ಕಾರ್ಕಳ ಕೋರ್ಟ್ ಸ್ಥಳಾಂತರ
Team Udayavani, Apr 2, 2019, 6:30 AM IST
ಕಾರ್ಕಳ: ಪೊಲೀಸ್ ಠಾಣೆ ಸಮೀಪದಲ್ಲಿರುವ ನ್ಯಾಯಾಧೀಶರ ವಸತಿಗೃಹಕ್ಕೆ ಕಾರ್ಕಳ ಕೋರ್ಟ್ ಸ್ಥಳಾಂತರಗೊಂಡು ಎ. 1ರಿಂದ ಕಾರ್ಯಾಚರಿಸುತ್ತಿದೆ.
ಐತಿಹಾಸಿಕ ಹಿನ್ನೆಲೆಯ ಕಾರ್ಕಳ ಕೋರ್ಟ್ ಶತಮಾನಗಳಿಂದ ಪೆರ್ವಾಜೆ ಎಂಬಲ್ಲಿ ಕಾರ್ಯಾಚರಿಸುತ್ತಿತ್ತು. ಹೊಸ ಕಟ್ಟಡ ನಿರ್ಮಾಣಕ್ಕಾಗಿ ಸರಕಾರದಿಂದ ಅನುದಾನ ಮಂಜೂರುಗೊಂಡ ಹಿನ್ನೆಲೆಯಲ್ಲಿ ಹಳೆ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಹೀಗಾಗಿ ತಾತ್ಕಾಲಿಕವಾಗಿ ಅಂದರೆ, ಕಟ್ಟಡ ಕಾಮಗಾರಿ ಪೂರ್ಣವಾಗುವ ತನಕ ಕೋರ್ಟ್ ನ್ಯಾಯಾಧೀಶರ ವಸತಿ ಗೃಹಕ್ಕೆ ಸ್ಥಳಾಂತರಗೊಂಡಿದೆ. ನೂತನ ಕೋರ್ಟ್ ಕಟ್ಟಡಕ್ಕಾಗಿ 15 ಕೋಟಿ ರೂ. ಮಂಜೂರಾಗಿದ್ದು, ಸದ್ಯದಲ್ಲೇ ಕಾಮಗಾರಿಗೆ ಚಾಲನೆ ದೊರೆಯಲಿದೆ.
ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯ, ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ, ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ, ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಸಿ ನ್ಯಾಯಾಲಯ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ಕಚೇರಿ ಬಳಿಯಲ್ಲಿರುವ ಮೂರು ವಸತಿಗೃಹಗಳಿಗೆ ಸ್ಥಳಾಂತರಗೊಂಡಿದೆ.
ಬಾರ್ ಅಸೋಸಿಯೇಶನ್, ಕಾನೂನು ನೆರವು ಸಮಿತಿ, ಮಧ್ಯಸ್ಥಿಕೆ ಕೇಂದ್ರವೂ ಕೋರ್ಟ್ ಸಮೀಪದಲ್ಲಿ ಕಾರ್ಯನಿರ್ವಹಿಸಲಿದೆ. ಕೋರ್ಟ್ಗಾಗಿ ತಮ್ಮ ವಸತಿಗೃಹವನ್ನು ನೀಡಿದ ಮೂವರು ನ್ಯಾಯಾಧೀಶರು ಬಾಡಿಗೆ ಮನೆಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ