ಕಾರ್ಕಳ: ಜೀವ ಬೆದರಿಕೆ ಒಡ್ಡಿದ ಪ್ರಕರಣ: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಶಕ್ಕೆ
Team Udayavani, Jun 14, 2022, 10:25 PM IST
ಕಾರ್ಕಳ : ಕೇಬಲ್ ವ್ಯವಹಾರಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವರಿಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣದ ಆರೋಪಿ 16 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಕಾಶಿಬೆಟ್ಟು ನಿವಾಸಿ ವೇಲು ಎಂಬಾತನನ್ನು ಕಾರ್ಕಳ ಪೊಲೀಸರು ಬೆಳ್ತಂಗಡಿ ಪೊಲೀಸರ ಸಹಕಾರದಿಂದ ಜೂ. 13ರಂದು ವಶಕ್ಕೆ ಪಡೆದಿದ್ದಾರೆ.
ಈತ ಕಾರ್ಕಳದಲ್ಲಿ ಕೇಬಲ್ ವ್ಯಾಪಾರ ನಡೆಸುತ್ತಿದ್ದ ಕುಕ್ಕುಂದೂರು ಹುಡ್ಕೊ ನಿವಾಸಿ ಪ್ರಶಾಂತ್ ನಾಯಕ್ ಅವರಿಗೆ 2006ರಲ್ಲಿ ಚೂರಿ ತೋರಿಸಿ ಬೆದರಿಕೆ ಒಡ್ಡಿದ ಪ್ರಕರಣದ ಆರೋಪಿಯಾಗಿದ್ದ. ಬಳಿಕ ತಲೆಮರೆಸಿಕೊಂಡಿದ್ದ. ಕಾರ್ಕಳದ ನ್ಯಾಯಾಲಯವು ಆರೋಪಿಯ ದಸ್ತಗಿರಿಗಾಗಿ ಬಂಧನ ವಾರಂಟ್ ಹೊರಡಿಸಿತ್ತು. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ವೇಲು ಜೂ. 13ರಂದು ಬೆಳ್ತಂಗಡಿಗೆ ಬಂದಿರುವ ಮಾಹಿತಿ ಪಡೆದ ಕಾರ್ಕಳ ಪೊಲೀಸರು ವಶಕ್ಕೆ ಪಡೆದರು. ಆರೋಪಿಯನ್ನು ಜೂ. 14ರಂದು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇದೇ ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನು ಈ ಹಿಂದೆಯೇ ದಸ್ತಗಿರಿ ಮಾಡಲಾಗಿದೆ. ಡಿವೈಎಸ್ಪಿ ವಿಜಯಪ್ರಸಾದ್, ಸರ್ಕಲ್ ಇನ್ಸ್ಪೆಕ್ಟರ್ ಸಂಪತ್ಕುಮಾರ್ ಮಾರ್ಗದರ್ಶನದಲ್ಲಿ ನಗರ ಠಾಣೆ ಎಸ್ಐ ಪ್ರಸನ್ನಕುಮಾರ್, ಅಪರಾಧ ವಿಭಾಗದ ಎಸ್ಐ ದಾಮೋದರ್, ಎಎಸ್ಐ ರಾಜೇಶ್ ಪಿ. ಎಚ್ಸಿ ಪ್ರಸನ್ನ ಹೆಗ್ಡೆ, ಸಿದ್ದರಾಯ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ : ಪ್ರೇಮ ವಿವಾಹ: ಮೊದಲು ಪೋಷಕರ ತ್ಯಾಗ ನೆನಪಿಸಿಕೊಳ್ಳಿ: ಬುದ್ಧಿ ಮಾತು ಹೇಳಿದ ಹೈಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ