ಕಾರ್ಕಳ: ಆಸ್ತಿಯಲ್ಲಿ ಪಾಲು; ಮೊದಲ ಪತ್ನಿ ಮಗನಿಂದ ಹಲ್ಲೆ, ಬೆದರಿಕೆ
Team Udayavani, Feb 2, 2023, 5:43 PM IST
ಕಾರ್ಕಳ: ಆಸ್ತಿಯಲ್ಲಿ ಪಾಲು ನೀಡುವ ವಿಚಾರದಲ್ಲಿ ತನ್ನ ಗಂಡನ ಮೊದಲ ಪತ್ನಿಯ ಮಗ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದಾಗಿ ಮಿಯ್ಯಾರಿನ ಮಂಗಲಪಾದೆ ನಿವಾಸಿ ಶಕುಂತಲಾ ಎಂಬವರು ದೂರು ನೀಡಿದ ಹಿನ್ನಲೆಯಲ್ಲಿ ನಿತೇಶಕುಮಾರ್, ದೀಪಾ, ರೋಶನ್ ಎಂಬವರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಕುಂತಲಾ ಮಂಗಳಪಾದೆ ಎಂಬಲ್ಲಿ ಗಂಡ ಬಾಲಕೃಷ್ಣ ಪೂಜಾರಿ ಎಂಬವರೊಂದಿಗೆ ವಾಸವಾಗಿದ್ದರು. ಗಂಡನ ಮೊದಲ ಪತ್ನಿಯ ಮಗ ನಿತೇಶ್ ಕುಮಾರ್ ಆಗಾಗ ತನ್ನ ಹೆಂಡತಿಯೊಂದಿಗೆ ಬಂದು ಆಸ್ತಿಯಲ್ಲಿ ಪಾಲು ಕೊಡಬೇಕೆಂದು ತಕರಾರು ತೆಗೆಯುತ್ತಿದ್ದು, ಅದರಂತೆ ಫೆ. 1ರಂದು ರಾತ್ರಿ ನಿತೇಶ್ಕುಮಾರ್ ತನ್ನ ಹೆಂಡತಿ ದೀಪಾ ಮತ್ತು ರೋಶನ್ ಎಂಬವರೊಂದಿಗೆ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ಬೈದು ,ನೀವು ಆಸ್ತಿಯನ್ನು ನಮಗೆ ಬಿಟ್ಟುಕೊಡದಿದ್ದರೆ ನಿಮ್ಮಿಬ್ಬರನ್ನು ಕೊಂದು ಹಾಕುತ್ತೇವೆ ಎಂದು ಬೆದರಿಕೆಯೊಡ್ಡಿ ಮೈಮೇಲೆ ಕೈಹಾಕಿ ಮಾನಭಂಗವುಂಟು ಮಾಡಿ, ಹಲ್ಲೆ ನಡೆಸಿದ್ದಾಗಿ ದೂರಿತ್ತ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್