ನಗರ, ಗ್ರಾಮಾಂತರದಲ್ಲಿ  ಕಳ್ಳತನ, ದರೋಡೆ ಪ್ರಕರಣ ಶೂನ್ಯ


Team Udayavani, Jun 11, 2021, 5:50 AM IST

ನಗರ, ಗ್ರಾಮಾಂತರದಲ್ಲಿ  ಕಳ್ಳತನ, ದರೋಡೆ ಪ್ರಕರಣ ಶೂನ್ಯ

ಕಳೆದ ವರ್ಷ ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಆರ್ಥಿಕ ಹಿಂಜರಿತ ಉಂಟಾಗಿ ಕಳ್ಳತನ ಕೃತ್ಯಗಳು ತಾಲೂಕಿನಲ್ಲಿ  ಹೆಚ್ಚಳವಾಗಲು ಕಾರಣವಾಗಿತ್ತು.  ಹಾಗಾಗಿ ಕೊರೊನಾ 2ನೇ ಅಲೆಗೂ ಮುನ್ನವೇ ಎರಡೂ ಠಾಣೆಗಳ  ಪೊಲೀಸರು ಅಪರಾಧ ನಿಯಂತ್ರಣಕ್ಕೆ ಸಾಕಷ್ಟು ಮುಂಜಾಗ್ರತ ಕ್ರಮಗಳನ್ನು ಕೈಕೊಂಡಿದ್ದರು. ಇದರಿಂದ  ಅಪರಾಧ ಪ್ರಕರಣಗಳು ಗಣನೀಯವಾಗಿ ತಗ್ಗಿದೆ.

ಕಾರ್ಕಳ:  ಕೋವಿಡ್ ಎರಡನೇ  ಅಲೆಯ ಲಾಕ್‌ಡೌನ್‌ ಆದ ಹಿನ್ನೆಲೆಯಲ್ಲಿ  ತಾ|ನಲ್ಲಿ  ದರೋಡೆ,  ಕಳ್ಳತನ   ಅಪರಾಧ  ಪ್ರಕರಣಗಳು ಕಡಿಮೆಯಾಗಿವೆ. ಗ್ರಾಮಾಂತರ ಹಾಗೂ ನಗರ ಠಾಣೆಗಳ ವ್ಯಾಪ್ತಿಯಲ್ಲಿ  ಶೂನ್ಯ ಪ್ರಕರಣ ದಾಖಲಾಗಿದೆ. ಎಲ್ಲರೂ ಮನೆಗಳಲ್ಲಿರುವುದು ಮತ್ತು ಕಳೆದ  ಲಾಕ್‌ಡೌನ್‌ ಅನಂತರ ಬಳಿಕ ಪೊಲೀಸರು ಹಳ್ಳಿಗಳಲ್ಲಿ  ಜನಜಾಗೃತಿ ಮೂಡಿಸಿರುವುದು ಪ್ರಕರಣ ಇಳಿಕೆಗೆ ಕಾರಣವೆನ್ನಬಹುದು.

ಕಳೆದ ಬಾರಿ 145+ ಪ್ರಕರಣ :

ಕೋವಿಡ್ ಮಹಾಮಾರಿ  ತಂದಿಟ್ಟ  ಸಂಕಷ್ಟ  ಒಂದೆ ರಡಲ್ಲ.  ಲಾಕ್‌ಡೌನ್‌ನಿಂದ ಸರಿಯಾಗಿ ಕೆಲಸವೂ  ಇಲ್ಲದೆ ಜನರು  ಸಂಕಷ್ಟಕ್ಕೆ ಒಳಗಾಗಿದ್ದರು.

ಕಳೆದ ವರ್ಷ ಲಾಕ್‌ಡೌನ್‌ ಅನಂತರ ಕಾರ್ಕಳ ತಾ|ನ ನಗರ ಹಾಗೂ ಗ್ರಾಮೀಣ ಭಾಗದಲ್ಲಿ   ಸುಮಾರು 145ಕ್ಕೂ ಕಳ್ಳತನ, ದರೋಡೆ ಪ್ರಕರಣಗಳು  ದಾಖಲಾಗಿದ್ದವು. ಅವುಗಳಲ್ಲಿ  ಹೆಚ್ಚಿನವು  ಹಳ್ಳಿಗಳಲ್ಲಿ  ನಡೆದಿತ್ತು. ಇವುಗಳು  ಪೊಲೀಸರನ್ನು   ನಿದ್ದೆಗೆಡಿಸಿದ್ದು ಹತೋಟಿಗೆ ತರಲು ಅವರು ಹರಸಾಹಸಪಟ್ಟಿದ್ದರು.

2ನೇ ಅಲೆಯಲ್ಲಿ ಕಳ್ಳರ ಕಾಟವಿಲ್ಲ :

ಕೋವಿಡ್ ಸೋಂಕಿನ ಎರಡನೇ ಅಲೆಯಿಂದ ಲಾಕ್‌ಡೌನ್‌ ನಾಗರಿಕರನ್ನು  ಮನೆಯಲ್ಲಿ  ಬಂಧಿಯಾಗಿಸಿದ್ದು ದರೋಡೆ, ಕಳ್ಳತನ, ಸರಗಳ್ಳತನ, ಮನೆಗಳ್ಳತನ ಮುಂತಾದ ಅಪರಾಧ ಕೃತ್ಯಗಳು ಕಡಿಮೆಯಾಗಿ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಮನೆ ಗಲಾಟೆ, ಕಿರುಕುಳ ಮತ್ತಿತರ ಕೌಟುಂಬಿಕ ಕಲಹ ಪ್ರಕರಣಗಳು ತುಸು ಹೆಚ್ಚಳವಾಗಿದೆ ಎಂದು ಪೊಲೀಸರು ಹೇಳುತ್ತಾರೆ. ಉಳಿದಂತೆ ನಿಯಮ ಉಲ್ಲಂಘನೆ  ಪ್ರಕರಣಗಳು ಬಿಟ್ಟರೆ  ಕಳ್ಳತನ, ದರೋಡೆ ಯಂತಹ ಪ್ರಕರಣಗಳಲ್ಲಿ  ತೀರಾ ಇಳಿಕೆಯಾಗಿದೆ  ಎನ್ನುತ್ತಾರವರು.

ಜನ ಜಾಗೃತರಾಗಬೇಕಿದೆ  :

ಎರಡನೇ ಅಲೆಯಿಂದ ಆರ್ಥಿಕತೆಯು  ಪಾತಾಳಕ್ಕೆ ಇಳಿದಿದೆ. ಸರಕಾರ ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ಇಳಿಸಲು ಸಿದ್ಧತೆ ನಡೆಸುತ್ತಿದೆ. ಅನ್‌ಲಾಕ್‌ ಆದ ಬೆನ್ನಿಗೆ ಮತ್ತೆ ಕಳ್ಳತನ, ದರೋಡೆ ಇತ್ಯಾದಿ ಕೃತ್ಯಗಳು ನಡೆಯುವ ಸಂಭವವಿರುವುದರಿಂದ ಅದಕ್ಕೆ  ತಡೆ ತರಲು ಪೊಲೀಸರು ಈಗಿಂದೀಗಲೇ  ಸನ್ನದ್ಧರಾಗುತ್ತಿದ್ದಾರೆ. ಲಾಕ್‌ಡೌನ್‌ ಕರ್ತವ್ಯ ನಿರ್ವಹಣೆಯ ಮಧ್ಯೆಯೂ ಅಪರಾಧ ತಡೆಗೆ ಹೆಚ್ಚಿನ ನಿಗಾವನ್ನು  ಪೊಲೀಸ್‌ ಇಲಾಖೆ  ಇರಿಸಿದೆ.  ಮತ್ತೆ ಹಳ್ಳಿಗಳಲ್ಲಿ  ಜನಜಾಗೃತಿ ಕೈಗೊಳ್ಳುವ, ಬೀಟ್‌ ಪೊಲೀಸರು ಜಾಗೃತಿಗೊಳಿಸಲು ಸಿದ್ಧತೆ ನಡೆಸುತ್ತಿದ್ದಾರೆ. ನಾಗರಿಕರೂ ಆದೇಶಗಳನ್ನು  ಪಾಲಿಸಬೇಕಿದೆ.

ಲಾಕ್‌ಡೌನ್‌ನಿಂದ   ಜನರು ಮನೆಯಲ್ಲೇ ಇದ್ದರು. ಆದರೆ ಮುಂದಿನ  ದಿನಗಳಲ್ಲಿ ಅನ್‌ಲಾಕ್‌ ಆದಾಗ ಸಾರ್ವಜನಿಕರು  ಎಚ್ಚರಿಕೆ ವಹಿಸುವುದು ತೀರಾ ಅಗತ್ಯ.– ಮಧು ಬಿ.ಇ., ನಗರ ಠಾಣೆ ಎಸ್‌ಐ

ಅನ್‌ಲಾಕ್‌ನ  ಸಂದರ್ಭದ ದಿನಗಳು ಯಾವ ರೀತಿ ಇರುತ್ತೆ  ಎನ್ನುವುದನ್ನು  ಈಗಲೇ ಹೇಳಲು ಸಾಧ್ಯವಿಲ್ಲ. ಅಂತಹ ಕೃತ್ಯಗಳು ನಡೆಯದಂತೆ ನಾವು  ಮುನ್ನೆಚ್ಚರಿಕೆ ವಹಿಸುವುದು, ಸಾರ್ವಜನಿಕರಿಗೆ ತಿಳಿವಳಿಕೆ, ಜಾಗೃತಿ ಮೂಡಿಸುವುದನ್ನು  ಕಾನೂನಿನ ಚೌಕಟ್ಟಿನಲ್ಲಿ  ನಿರಂತರ ನಡೆಸುತ್ತಲೇ ಇರುತ್ತೇವೆ.– ತೇಜಸ್ವಿ , ಗ್ರಾಮಾಂತರ ಠಾಣೆ ಎಸ್‌ಐ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.