ಕರ್ಜೆ: ನೇಣು ಬಿಗಿದು ಯುವಕ ಆತ್ಮಹತ್ಯೆ
Team Udayavani, Dec 3, 2022, 10:10 PM IST
ಬ್ರಹ್ಮಾವರ: ಕರ್ಜೆ ತಡಾಲಿನ ಪ್ರಕಾಶ (23) ಸರಕಾರಿ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಅವರು ಕೊರೊನಾ ಅನಂತರ ಊರಿನಲ್ಲಿ ತೋಟದ ಕೆಲಸ ಹಾಗೂ ಗಾರೆ ಕೆಲಸ ಮಾಡಿಕೊಂಡಿದ್ದರು.
ಸುಮಾರು 5 ತಿಂಗಳ ಹಿಂದೆ ಸಾಲ ಮಾಡಿ ಹೊಸ ರಿಕ್ಷಾ ಖರೀದಿಸಿದ್ದು, ಆ ಸಮಯ ಬೈಕ್ನಿಂದ ಬಿದ್ದು ಗಾಯಗೊಂಡು ಒಂದು ತಿಂಗಳು ವಿಶ್ರಾಂತಿಯಲ್ಲಿದ್ದರು. ಇದರಿಂದ ಬೇಸರಗೊಂಡು ರಿಕ್ಷಾ ಮಾರಾಟ ಮಾಡಿದ್ದರು.
ಇತ್ತೀಚೆಗೆ ಸಾಲ ಮರುಪಾವತಿ ಬಗ್ಗೆ ಸೊಸೈಟಿಯಿಂದ ನೋಟಿಸ್ ಬಂದಿದ್ದು, ವಿಪರೀತ ಮದ್ಯ ಸೇವನೆ ಮಾಡುತ್ತಿದ್ದರು. ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ