ವಿಸ್ತರಣೆಯ ಕಾರ್ಕಳ ಉತ್ಸವ ಇಂದು ಸಂಪನ್ನ
Team Udayavani, Mar 22, 2022, 12:51 PM IST
ಕಾರ್ಕಳ: ಭಾಷೆ, ಕಲೆ, ಸಂಸ್ಕೃತಿಗಳ ಸಮಾಗಮದ ಕಾರ್ಕಳ ಉತ್ಸವ ಮಾ.20ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಕ್ತಾಯ ಕಂಡಿತು . ವಿದ್ಯುತ್ ದೀಪಾಲಂಕಾರ, ವಸ್ತು ಪ್ರದರ್ಶನ, ಆಹಾರೋತ್ಸವ, ಬೋಟಿಂಗ್ ಇವುಗಳನ್ನು ಮಾ.22ರ ವರೆಗೆ ವಿಸ್ತರಿಸಲಾಗಿದ್ದು, ಇಂದು ಕಾರ್ಕಳ ಉತ್ಸವ ಮುಕ್ತಾಯ ಸಂಪನ್ನಗೊಳ್ಳಲಿದೆ.
ಉತ್ಸವ ಆರಂಭದ ದಿನಗಳಿಂದ ಮುಕ್ತಾಯಗೊಳ್ಳುವ ಮಾ.20ರ ತನಕವೂ ಪ್ರತಿನಿತ್ಯ ಸಹಸ್ರಾರು ಮಂದಿ ಭೇಟಿ ನೀಡುತ್ತಿದ್ದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಲೇ ಇದ್ದುದರಿಂದ ಜನರ ಉತ್ಸಾಹ ಹೆಚ್ಚಿದ ಕಾರಣಕ್ಕೆ ಸಾರ್ವಜನಿಕರ ಒತ್ತಾಯದಂತೆ ಸಾಂಸ್ಕೃತಿಕ ಉತ್ಸವ ಹೊರತು ಪಡಿಸಿ ಉಳಿದೆಲ್ಲವನ್ನು ಮುಂದುವರಿಸಲಾಗಿತ್ತು. ಈ ಹತ್ತು ದಿನಗಳಲ್ಲಿ ಉತ್ಸವಕ್ಕೆ ಬರಲಾಗದೆ ಉಳಿದವರಿಗೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದಲೂ ಮುಂದುವರೆಸಲಾಗಿತ್ತು. ಸೋಮವಾರ ಕೂಡ ವಸ್ತು ಪ್ರದರ್ಶನ, ಬೋಟಿಂಗ್ ಸ್ಥಳ, ಆಹಾರೋತ್ಸವ ಮಳಿಗೆಗಳಲ್ಲಿ ಸಂಜೆ ವೇಳೆಗೆ ಹೆಚ್ಚಿನ ಪ್ರಮಾಣದಲ್ಲಿ ಜನ ಕಂಡು ಬಂದರು.
ಫಲಪುಷ್ಪ, ಕೃಷಿ ಪ್ರದರ್ಶನ ಇಂದು ಕೊನೆ ಸ್ವರಾಜ್ ಮೈದಾನದ ಬಳಿ ವಿಶೇಷವಾಗಿ ಪುಷ್ಪ ಪ್ರದರ್ಶನ, ಕೃಷಿ ವಸ್ತು ಪ್ರದರ್ಶನಕ್ಕೆ ನೂರಾರು ಮಂದಿ ಭೇಟಿ ನೀಡುತ್ತಿದ್ದಾರೆ. ಪ್ರದರ್ಶನ ಮಾ. 22 (ಇಂದು) ಕೊನೆಯ ದಿನವಾಗಿದೆ. ಮಾ. 20ರಂದು ರಾತ್ರಿ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ, ಬೆಂಗಳೂರಿನ ಪ್ರಭಾತ್ ಕಲಾವಿದರಿಂದ ಕರುನಾಡ ವೈಭವ ಕಾರ್ಯಕ್ರಮ ನಡೆಯುವುದರೊಂದಿಗೆ ಕಾರ್ಕಳ ಉತ್ಸವ 2022ರ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಕ್ತಾಯ ಕಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ