ಹೊಳೆ ಹರಿವಿನ ದಿಕ್ಕನ್ನೇ ಬದಲಿಸಿದ ಉತ್ತರಾ ನೆರೆ:ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ


Team Udayavani, Sep 21, 2020, 8:16 AM IST

ನದಿ ಪಾತ್ರವನ್ನೇ ಬದಲಿಸಿದ ಉತ್ತರಾ ನೆರೆ: ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಕಾಪು:ರವಿವಾರ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಸೋಮವಾರ ಸ್ವಲ್ಪ ಕಡಿಮೆಯಾಗಿದೆ. ಹಲವೆಡೆ ನೆರೆ ನೀರು ನಿಧಾನವಾಗಿ ತಗ್ಗುತ್ತಿದ್ದು, ಮಳೆಯಿಂದಾದ ಹಾನಿಯ ದೃಶ್ಯಗಳು ಕಂಡುಬರುತ್ತಿದೆ.

ಕಾಪು ಲೈಟ್ ಹೌಸ್ ಬಳಿಯ ಹೊಳೆಯಿಂದ ನೆರೆ ನೀರು ದಿಕ್ಕು ಬದಲಿಸಿ ಸಮುದ್ರ ಸೇರುತ್ತಿದ್ದು ಪ್ರಸಿದ್ದ ಲೈಟ್ ಹೌಸ್‌ನ್ನು ಸಂಪರ್ಕಿಸುವ ಕಾಲು ದಾರಿಯ ಮಾರ್ಗವು ಸಂಪೂರ್ಣ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ.

ಕಾಪು ಬೀಚ್‌ನಲ್ಲಿ ಬ್ರಿಟೀಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಲೈಟ್ ಹೌಸ್‌ನ ಹಿಂಭಾಗದಲ್ಲಿ ಸಮುದ್ರ ಮತ್ತು ಹೊಳೆ ನೀರಿನ ಸಂಗಮ ಪ್ರದೇಶವಿದ್ದು, ಭಾರೀ ಮಳೆಯಿಂದಾಗಿ ರವಿವಾರ ಸಂಜೆಯ ವೇಳೆ ಹೊಳೆ ಹರಿಯುವ ದಿಕ್ಕು ಬದಲಾಗಿದೆ.

ಇದನ್ನೂ ಓದಿ:ಜಿಲ್ಲೆಯಲ್ಲಿ ಇನ್ನು 2 ದಿನ ರೆಡ್ ಅಲರ್ಟ್: 700 ಕುಟುಂಬಗಳ ಸ್ಥಳಾಂತರ: ಉಡುಪಿ ಜಿಲ್ಲಾಧಿಕಾರಿ

ಹೊಳೆಯ ಹಿಂದಿನ ದಾರಿಯ ಬದಲಾಗಿ ಹರಿದು ಬಂದು ನೀರು ಲೈಟ್ ಹೌಸ್‌ನ ಮುಂಭಾಗದಿಂದಲೇ ಸಮುದ್ರವನ್ನು ಸೇರುತ್ತಿರುವುದರಿಂದ ಲೈಟ್ ಹೌಸ್ ಗೆ ತೆರಳುವ ಸಂಪರ್ಕ ಕೊಂಡಿ, ಶೌಚಾಲಯ ಬಳಿಯ ಸಿಮೆಂಟ್ ಸ್ಲಾಬ್, ಪಾತ್ ವೇ, ಲೈಟ್ ಹೌಸ್ ಪ್ರವೇಶದ ಮೆಟ್ಟಿಲುಗಳು ಸಂಪೂರ್ಣ ಕೊಚ್ಚಿ ಹೋಗಿವೆ.

ನದಿ ಪಾತ್ರವನ್ನೇ ಬದಲಿಸಿದ ಉತ್ತರಾ ನೆರೆ

ಕಾಪು ಪಡು ಗ್ರಾಮ, ಗರಡಿ ಪ್ರದೇಶ, ಸುಬ್ಬಯ್ಯ ತೋಟ, ಬೈರು ಗುತ್ತು ತೋಟ ಸೇರಿದಂತೆ ಎಲ್ಲೆಡೆ ಸಂಗ್ರಹವಾಗಿ, ಈ ಹೊಳೆಯ ಮೂಲಕ ರಭಸವಾಗಿ ಹರಿದು ಬರುತ್ತಿರುವ ಮಳೆ ನೀರು ಲೈಟ್ ಹೌಸ್‌ನ ಮುಂಭಾಗದಿಂದಲೇ ಸಮುದ್ರ ಸೇರುತ್ತಿರುವುದರಿಂದ ಕಾಪು ಲೈಟ್ ಹೌಸ್‌ಗೆ ಹೋಗುವ ಸಂಪರ್ಕ ಕಡಿತಕ್ಕೊಳಗಾಗಿದ್ದು, ಸೋಮವಾರವೂ ಮಳೆ ಮುಂದುವರಿದರೆ‌ಮತ್ತಷ್ಟು ಅಪಾಯ ಹೆಚ್ಚುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಭಾರಿ ಮಳೆಗೆ ಭದ್ರಾವತಿಯ ಹೊಸ ಸೇತುವೆ ಮುಳುಗಡೆ: ವಾಹನ ಸಂಚಾರ ಬಂದ್

ಲೈಟ್ ಹೌಸ್‌

ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ, ಪುರಸಭಾ ಸದಸ್ಯರು ಮತ್ತು ಲೈಟ್ ಹೌಸ್ ಡಿಪಾರ್ಟ್‌ಮೆಂಟ್‌ನ ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರ ಮುಂಜಾನೆಯಿಂದಲೇ ಇಲ್ಲಿನ ಹಾನಿಯ ದೃಶ್ಯ ವೀಕ್ಷಣೆಗೆ ಜನ ಆಗಮಿಸಲಾರಂಭಿಸಿದ್ದಾರೆ.

ಲೈಟ್ ಹೌಸ್‌

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.