧಿಕೃತವಾಗಿ ಉದ್ಘಾಟನೆಗೊಂಡಿತು. ನಾಲ್ಕು ವರ್ಷಗಳಲ್ಲಿ ಬೆಳವಣಿಗೆಯತ್ತ ಮುಖ ಮಾಡಿದೆ. ತಾಲೂಕು ಕಚೇರಿ, ತಾಲೂಕು ಪಂಚಾಯತ್, ಕಂದಾಯ ಇಲಾಖೆ, ಆಹಾರ ಇಲಾಖೆ ಮತ್ತು ಚುನಾವಣೆ ನಿರ್ವಹಣೆ ಹಾಗೂ
ಖಜಾನೆ ಇಲಾಖೆಗಳು ತಾಲೂಕು ಕೇಂದ್ರದಲ್ಲೇ ಕಾರ್ಯ ನಿರ್ವಹಿಸುತ್ತಿವೆ.
ಪ್ರಗತಿಯಲ್ಲಿದೆ
-ಮಿನಿ ವಿಧಾನಸೌಧ ನಿರ್ಮಾಣಕ್ಕೆ ಅನು ದಾನ ಮಂಜೂರಾಗಿದ್ದು, ಕಾಪು ಬಂಗ್ಲೆ – ಪುರಸಭೆ ಬಳಿಯ ಸರಕಾರಿ ಜಮೀನಿನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.
-ಹೆಜಮಾಡಿ ಮೀನುಗಾರಿಕೆ ಬಂದರು ನಿರ್ಮಾಣಕ್ಕೆ ಚಾಲನೆ ದೊರಕಿದೆ.
-ಬೆಳಪುವಿನಲ್ಲಿ ಕಾಪು ಪಾಲಿಟೆಕ್ನಿಕ್ ಕಾಲೇಜು ಆರಂಭಗೊಂಡಿದೆ. ಬೆಳಪುವಿನಲ್ಲಿ ಅತ್ಯಾ ಧುನಿಕ ವಿಜ್ಞಾನ ಸಂಶೋಧನ ಕೇಂದ್ರದ ಕಾಮಗಾರಿ ನಡೆಯುತ್ತಿದೆ.
-ಕುರ್ಕಾಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ.
ತಾಲೂಕಿನ ಪ್ರಮುಖ ವಾಣಿಜ್ಯಬೆಳೆಗಳಾದ ಶಂಕರಪುರ ಮಲ್ಲಿಗೆಯನ್ನು ಪೋಷಿಸಲು ಶೀಥಲೀಕೃತ ಸಂಗ್ರಹಣಾ ಘಟಕ ಮತ್ತು ಮಟ್ಟುಗುಳ್ಳ ಬೆಳೆಯನ್ನು ಪ್ರೋತ್ಸಾಹಿ ಸಲು ಮಾರುಕಟ್ಟೆ ವ್ಯವಸ್ಥೆ ಜೋಡಣೆಯಾಗ ಬೇಕಿದೆ. ಕಡಲ ತೀರದ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಶೇಷ ಉತ್ತೇಜನ ಸಿಗಬೇಕಿದೆ.
ಆಗಬೇಕಾದದ್ದು
-ಸಬ್ ರಿಜಿಸ್ಟ್ರಾರ್ ಕಚೇರಿ, ತಾಲೂಕು ನ್ಯಾಯಾಲಯ, ತಾಲೂಕು ಆಸ್ಪತ್ರೆ, ಅಗ್ನಿ ಶಾಮಕ ಠಾಣೆ, ಪ್ರಾದೇಶಿಕ ಸಾರಿಗೆ ಕಚೇರಿ, ಮೆಸ್ಕಾಂ ಕಚೇರಿ, ಶಿಕ್ಷಣ ಇಲಾಖೆ ಮತ್ತು ಬಿಒ ಕಚೇರಿ, ಲೋಕೋಪಯೋಗಿ ಇಲಾಖೆ, ಮೀನುಗಾರಿಕೆ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ನೋಂದಣಿ ಮತ್ತು ಮುದ್ರಾಂಶ, ಸಣ್ಣ ನೀರಾವರಿ ಇಲಾಖೆ, ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ ಸಹಿತ ವಿವಿಧ ಇಲಾಖೆಗಳು ಇನ್ನೂ ಬರಬೇಕಿವೆ.
-ತೋಟಗಾರಿಕೆ ಇಲಾಖೆ, ರೈತ ಸಂಪರ್ಕ ಕೇಂದ್ರ ಮತ್ತು ಪಶು ಇಲಾಖೆಗೆ ತಾಲೂಕು ಮಟ್ಟದ ಅಧಿಕಾರಿಗಳ ನೇಮಕವಾಗಬೇಕಿದೆ. ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣವಾಗಬೇಕಿದೆ.
-ತಾಲೂಕಿನಾದ್ಯಂತ ಕೆಎಸ್ಆರ್ಟಿಸಿ ಬಸ್ ಸಂಚಾರ ಮತ್ತು ನಿಲ್ದಾಣ ವ್ಯವಸ್ಥೆ, ತಾಲೂಕು ಕ್ರೀಡಾಂಗಣ, ತಾಲೂಕು ಕೇಂದ್ರದಿಂದ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಸಂಚಾರ ವ್ಯವಸ್ಥೆ ಜೋಡಣೆಗೆ ವಿಶೇಷ ಆದ್ಯತೆ ನೀಡಬೇಕಿದೆ.
- ರಾಕೇಶ್ ಕುಂಜೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ