ಕಾರ್ಕಳ: 442 ಅನರ್ಹ ಪಡಿತರ ಚೀಟಿ ಪತ್ತೆ

17,161 ಎಪಿಎಲ್‌, 33,533 ಬಿಪಿಲ್‌, 4,168 ಅಂತ್ಯೋದಯ ಪಡಿತರ ಚೀಟಿ

Team Udayavani, Nov 8, 2019, 5:54 AM IST

BPL-RATION-CARD

ಕಾರ್ಕಳ: ಸರಕಾರದ ಮಾನದಂಡಕ್ಕೆ ವಿರುದ್ಧವಾಗಿ ಈವರೆಗೆ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ 442 ಕುಟುಂಬಗಳು ಕಾರ್ಕಳದಲ್ಲಿ ಪತ್ತೆಯಾಗಿವೆ. ಆರ್‌ಟಿಒ ಮಾಹಿತಿ ಪ್ರಕಾರ 102, ಸ್ವಯಂ ಪ್ರೇರಿತರಾಗಿ 340 ಕುಟುಂಬಗಳು ಈಗಾಗಲೇ ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತನೆಯಾಗಿದ್ದು, ಅನರ್ಹರು ಕೂಡಲೇ ಕಾರ್ಡ್‌ ತಂದೊಪ್ಪಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.ಕಾರ್ಕಳ ತಾಲೂಕಿನಲ್ಲಿ 17,161 ಎಪಿಎಲ್‌, 33,533 ಬಿಪಿಲ್‌, 4,168 ಅಂತ್ಯೋದಯ ಪಡಿತರ ಚೀಟಿಯಿದ್ದು ಒಟ್ಟು 54, 862 ಪಡಿತರ ಕಾರ್ಡ್‌ ಇದೆ.

ಸೌಲಭ್ಯ
ಎಪಿಎಲ್‌ ಕಾರ್ಡ್‌ದಾರರಿಗೆ ಕೆ.ಜಿ.ಯೊಂದಕ್ಕೆ ರೂ. 15ರಂತೆ ತಿಂಗಳಿಗೆ ಗರಿಷ್ಠವಾಗಿ 10 ಕೆ.ಜಿ. ಅಕ್ಕಿ, ಬಿಪಿಎಲ್‌ ಕುಟುಂಬಗಳಿಗೆ ಪ್ರಸ್ತುತ ಓರ್ವ ಸದಸ್ಯನಿಗೆ ತಲಾ 7 ಕೆ.ಜಿ.ಯಂತೆ ಉಚಿತವಾಗಿ ಅಕ್ಕಿ ನೀಡಲಾಗುತ್ತಿದೆ. ಅಂತ್ಯೋದಯ ಕಾರ್ಡ್‌ದಾರರಿಗೆ ಕುಟುಂಬಕ್ಕೆ 35 ಕೆ.ಜಿ. ಅಕ್ಕಿ ನೀಡಲಾಗುತ್ತಿದೆ. ಇದಲ್ಲದೇ ಅಂತ್ಯೋದಯ, ಬಿಪಿಎಲ್‌ ಕಾರ್ಡ್‌ದಾರರಿಗೆ ಸರಕಾರದಿಂದ ಅನೇಕ ಸೌಲಭ್ಯಗಳೂ ದೊರೆಯುತ್ತಿವೆ.

ಹಳೆ ಕಾರ್‌ ಹೊಂದಿದ್ದರೂ ಬಿಪಿಎಲ್‌ ಕಾರ್ಡ್‌ ಕಟ್‌
ಸಾಕಷ್ಟು ಆಸ್ತಿಪಾಸ್ತಿ ಹೊಂದಿದವರೂ ಬಿಪಿಎಲ್‌ ಪಡಿತರ ಚೀಟಿ ಹೊಂದಿದವರಿದ್ದಾರೆ. ಆದರೆ, ಕಡಿಮೆ ಆಸ್ತಿಯಿದ್ದಾಗ್ಯೂ ಹಳೆ ಕಾರ್‌ ಹೊಂದಿದ್ದಲ್ಲಿ ಕೂಡ ನಿಯಮದನ್ವಯ ಬಿಪಿಎಲ್‌ ಪಡಿತರ ಚೀಟಿ ರದ್ದಾಗುವುದು. ಇಂತಹ ನಿಯಮ ಸರಿಯಲ್ಲ ಎನ್ನುವ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ.

ಹೇಗೆ ಅನರ್ಹರು ?
-  ಆದಾಯ ತೆರಿಗೆ ಪಾವತಿದಾರರು.ಸರಕಾರಿ ,ಅರೆ ಸರಕಾರಿ ಉದ್ಯೋಗ ಹೊಂದಿರುವ ಕುಟುಂಬ.
-   ರೂ. 1.20 ಲಕ್ಷಕ್ಕಿಂತ ಅಧಿಕ ವಾರ್ಷಿಕ ಆದಾಯ ಹೊಂದಿರುವ ಕುಟುಂಬ.
-   ಪಡಿತರ ಚೀಟಿ ವಿಳಾಸದಲ್ಲಿ ವಾಸವಾಗಿರದೇ ಇರುವುದು.
-   ಮರಣ ಹೊಂದಿದವರು ಮತ್ತು ಕುಟುಂಬದಲ್ಲಿ ವ್ಯಾಸ್ತವ್ಯ ಹೊಂದದೇ ಇರುವಂತಹ ಸದಸ್ಯರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೇ ಉಳಿಸಿಕೊಂಡವರು.
-   ಜೀವನೋಪಾಯಕ್ಕಾಗಿ ಹೊಂದಿರುವ ಒಂದು ಟೂರಿಸ್ಟ್‌ ಕಾರು, ಲಾರಿ ಹೊರತುಪಡಿಸಿ ಕಾರು, ಲಾರಿ, ಜೇಸಿಬಿ ಮೊದಲಾದ ವಾಹನ ಹೊಂದಿರುವವರು.
-   ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‌ ಭೂಮಿ ಹಾಗೂ ನಗರ ಪ್ರದೇಶದಲ್ಲಿ 1 ಸಾವಿರ ಚದರಡಿ ಹೆಚ್ಚಿನ ವಿಸ್ತೀರ್ಣದ ಸ್ವಂತ ಮನೆ ಹೊಂದಿರುವವರು.
-  ಒಂದು ಮನೆಯಲ್ಲಿ 1ಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವುದು.

ಅನರ್ಹರು ಕಾರ್ಡ್‌ ತಂದೊಪ್ಪಿಸಿ
ಅನರ್ಹರು ಬಿಪಿಎಲ್‌ ಕಾರ್ಡ್‌ ಒಪ್ಪಿಸಲು ಈಗಲೂ ಅವಕಾಶವಿದೆ. ಅವರಾಗಿಯೇ ತಂದೊಪ್ಪಿಸಲು ವಿಳಂಬ ಮಾಡಿದಲ್ಲಿ ಆಹಾರ ಇಲಾಖೆ ಪತ್ತೆ ಹಚ್ಚಲು ಮುಂದಾಗಲಿದ್ದು, ಅಂತಹವರಿಗೆ ದಂಡ ವಿಧಿಸಲಾಗುವುದು. ಕಾಯ್ದೆಯನ್ವಯ ಕ್ರಿಮಿನಲ್‌ ಕೇಸ್‌ ಹಾಕಲು ಅವಕಾಶವಿದೆ.
-ಬಿ.ಕೆ. ಕುಸುಮಾಧರ್‌, ಉಪನಿರ್ದೇಶಕರು, ಆಹಾರ ಇಲಾಖೆ ಉಡುಪಿ

ದಂಡ ವಿಧಿಸಿಲ್ಲ
ಸರಕಾರದ ಮಾನದಂಡಗಳನ್ನು ಮೀರಿ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಫ‌‌ಲಾನುಭವಿಗಳಿಗೆ ದಂಡರಹಿತವಾಗಿ ಎಪಿಎಲ್‌ಗೆ ಪರಿವರ್ತಿಸಲು ಅ.30ರವರೆಗೆ ಅವಕಾಶವಿತ್ತು. ಹೀಗಾಗಿ ಯಾರಿಗೂ ದಂಡ ವಿಧಿಸಿಲ್ಲ.
-ಪುರಂದರ ಹೆಗ್ಡೆ, ತಹಶೀಲ್ದಾರರು, ಕಾರ್ಕಳ

ವಿಶೇಷ ವರದಿ- ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.