Karkala ತರಕಾರಿ ಅಂಗಡಿಗೆ ನುಗ್ಗಿದ ಕಾರು
Team Udayavani, Aug 16, 2023, 12:01 AM IST
ಕಾರ್ಕಳ: ಬೈಲೂರು ಪೇಟೆಯ ಮುಖ್ಯರಸ್ತೆಯಲ್ಲಿರುವ ತರಕಾರಿ ಅಂಗಡಿಗೆ ಕಾರೊಂದು ನಿಯಂತ್ರಣ ತಪ್ಪಿ ನುಗ್ಗಿದ ಘಟನೆ ಆ. 15ರಂದು ಸಂಜೆ ಸಂಭವಿಸಿದೆ.
ಬೆಂಗಳೂರಿನಿಂದ 4 ಮಂದಿ ಯುವಕರು ಕಾರಿನಲ್ಲಿ ಮಲ್ಪೆಗೆ ಕಾರ್ಕಳ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಬೈಲೂರು ಪೇಟೆಗೆ ತಲುಪಿದಾಗ ಈ ಘಟನೆ ಸಂಭವಿಸಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಚಾಲಕನ ಅತೀ ವೇಗ ಹಾಗೂ ಬೇಜವಾಬ್ದಾರಿ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ. ಕಾರು ಢಿಕ್ಕಿ ಹೊಡೆದ ರಭಸಕ್ಕೆ ತರಕಾರಿ ಅಂಗಡಿಯ ಗೋಡೆ ಮಗುಚಿದೆ.